ಬ್ಯಾಂಕ್​ಗೆ ವಂಚಿಸಿ ಹೆಂಡತಿ ಖಾತೆಗೆ 2ಕೋಟಿಗೂ ಹೆಚ್ಚು ಹಣ  ವರ್ಗಾವಣೆ: ನಾಪತ್ತೆಯಾದ ಅಧಿಕಾರಿ!

ಬ್ಯಾಂಕ್ ಆಫ್ ಬರೋಡಾ ಸಹಾಯಕ ವ್ಯವಸ್ಥಾಪಕನೊಬ್ಬ ಬ್ಯಾಂಕ್​ಗೆ ವಂಚನೆ ಮಾಡಿ ಬ್ಯಾಂಕ್​ನಿಂದ ಅಕ್ರಮವಾಗಿ 2.70 ಕೋಟಿ ಹಣ ಪಡೆದು ಕಾಣೆಯಾಗಿದ್ದು, ವಂಚನೆ ಆರೋಪದಡಿ ಆರೋಪಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಕಾರವಾರ: ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಸಹಾಯಕ ವ್ಯವಸ್ಥಾಪಕನೋರ್ವ ಅಕ್ರಮವಾಗಿ ಬ್ಯಾಂಕ್​​ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.70 ಕೋಟಿ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ ಆಂಧ್ರಪ್ರದೇಶದ ಅನಂತಪೂರ್​ ಮೂಲದ ಕುಮಾರ ಬೋನಾಲ ಎಂಬಾತ ಕಳೆದ ಏಪ್ರಿಲ್ 7ರಿಂದ ಸೆಪ್ಟೆಂಬರ್ 5ರ ನಡುವೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ. ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು, ಆಂಧ್ರದ ಚಿರಲಾದ ಎಸ್ಬಿಐ ಬ್ಯಾಂಕ್​ನಲ್ಲಿ ಖಾತೆ ಹೊಂದಿರುವ ತಮ್ಮ ಪತ್ನಿ ರೇವತಿ ಗೊರ್ರೆಯ ಖಾತೆಗೆ ಬ್ಯಾಂಕ್​ನಿಂದ ಅಕ್ರಮವಾಗಿ 2.70 ಕೋಟಿ ರೂ. ಹಣ ವರ್ಗಾವಣೆ ಮಾಡಿ ವಂಚನೆ ಮಾಡಿದ್ದಾನೆ.

ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ ಪೊಲೀಸ್​ ಠಾಣೆಗೆ​ ದೂರು ನೀಡಿದ್ದಾರೆ. ಆದರೆ ಆರೋಪಿ ನಾಪತ್ತೆಯಾಗಿದ್ದಾನೆ. ಇನ್ನು ಪ್ರಕರಣ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್​ ಡಿ ಪೆನ್ನೇಕರ್ ಮಾಹಿತಿ ನೀಡಿದ್ದಾರೆ.

ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಸಹಾಯಕ ವ್ಯವಸ್ಥಾಪಕನಾಗಿದ್ದ ಆಂಧ್ರಪ್ರದೇಶ ಮೂಲದ ಕುಮಾರ ಬೋನಾಲ ಇತರ ಸಿಬ್ಬಂದಿಯ ಲಾಗಿನ್ ಪಡೆದು ಅವರಿಗೆ ಗೊತ್ತಿಲ್ಲದಂತೆ ಅಕ್ರಮವಾಗಿ ಬ್ಯಾಂಕ್ ಖಾತೆಯಿಂದ 2.70 ಕೋಟಿ ರೂ ಹಣ ವರ್ಗಾವಣೆ ಮಾಡಿ ಬ್ಯಾಂಕಿಗೆ ವಂಚನೆ ಮಾಡಿದ್ದಾನೆ.

ಪ್ರಕರಣ ಇತ್ತೀಚಿಗೆ ಬೆಳಕಿಗೆ ಬಂದಿದ್ದು, ಈ ಕುರಿತು ಶಾಖಾ ವ್ಯವಸ್ಥಾಪಕರು ಆರೋಪಿ ವಿರುದ್ದ ಯಲ್ಲಾಪುರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇನ್ನು ಅವರ ಪತ್ನಿ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸುಮನ್​ ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *