ಜವಾಬ್ದಾರಿ ಹೆಚ್ಚಿಸುವ ಪ್ರಶಸ್ತಿಗಳು….




ದ್ವೀಪದ ನನ್ನ ಇಬ್ಬರು ಶಿಕ್ಷಕ ಮಿತ್ರರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಬಂದಿದೆ. ಶಿವಮೊಗ್ಗದಲ್ಲೀ ನಡೆದ ಸಮಾರಂಭದಲ್ಲೀ ಗೌರವ ಸ್ವೀಕರಿಸಿರುವ ಚಂದ್ರಪ್ಪ ಮತ್ತು ಮೂಕಪ್ಪ ಶಿಕ್ಷಕರು ಮೂಲತಃ ಶರಾವತಿ ನದಿ ದಂಡೆಯ ಸ್ಥಳೀಯರೆ ಆಗಿದ್ದಾರೆ. ಇಬ್ಬರೂ ಕುದುರೂರು ಪಂಚಾಯ್ತಿ ವ್ಯಾಪ್ತಿಯಲ್ಲೆ ಪಿಯುಸಿ ತನಕ ಓದಿ ಡಿಗ್ರಿ ಮುಗಿಸಿದ ಮೊದಲ ತಲೆಮಾರಿನರಾಗಿ ತಮ್ಮ ಕುಟುಂಬದ ಕಷ್ಟ ನಷ್ಟ ನಡುವೆಯು ಶಿಕ್ಷಕರಾಗಿ ದಶಕ ಹೆಚ್ಚು ಕಾಲದಿಂದ ಸೇವೆಯಲ್ಲಿ ಇದ್ದಾರೆ.
ಈಗ ಮೇಷ್ಟ್ರುಗಳಿಗೆ ಹೆಚ್ಚು ಕೆಲಸ ಇರುವ ಕಾಲ. ಸುತ್ತಲು ಹಲವು ತರದ ನಿರ್ವಾತ ಮತ್ತು ಶುಷ್ಕತೆ ಸುತ್ತಿದೆ. ಈ ನಡುವೆ ಶಿಕ್ಷಣ ಇಲಾಖೆ ಹಿರಿಯ ಶಿಕ್ಷಕರನ್ನ ಪಾಠ ಮಾಡಲು ಬಿಡದೇ ಇಲಾಖೆ ಬೇರೇ ಬೇರೆ ಹುದ್ದೆಯಲ್ಲಿ ಅಲೆಮಾರಿ ಆಗಿಸಿದೆ. ಶಾಲೆಯಲ್ಲಿ ಇರುವ ಶಿಕ್ಷಕರು ಗುಮಾಸ್ತ ಕೆಲಸವನ್ನ ಬಳವಳಿ ನೀಡಲಾಗಿದೆ. ಕೆಲಸ ಒತ್ತಡ ನಡುವೆ ಮೇಸ್ಟ್ರುಗಳು ಹುಟ್ಟಲು ಕಷ್ಟ ಇರುವ ರೀತೀ ಇಲಾಖೆ ಒಳ ರಚನೆ ಇದೆ. ಈ ನಡುವೆ ತಮ್ಮೊಳಗಿನ ಬಹುಮುಖ ಪ್ರತಿಭೆ ಕಾಯ್ದುಕೊಂಡು ಅದನ್ನು ವಿದ್ಯಾರ್ಥಿಗಳಿಗೆ ತಲುಪಿಸುತ್ತಾ, ಅವರನ್ನ ಕಟ್ಟುತ್ತಲೆ ಸಮಾಜ ಮುಖಿ ಆಗಿ ಹಲವು ಶಿಕ್ಷಕರು ತೊಡಗಿಸಿಕೊಂಡಿದ್ದಾರೆ.




ಈ ನಿಟ್ಟಿನಲ್ಲಿ ಈ ಅವಳಿ ಶಿಕ್ಷಕರು ಸಾಕಷ್ಟು ಹಾದಿ ಸವೆಸಿದ್ದಾರೆ. ಚಂದ್ರಪ್ಪ ಮತ್ತು ಮೂಕಪ್ಪ ಶಿಕ್ಷಕರು ಬಹುಮುಖಿ ಪ್ರತಿಭೆಗಳು. ಚಂದ್ರಪ್ಪನವರು ಯಕ್ಷಗಾನ ಕಲಾವಿದರು, ಕವಿತೆ ಬರೆಯುತ್ತ, ಆಗಾಗ ಅವುಗಳಿಗೆ ರಾಗ ಜೋಡಿಸುವ ಕಲಾವಿದರ ಜತೆ ಹಾಡಿಸುತ್ತ, ಮೊಗದೊಮ್ಮೆ ಕ್ರೀಡಾ ಪಟುವಾಗೀ ಇನ್ನೊಮ್ಮೆ ಕ್ರೀಡಾ ಮತ್ತು ಸಾಂಸ್ಕೃತಿಕ ವಿಭಾಗದ ಆಯೋಜಕ ಆಗಿ ಕಾಣಿಸಿಕೊಳ್ಳುವವರು.
ಅವರೊಳಗೆ ಒಂದು ಒಳಿತಿನ ತುಡಿತ ಇದೆ. ಈ ಕಾರಣಕ್ಕೆ ವಳುರು ಎನ್ನುವ ದುರ್ಗಮ ಹಳ್ಳಿಗೆ ಕಿಚ್ಚ ಸುದೀಪ್ ತಂಡ ಕರೆದುಕೊಂಡು ಹೋಗಿ ಆ ಶಾಲೆ ಯು ಸೇರಿ ಕೆಲ ಶಾಲೆಗಳನ್ನ ದತ್ತು ತೆಗೆದುಕೊಳ್ಳುವ ಹಾಗೆ ಮಾಡಬಲ್ಲರು. ಸಿಗಂದೂರು ದೇವಾಲಯದ ಚಿತ್ತ ಸರ್ಕಾರಿ ಶಾಲೆಯತ್ತ ಯೋಜನೆ ಅಡಿ ಸ್ವತಃ ತಾವೇ ಶಿಕ್ಷಕರ ತಂಡ ರಚಿಸಿ ರಜೆ ದಿನದಲ್ಲಿ ಶಾಲೆಗೆ ಬಣ್ಣ ಬಳಿದವರು.


ಮೂಕಪ್ಪನವರು ಓದುತ್ತಾ ಬರೆಯುತ್ತಾ ತನ್ನ ಶಾಲೆಯ ಬಹುಮುಖಿ ಅಭಿವೃದ್ದಿಗೆ ಯೊಜನೆ ರೂಪಿಸುತ್ತಾ ಕ್ರಿಯಾಶೀಲರಾಗಿರುವರು. ಸರ್ಕಾರಿ ಶಾಲೆಗಳು ಸುಣ್ಣ ಬಣ್ಣ ಇಲ್ಲದೇ ಮಾಸಲು ಆಗುತ್ತಾ ಇರುವಾಗ ಕನ್ನಡ ಮನಸುಗಳ ಜತೆ ಸೇರಿ ಹೊಸ ಬಣ್ಣ ತಂದವರು. ಅವರು ಭೋಧನೆ ಮಾಡುತಾ ಇರುವ ಬ್ಯಾಕೊಡು ಹಿರಿಯ ಪ್ರಾಥಮಿಕ ಶಾಲೆ ಎದುರು ಹೋದರೆ ಒಮ್ಮೆ ನಿಂತು ನೋಡಬೇಕು ಹಾಗೆ ಗಮನ ಸೆಳೆಯುತ್ತದೆ. ಇಲಾಖೆ ಅಮೃತ ಯೊಜನೆ ಅಡಿಯಲ್ಲಿ ಡಿಜಿಟಲೀ ಕರಣ ಆಗುತ್ತಾ ಇದ್ದರೆ ಹಳೆಯ ವಿದ್ಯಾರ್ಥಿಗಳ ಸಹಕಾರ ಪಡೆದು ಸಮುದಾಯ ಸಹಭಾಗಿತ್ವ ಮಾಡುತ್ತ ಶಾಲೆಗೆ ಹೊಸ ಆಕಾರ ಕೊಡುತ್ತಾ ಸಾಗಿದ್ದಾರೆ.
ಈ ಇಬ್ಬರೂ ಶಿಕ್ಷಕರು ಉತ್ತಮ ವಾಗ್ಮಿಗಳು ವಿದ್ಯಾರ್ಥಿ ಪ್ರೇಮಿ ಮೇಸ್ಟ್ರುಗಳಾಗಿ ನವಚೇತನ ಚಾರಿಟೇಬಲ್ ಟ್ರಸ್ಟ್, ಸಿಗಂದೂರು ಚೌಡೇಶ್ವರಿ ಟ್ರಸ್ಟ, ಟೆಕ್ಸಾಸ್ ಇನ್ಸ್ಟ್ರುಮೆಂಟ್, ಕನ್ನಡ ಮನಸುಗಳು, ಮರ ಸಂಸ್ತೆ ಇತ್ಯಾದಿ ಸಂಸ್ಥೆಯ ಮೂಲಕ ಶಾಲಾ ಮಕ್ಕಳಿಗೆ ವರ್ಷ ವರ್ಷ ಶೈಕ್ಷಣಿಕ ಪರಿಕರ ಬ್ಯಾಗು, ಪುಸ್ತಕ, ಪೆನ್ನು ಇತ್ಯಾದಿ ಪಡೆಯುವ ಮೂಲಕ ಪೋಷಕರ ಹೊರೆ ಕಡಿಮೆ ಮಾಡುತ್ತಾ ಸರ್ಕಾರಿ ಶಾಲೆಗಳ ಕಡೆ ಪೋಷಕರು ಭರವಸೆ ಮೂಡುವಂತೆ ಮಾಡಿದ್ದಾರೆ. ಸರ್ಕಾರಿ ಶಾಲೆ ಉಳಿಸುವುದು ಅಂದರೆ ಇದೆ ತಾನೇ.


ಈ ಎಲ್ಲ ಇವರ ಹೆಜ್ಜೆಗಳು ಪ್ರಶಸ್ತಿಗೆ ಕಾರಣ ಆಗಿವೆ ಎನ್ನುವುದು ನನ್ನ ಭಾವನೆ.
ಇಬ್ಬರೂ ಸ್ನೇಹಿತರಿಗೆ ಮತ್ತೊಮ್ಮೆ ಶುಭಾಶಯಗಳು. ನಮ್ಮ ನಿಮ್ಮೆಲ್ಲರ ಪರವಾಗಿ.
ಪ್ರಶಸ್ತಿಗಳು ಜವಬ್ದಾರಿ ಹೆಚ್ಚಿಸುತ್ತವೆ. ಇನ್ನಷ್ಟು ಪರಿಪಕ್ವತೆ ಕಡೆ ಅವು ನಮ್ಮನ್ನು ಕೊಂಡೊಯ್ಯಬೇಕು. ಈ ಭರವಸೆಯಿಂದಲೆ ನಾನು ಈ ಬರಹಕ್ಕೆ ವಿಮರ್ಷೆಯನ್ನ ಸೇರಿಸಿಲ್ಲ. ಇನ್ನಷ್ಟು ಸ್ಪಷ್ಟವಾಗಿ, ಮಿತಿಗಳನ್ನು ದಾಟಿ ಇನ್ನಷ್ಟು ಕ್ರಿಯಾಶೀಲರಾಗಿ ಎನ್ನುವ ಸಲಹೆ ಇದ್ದೇ ಇದೆ. ಶಿಕ್ಷಕರ ಬೆನ್ನು ಬಾಗಬಾರದು ಯಾವತ್ತಿಗೂ ಎನ್ನುವ ವಾದ ನನ್ನದು. ಇಂತಾ ವಿಚಾರಗಳನ್ನ ಎದುರು ಕೂತು ಹೀಗಲ್ಲ ಹೀಗೆ ಎಂದು ವಿಮರ್ಶೆ ಮಾಡಿದರೆ ಕೇಳುವಷ್ಟು ಸಹನೆ ಮತ್ತು ವಿನಯವಂತಿಕೆ ಇಟ್ಟುಕೊಂಡಿರುವ, ಒಳಿತಿನ ಆಶಯಕ್ಕೆ ಸದಾ ಕಾಲ ಜತೆ ಆಗುವ ಇಬ್ಬರು ಸ್ನೇಹಿತರು ವಯಕ್ತಿಕವಾಗಿ ನನ್ನ ಗೌರವಿಸಿ ಪ್ರೀತಿಸುವ ಕಾರಣ ಸ್ವಲ್ಪ ಸಮಯ ತೆಗೆದುಕೊಂಡೇ ಈ ಮಾತು ದಾಖಲಿಸಿರುವೆ.
ನಿಮ್ಮ ಜವಾಬ್ದಾರಿಗಳು ಹೆಚ್ಚಾಗಿವೆ.
ಶುಭಾಶಯಗಳು ಇಬ್ಬರಿಗೂ… ಪ್ರಶಸ್ತಿ ಪಡೆದ ಎಲ್ಲರಿಗೂ….
ಜಿ. ಟಿ. ತುಮರಿ
06-09-202

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *