naraayana ಗುರು – ಕೇರಳದ ಸಂಯುಕ್ತ ರಾಜಕೀಯ ಸಂಘಟನೆ

ತಳ ಸಮುದಾಯದ ದಿಕ್ಕನ್ನೇ ಬದಲಿಸಿದ 1935 ರ ಕೇರಳದ ಸಂಯುಕ್ತ ರಾಜಕೀಯ ಸಂಘಟನೆ

  • ಲೋಹಿತ್ ನಾಯಕ
  • 1928 ರಲ್ಲಿ ನಾರಾಯಣ ಗುರುಗಳು
    ದೈವಾದಿನರಾದ ನಂತರ ಗುರುಗಳ ಶಿಷ್ಯರಾದ
    ಸಿ ಕೇಶವನ್ ನೇತ್ರ ತ್ವದಲ್ಲಿ ತಳ ವರ್ಗದ ರಾಜಕೀಯ ಪ್ರಾತಿನಿಧ್ಯ ಕ್ಕಾಗಿ ಹೋರಾಟ ಕಟ್ಟಲಾಯಿತು.
    ಈ ಹೋರಾಟದಲ್ಲಿ ಅವರಿಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗಗಳು ಜೊತೆಯಾದವು. ಈ ಮೂರು ಜನಾಂಗಗಳ ಒಟ್ಟು ಜನಸಂಖ್ಯೆ ತಿರುವಾಂಕೂರು ಸಂಸ್ಥಾನದ ಒಟ್ಟು ಜನಸಂಖ್ಯೆಯ ಮೂರನೇ ಎರಡರಷ್ಟಿತ್ತು. ತಿರುವಾಂಕೂರು ಸಂಸ್ಥಾನದಲ್ಲಿ 1888ರಲ್ಲಿಯೇ ವಿಧಾನಸಭೆ ರಚನೆಯಾಗಿ ಚುನಾವಣೆಗಳು ನಡೆಯುತ್ತಾ ಬಂದಿದ್ದರೂ, 1935ರವರೆಗೆ ನಡೆದ 15 ಚುನಾವಣೆಗಳಲ್ಲಿ ಶೇ.26ರಷ್ಟಿದ್ದ ಈಳವರಲ್ಲಿ (ಈಡಿಗ) ಒಬ್ಬರೂ ಕೂಡ ಆಯ್ಕೆಯಾಗಿರಲಿಲ್ಲ. ಶೇ.22ರಷ್ಟಿದ್ದ ಕ್ರಿಶ್ಚಿಯನ್ ಮತ್ತು ಶೇ.18ರಷ್ಟಿದ್ದ ಮುಸ್ಲಿಮರ ಪ್ರಾತಿನಿಧ್ಯ ಮೂರು-ನಾಲ್ಕರ ಗಡಿ ದಾಟಿರಲಿಲ್ಲ. ಐದು ರೂಪಾಯಿ ತೆರಿಗೆ ನೀಡುವವರು ಮಾತ್ರ ಮತದಾನದ ಹಕ್ಕು ಪಡೆದಿರುವುದು ಈ ಅನ್ಯಾಯಕ್ಕೆ ಕಾರಣವಾಗಿತ್ತು.
  • ಆ ಕಾಲದ ಭೂಒಡೆತನ ಬಹುಪಾಲು ನಾಯರ್ ಮತ್ತು ನಂಬೂದಿರಿಗಳ ( ಬ್ರಾಹ್ಮಣರ ) ಕೈಯಲ್ಲಿದ್ದ ಕಾರಣ ಉಳಿದ ಜನಾಂಗ ಮತದಾನದ ಹಕ್ಕನ್ನು ಪಡೆಯುವುದು ಅಸಾಧ್ಯವಾಗಿತ್ತು. ಇದನ್ನು ಪ್ರತಿಭಟಿಸಲೆಂದೇ ಮೂರು ಜನಾಂಗಗಳು ಕೂಡಿ “ಸಂಯುಕ್ತ ರಾಜಕೀಯ ಸಂಘಟನೆ” ಯನ್ನು ರಚಿಸಿಕೊಂಡು 1935ರ ಚುನಾವಣೆಯನ್ನು ಬಹಿಷ್ಕರಿಸಿದವು. ಈ ಹೋರಾಟದ ಕಾವಿಗೆ ಮಣಿದ ತಿರುವಾಂಕೂರು ಸಂಸ್ಥಾನ ಜಾತಿ ಪ್ರಮಾಣಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಘೋಷಿಸಿತು. ಇದರ ಪರಿಣಾಮ ಈಡಿಗರು,ಮುಸಲ್ಮಾನರು, ಕ್ರಿಶ್ಚಿಯನರು
    ರಾಜಕೀಯ ಪ್ರಾತಿನಿಧ್ಯ ಪಡೆದರು.

  • ಮುಂದೆ ಈಡಿಗ ಸಿ ಕೇಶವನ್ 1950 ರಲ್ಲಿ ತಿರುವಾಂಕೂರ – ಕೋಚಿನ್ ಪ್ರಾಂತ್ಯದ ಮುಖ್ಯಮಂತ್ರಿಗಳಾದರು. ಚುನಾವಣೆಗೆ ನಿಲ್ಲುವ ಹಕ್ಕು ಸಹ ಇಲ್ಲದೆ ಬಳುತ್ತಿದ್ದ ಸಮುದಾಯವೊಂದರ ವ್ಯಕ್ತಿಯೊಬ್ಬ ಕೇವಲ 15 ವರ್ಷಗಳಲ್ಲಿ ಒಂದು ರಾಜ್ಯದ ಮುಖ್ಯಮಂತ್ರಿಯಾಗುತ್ತಾನೆ.
    ಇದು ಸಾಧ್ಯವಾದದ್ದು ನಾರಾಯಣ ಗುರುಗಳ ಚಳುವಳಿಯ ಶಿಕ್ಷಣ ಮತ್ತು ಸಂಘಟನೆಯ ಮಾರ್ಗದಿಂದ. ಕೇರಳಿಗರಿಗೆ ಶಿಕ್ಷಣ ಶತ್ರುಗಳ ಮತ್ತು ಮಿತ್ರರ ಸರಿಯಾದ ಪರಿಚಯಮಾಡಿಸಿತ್ತು. ಸಂಘಟನೆ ಮಿತ್ರರೆಲ್ಲ ಸೇರಿ ಹಕ್ಕಿನ ಹೋರಾಟಕ್ಕೆ ಪ್ರೆರೇಪಿಸಿತ್ತು.
    ಶಿಕ್ಷಣ ಪಡೆದು ಪ್ರಜ್ಞಾವಂತರಾಗಿ ನಿಮ್ಮ ಶತ್ರುಗಳ ಮಿತ್ರರ ಸರಿಯಾದ ಪರಿಚಯ ಮಾಡಿಕೊಳ್ಳಿ.

ಲೋಹಿತ್ ನಾಯಕ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *