ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

Thumbnail image

ಕರಾವಳಿಯಲ್ಲಿ ಕಳೆಗಟ್ಟಿದ ಗಣೇಶ ಚತುರ್ಥಿ: ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

ಅವರ್ಸಾ ಗ್ರಾಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪುನೀತ್ ರಾಜ್​​​ಕುಮಾರ್​ ಮೂರ್ತಿ ಅನ್ನು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡುವ ಮಾದರಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಕಾರವಾರ(ಉತ್ತರಕನ್ನಡ): ನಿನ್ನೆ ದೇಶಾದ್ಯಂತ ಗಣೇಶ ಹಬ್ಬ ವಿಜೃಂಭಣೆಯಿಂದ ನಡೆದಿದೆ. ಮನೆ ಮನೆಯಲ್ಲೂ ಗಣಪನ ವಿಗ್ರಹ ತಂದು ಆರಾಧಿಸುವ ಜೊತೆಗೆ ಸಾರ್ವಜನಿಕವಾಗಿಯೂ ವಿಭಿನ್ನ ಬಗೆಯ ವಿನಾಯಕ ಮೂರ್ತಿಗಳನ್ನು ಜನರು ಪ್ರತಿಷ್ಠಾಪಿಸಿದ್ದಾರೆ. ಇಲ್ಲೊಂದು ಟೈ ಹಾಕಿ, ಸೂಟು ಧರಿಸಿ, ನಗುಮೊಗದಿಂದ ಕುಳಿತಿರುವ ದಿ. ಪುನೀತ್​ ರಾಜ್​ಕುಮಾರ್​ ಮೂರ್ತಿ ಜನರನ್ನು ಹೆಚ್ಚು ಆಕರ್ಷಣೆ ಮಾಡಿದೆ.

ಕನ್ನಡದ ಕೋಟ್ಯಾಧಿಪತಿ ಮಾದರಿಯಲ್ಲಿ ಕುಳಿತಿರುವ ಅಪ್ಪು.. ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪುನೀತ್ ರಾಜ್​​​ಕುಮಾರ್​ ಮೂರ್ತಿಯನ್ನು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡುವ ಮಾದರಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ. ಥೇಟ್ ಅಪ್ಪುವನ್ನೇ ಹೋಲುವ ಮೂರ್ತಿಯಿದು. ಇದರ ಫೋಟೋ, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇದು ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ 39ನೇ ಗಣೇಶೋತ್ಸವ ಆಗಿದೆ.

ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

ಮೂರ್ತಿ ತಯಾರಿಸಿದ ಕಲಾವಿದ ದಿನೇಶ ಮೇತ್ರಿ.. ಪುನೀತ್ ರಾಜ್​ಕುಮಾರ್ ಅವರ ಮೂರ್ತಿಯನ್ನು ತಯಾರು ಮಾಡಿರೋದು ಅವರ್ಸಾ ಗ್ರಾಮದ ಹಿರಿಯ ಕಲಾವಿದ ಕುಮ್ಮಣ್ಣ ಮೇತ್ರಿ ಮನೆತನದ ದಿನೇಶ ಮೇತ್ರಿ. ಮೇತ್ರಿ ಕುಟುಂಬ ಮೂರ್ತಿ ತಯಾರಿಕೆಯಲ್ಲಿ ಹಿಂದಿನಿಂದಲೂ ಪ್ರಖ್ಯಾತಿ ಗಳಿಸಿದ್ದಾರೆ. ವರ್ಷವಿಡೀ ಈ ಕುಟುಂಬದಲ್ಲಿ ಮೂರ್ತಿಗಳ ನಿರ್ಮಾಣ ಕಾರ್ಯ ನಡೆಯುತ್ತಲೇ ಇರುತ್ತದೆ. ಈ ಕುಟುಂಬದ ದಿನೇಶ ಮೇತ್ರಿ ಅವರು ಪುನೀತ್ ಹಾಗೂ ಗಣಪನನ್ನು ಕನ್ನಡದ ಕೋಟ್ಯಾಧಿಪತಿಯ ಸೆಟ್‌ನಲ್ಲಿ ಕೂತಂತೆ ತಯಾರು ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ನಗು ಮೊಗದ ಪುನೀತ್ ಕಂಡು ಜನರು ಖುಷ್..​ ಈ ಎರಡೂ ಮೂರ್ತಿಗಳು 9 ಫೀಟ್ ಎತ್ತರ ಇವೆ. ಒಂದು ತಿಂಗಳ ಕಾಲ ದಿನೇಶ ಹಾಗೂ ಅವರ ಕುಟುಂಬದ ಕಲಾವಿದರು ಸೇರಿ ಪುನೀತ್ ಹಾಗೂ ಗಣಪನ ಮೂರ್ತಿಯನ್ನು ಸಿದ್ಧಪಡಿಸಿದ್ದಾರೆ. ಮೂರ್ತಿ ಥೇಟ್ ಪುನೀತ್​ ಅವರನ್ನೇ ಹೋಲುವಂತಿದ್ದು ಸೂಟು, ಕೈಗೆ ವಾಚು, ಕಣ್ಣಿಗೆ ಕಪ್ಪು ಕನ್ನಡಕದ ಜೊತೆಗೆ ಟೈ ಕಟ್ಟಿ ಕುಳಿತಿರುವ ಮೂರ್ತಿ ಎಂಥಹವರನ್ನೂ ಬೆರಗುಗೊಳಿಸುವಂತಿದೆ. ಅಪ್ಪುವನ್ನು ಕಳೆದುಕೊಂಡ ಅಭಿಮಾನಿ ಬಳಗ ನಗುಮೊಗದ ಪುನೀತ್ ಮೂರ್ತಿ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಪ್ರಯತ್ನದಿಂದ ನೆಚ್ಚಿನ ನಟನನ್ನು ಕಳೆದುಕೊಂಡಿರುವ ಅಭಿಮಾನಿಗಳಿಗೆ ಮತ್ತೆ ಅಪ್ಪುವನ್ನು ಮೂರ್ತಿ ಮೂಲಕ ಕಣ್ತುಂಬಿಕೊಳ್ಳಲು ಅವಕಾಶ ಸಿಕ್ಕಂತಾಗಿದೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿ ಪುನೀತ್ ಅವರ ಮೂರ್ತಿ ವೀಕ್ಷಿಸಿದ್ದಾರೆ. ಮೂರ್ತಿ ಬಳಿ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *