ಪ್ರಸ್ತುತ ಸಾಮಾಜಿಕ,ರಾಜಕೀಯ ಬಿಕ್ಕಟ್ಟುಗಳಿಗೆ ನಾಗು ಚಿಂತನೆಯೇ ಪರಿಹಾರ & local news

ಪ್ರಸ್ತುತ ಸಾಮಾಜಿಕ,ರಾಜಕೀಯ,ಧಾರ್ಮಿಕ ಬಿಕ್ಕಟ್ಟುಗಳಿಗೆಲ್ಲಾ ನಾರಾಯಣಗುರುಗಳ ಚಿಂತನೆ,ದಾರಿಯಲ್ಲಿಯೇ ಪರಿಹಾರವಿದೆ ಎಂದು ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ ಹೇಳಿದ್ದಾರೆ. ಸಿದ್ಧಾಪುರದ ಕೋಲಶಿರ್ಸಿ ಗುಡ್ಡಕೇರಿ ಮಾರಿಕಾಂಬಾ ಗೆಳೆಯರ ಬಳಗ ತಾಲೂಕು ಬಿ.ಎಸ್.ಎ ನ್.ಡಿ.ಪಿ. ಸಹಯೋಗದಲ್ಲಿ ನಡೆಸಿದ ನಾರಾಯಣ ಗುರು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದ ಅವರು

ನಾರಾಯಣ ಗುರುಗಳು ಸರಿಸುಮಾರು ಎರಡು ಶತಮಾನಗಳ ಹಿಂದೆ ಅಂದಿನ ಅಧಾರ್ಮಿಕತೆ, ಕಂದಾಚಾರ, ಶೋಷಣೆಗಳ ವಿರುದ್ಧ ಸಂಘರ್ಷಕ್ಕೆ ಇಳಿಯದೆ ಪರ್ಯಾಯ ವ್ಯವಸ್ಥೆಯ ಸ್ಥಾಪನೆಗೆ ಪ್ರಯತ್ನಿಸಿ ಗೆದ್ದರು. ಮಹಾತ್ಮಾ ಗಾಂಧಿಯವರ ಬಹುಮುಖಿ ಹೋರಾಟದಂತೆ ನಾರಾಯಣ ಗುರುಗಳ ಚಳವಳಿ ಆಗಿನ ಶೋಷಣೆ, ಜಾತ್ಯಾಂಧತೆ,ಕ್ರೂರ ನೀತಿ-ನಿಯಮಗಳ ವಿರುದ್ಧ ಹೋರಾಡುತ್ತಾ ಕೇರಳದ ಪಟ್ಟಭದ್ರರ ರಾಜಕೀಯವನ್ನು ಕಿತ್ತೆಸೆದು ಹೊಸ ಮುಂದುವರಿದ ಕೇರಳದ ಪ್ರಗತಿಗೆ ಕಾರಣವಾಯಿತು. ಆಗಿನ ಅರಸೊತ್ತಿಗೆ, ಮೇಲ್ಜಾತಿ ಪ್ರಣೀತ ಮನುವಾದದ ರೀತಿಯಲ್ಲಿಯೇ ಈಗ ಮನುವಾದ ಭಾರತವನ್ನು ಹಿಂಸಿಸುತ್ತಿದೆ. ಭಾರತವನ್ನು ಮನುವಾದಿಗಳು, ಮನುವಾದದ ಅಪಾಯದಿಂದ ಪಾರುಮಾಡಲು ಅಂದಿನ ಕೇರಳ ಮಾದರಿಯ ನಾರಾಯಣ ಗುರುಗಳ ತತ್ವ,ಆದರ್ಶಗಳ ಪಾಲನೆಯಿಂದ ಮಾತ್ರ ಸಾಧ್ಯ ಎಂದರು.

ಮನುವಾದಿಗಳು ದೇವರು ಧರ್ಮ,ಆಚರಣೆ,ನಂಬಿಕೆಗಳ ಆಧಾರದಲ್ಲಿ ಬಹುಸಂಖ್ಯಾತರನ್ನು ನಿಯಂತ್ರಿಸುತ್ತಾರೆ. ಈ ಅಸ್ತ್ರಗಳು ಅವರ ರಾಜಕೀಯ ಹತಾರಗಳು ಇವುಗಳಿಂದ ಈ ದೇಶ ಈಗ ಉಳ್ಳವರು, ಮೇಲ್ವರ್ಗದ ಜಾಗೀರಾಗಿದೆ. ಈ ಅಸಮಾನ ವ್ಯವಸ್ಥೆ ಬದಲಾಗದೆ ಭವಿಷ್ಯವಿಲ್ಲ. ಆ ಕಾಲದಲ್ಲಿ ನಾರಾಯಣ ಗುರುಗಳು ಮಾಡಿದ ಜಾದೂ ಈ ಕಾಲದಲ್ಲಿ ಹೆಚ್ಚು ಅಗತ್ಯ ಪ್ರಸ್ತುತ ಎಂದು ವಿವರಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪತ್ರಕರ್ತ ನಾಗರಾಜ್‌ ಮಾಳ್ಕೋಡು ಮಾತನಾಡಿ ಇತ್ತೀಚಿನ ದಿನಗಳಲ್ಲಿ ನಾರಾಯಣ ಗುರುಗಳ ಚಿಂತನೆ, ಹೋರಾಟದ ದಾರಿಗೆ ಹೆಚ್ಚಿನ ಒಲುವು ವ್ಯಕ್ತವಾಗುತ್ತಿದೆ ಇದರಿಂದ ಜಾಗೃತಿಯಾಗುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕಾ ಬಿ.ಎಸ್.ಎನ.ಡಿ.ಪಿ. ಅಧ್ಯಕ್ಷ

ವಿನಾಯಕ ನಾಯ್ಕ ಬಿ.ಎಸ್.ಎನ್.ಡಿ.ಪಿ. ಕಾರ್ಯಚಟುವಟಿಕೆ, ಗುರಿಗಳನ್ನು ವಿವರಿಸಿದರು. ಸೋಮಶೇಖರ್ ನಾಯ್ಕ ಸ್ವಾಗತಿಸಿದ ಕಾರ್ಯಕ್ರಮಕ್ಕೆ ರವಿಕುಮಾರ್‌ ಕೊಠಾರಿ ನಿರೂಪಿಸಿ, ವಂದಿಸಿದರು.

ಸಿದ್ದಾಪುರ: ಕೋರ್ಟ್ ಆವರಣದಲ್ಲಿ ನಡೆದ ರಾಷ್ಟ್ರೀಯ ಪೋಷಣ ಅಭಿಯಾನದ ಪೋಷಣ ರಥಕ್ಕೆ ಸಿವಿಲ್ ನ್ಯಾಯಾಧೀಶ ತಿಮ್ಮಯ್ಯ ಜಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಈ ಅಭಿಯಾನದ ಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಕಮಲಾಕ್ಷ ಡಿ, ಸರಕಾರಿ ಅಭಿಯೋಜಕ ಚಂದ್ರಶೇಖರ್ ಎಚ್ ಎಸ, ನ್ಯಾಯ ವಾದಿಗಳ ಸಂಘದ ಅಧ್ಯಕ್ಷ ಜೆ. ಜಿ. ಹೆಗಡೆ, ಸಿಡಿಪಿಓ ಶ್ರೀ ಮತಿ ಪೂರ್ಣಿಮಾ ಆರ್, ಹಿರಿಯ ನ್ಯಾಯ ವಾದಿ ಎನ್ ಡಿ ನಾಯ್ಕ, ವಕೀಲರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


ಸಿದ್ದಾಪುರ: ತಾಲೂಕ ಪಂಚಾಯತ್ ಸಭಾಭವನದಲ್ಲಿ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ಆರ್ಥಿಕ ಸಾಕ್ಷರತಾ ಕಾರಕ್ರಮ ನಡೆಯಿತು.
ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರು ಶಿವಶಂಕರ ಎನ್ ಕೆ ಆರ್ಥಿಕ ಸಾಕ್ಷರತೆ ಕುರಿತು ಮಾಹಿತಿ ನೀಡಿದರು. ಬ್ಯಾಂಕ್ ನಲ್ಲಿ ಖಾತೆಯ ನಿರ್ವಹಣೆ, ಆಧುನಿಕ ಸೌಲಭ್ಯ ಗಳ ಬಳಕೆ, ಎಟಿಎಂ ಕಾರ್ಡ್ ನ ಬಳಕೆ, ಪ್ರಧಾನ ಮಂತ್ರಿ ಜೀವನ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷಾ ಭೀಮಾ ಯೋಜನೆ, ಸ್ವ ಉದ್ಯೋಗ ತರಬೇತಿ ಗಳ ಕುರಿತು ಮಾಹಿತಿ ನೀಡಿದರು.
ಕ್ರಷಿ ಇಲಾಖೆಯ ಉದಯ ತೆಂಬದ ಇಲಾಖೆಯಿಂದ ಸಿಗುವ ಸೌಲಭ್ಯ ಗಳು ಹಾಗೂ ಭತ್ತದ ಬೆಳೆಗೆ ಬರಬಹುದಾದ ರೋಗಗಳು ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಎಂಬಿಕೆ, ಎಲ್. ಸಿ. ಆರ್. ಪಿ, ಕೃಷಿ ಸಖಿ, ಪಶು ಸಖಿ, ಬಿ. ಸಿ ಸಖಿ, ಹಾಗೂ ಎಫ್ ಎಲ್ ಸಿ ಆರ್ ಪಿ ಸದಸ್ಯರು ಪಾಲ್ಗೊಂಡಿದ್ದರು.
ತಾಲೂಕು ಯೋಜನಾಧಿಕಾರಿ ಬಸವರಾಜ, ತಾಲೂಕು ಪಂಚಾಯತ್ ವ್ಯವಸ್ಥಾಪಕ ನಾಗರಾಜ ಜೋಕನಲ್, ಎನ್ ಎಲ್ ಆರ್ ಎಂ ನ ಮಾಲತಿ ನಾಯ್ಕ, ಉಷಾ, ಹೆಡ್ ಕಾನಸ್ಟೇಬಲ್ ಸಂಗೀತ, ಕಾನಸ್ಟೇಬಲ್ ರೇಖಾ ಹಾಗೂ ಮಾನಸ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *