naraayana ಗುರು – ಕೇರಳದ ಸಂಯುಕ್ತ ರಾಜಕೀಯ ಸಂಘಟನೆ

ತಳ ಸಮುದಾಯದ ದಿಕ್ಕನ್ನೇ ಬದಲಿಸಿದ 1935 ರ ಕೇರಳದ ಸಂಯುಕ್ತ ರಾಜಕೀಯ ಸಂಘಟನೆ

  • ಲೋಹಿತ್ ನಾಯಕ
  • 1928 ರಲ್ಲಿ ನಾರಾಯಣ ಗುರುಗಳು
    ದೈವಾದಿನರಾದ ನಂತರ ಗುರುಗಳ ಶಿಷ್ಯರಾದ
    ಸಿ ಕೇಶವನ್ ನೇತ್ರ ತ್ವದಲ್ಲಿ ತಳ ವರ್ಗದ ರಾಜಕೀಯ ಪ್ರಾತಿನಿಧ್ಯ ಕ್ಕಾಗಿ ಹೋರಾಟ ಕಟ್ಟಲಾಯಿತು.
    ಈ ಹೋರಾಟದಲ್ಲಿ ಅವರಿಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗಗಳು ಜೊತೆಯಾದವು. ಈ ಮೂರು ಜನಾಂಗಗಳ ಒಟ್ಟು ಜನಸಂಖ್ಯೆ ತಿರುವಾಂಕೂರು ಸಂಸ್ಥಾನದ ಒಟ್ಟು ಜನಸಂಖ್ಯೆಯ ಮೂರನೇ ಎರಡರಷ್ಟಿತ್ತು. ತಿರುವಾಂಕೂರು ಸಂಸ್ಥಾನದಲ್ಲಿ 1888ರಲ್ಲಿಯೇ ವಿಧಾನಸಭೆ ರಚನೆಯಾಗಿ ಚುನಾವಣೆಗಳು ನಡೆಯುತ್ತಾ ಬಂದಿದ್ದರೂ, 1935ರವರೆಗೆ ನಡೆದ 15 ಚುನಾವಣೆಗಳಲ್ಲಿ ಶೇ.26ರಷ್ಟಿದ್ದ ಈಳವರಲ್ಲಿ (ಈಡಿಗ) ಒಬ್ಬರೂ ಕೂಡ ಆಯ್ಕೆಯಾಗಿರಲಿಲ್ಲ. ಶೇ.22ರಷ್ಟಿದ್ದ ಕ್ರಿಶ್ಚಿಯನ್ ಮತ್ತು ಶೇ.18ರಷ್ಟಿದ್ದ ಮುಸ್ಲಿಮರ ಪ್ರಾತಿನಿಧ್ಯ ಮೂರು-ನಾಲ್ಕರ ಗಡಿ ದಾಟಿರಲಿಲ್ಲ. ಐದು ರೂಪಾಯಿ ತೆರಿಗೆ ನೀಡುವವರು ಮಾತ್ರ ಮತದಾನದ ಹಕ್ಕು ಪಡೆದಿರುವುದು ಈ ಅನ್ಯಾಯಕ್ಕೆ ಕಾರಣವಾಗಿತ್ತು.
  • ಆ ಕಾಲದ ಭೂಒಡೆತನ ಬಹುಪಾಲು ನಾಯರ್ ಮತ್ತು ನಂಬೂದಿರಿಗಳ ( ಬ್ರಾಹ್ಮಣರ ) ಕೈಯಲ್ಲಿದ್ದ ಕಾರಣ ಉಳಿದ ಜನಾಂಗ ಮತದಾನದ ಹಕ್ಕನ್ನು ಪಡೆಯುವುದು ಅಸಾಧ್ಯವಾಗಿತ್ತು. ಇದನ್ನು ಪ್ರತಿಭಟಿಸಲೆಂದೇ ಮೂರು ಜನಾಂಗಗಳು ಕೂಡಿ “ಸಂಯುಕ್ತ ರಾಜಕೀಯ ಸಂಘಟನೆ” ಯನ್ನು ರಚಿಸಿಕೊಂಡು 1935ರ ಚುನಾವಣೆಯನ್ನು ಬಹಿಷ್ಕರಿಸಿದವು. ಈ ಹೋರಾಟದ ಕಾವಿಗೆ ಮಣಿದ ತಿರುವಾಂಕೂರು ಸಂಸ್ಥಾನ ಜಾತಿ ಪ್ರಮಾಣಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಘೋಷಿಸಿತು. ಇದರ ಪರಿಣಾಮ ಈಡಿಗರು,ಮುಸಲ್ಮಾನರು, ಕ್ರಿಶ್ಚಿಯನರು
    ರಾಜಕೀಯ ಪ್ರಾತಿನಿಧ್ಯ ಪಡೆದರು.

  • ಮುಂದೆ ಈಡಿಗ ಸಿ ಕೇಶವನ್ 1950 ರಲ್ಲಿ ತಿರುವಾಂಕೂರ – ಕೋಚಿನ್ ಪ್ರಾಂತ್ಯದ ಮುಖ್ಯಮಂತ್ರಿಗಳಾದರು. ಚುನಾವಣೆಗೆ ನಿಲ್ಲುವ ಹಕ್ಕು ಸಹ ಇಲ್ಲದೆ ಬಳುತ್ತಿದ್ದ ಸಮುದಾಯವೊಂದರ ವ್ಯಕ್ತಿಯೊಬ್ಬ ಕೇವಲ 15 ವರ್ಷಗಳಲ್ಲಿ ಒಂದು ರಾಜ್ಯದ ಮುಖ್ಯಮಂತ್ರಿಯಾಗುತ್ತಾನೆ.
    ಇದು ಸಾಧ್ಯವಾದದ್ದು ನಾರಾಯಣ ಗುರುಗಳ ಚಳುವಳಿಯ ಶಿಕ್ಷಣ ಮತ್ತು ಸಂಘಟನೆಯ ಮಾರ್ಗದಿಂದ. ಕೇರಳಿಗರಿಗೆ ಶಿಕ್ಷಣ ಶತ್ರುಗಳ ಮತ್ತು ಮಿತ್ರರ ಸರಿಯಾದ ಪರಿಚಯಮಾಡಿಸಿತ್ತು. ಸಂಘಟನೆ ಮಿತ್ರರೆಲ್ಲ ಸೇರಿ ಹಕ್ಕಿನ ಹೋರಾಟಕ್ಕೆ ಪ್ರೆರೇಪಿಸಿತ್ತು.
    ಶಿಕ್ಷಣ ಪಡೆದು ಪ್ರಜ್ಞಾವಂತರಾಗಿ ನಿಮ್ಮ ಶತ್ರುಗಳ ಮಿತ್ರರ ಸರಿಯಾದ ಪರಿಚಯ ಮಾಡಿಕೊಳ್ಳಿ.

ಲೋಹಿತ್ ನಾಯಕ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *