ಅಡಕೆ ಕೊಳೆ ರೋಗ : ಮರೀಚಿಕೆಯಾಗಿದೆ ಪರಿಹಾರ

nut-blight-disease-at-uttharakannada

ಉತ್ತರ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಕೊಳೆರೋಗಕ್ಕೆ ತುತ್ತಾಗಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಅಡಕೆ ಬೆಳೆಗೆ ಸರ್ಕಾರದ ಪರಿಹಾರ ಮಾತ್ರ ಮರೀಚಿಕೆಯಾಗಿದೆ.

ಶಿರಸಿ (ಉತ್ತರಕನ್ನಡ) : ಅತಿಯಾದ ಮಳೆ, ಆಗಾಗ ಬಂದು ಹೋಗುವ ಬಿಸಿಲು ಮಲೆನಾಡಿನ ಪ್ರಮುಖ ಬೆಳೆ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಅಡಕೆ ಬೆಳೆ ಹಾನಿಗೆ ಅಲ್ಪ ಮೊತ್ತದ ವಿಮೆ ಸೌಲಭ್ಯ ಬಿಟ್ಟರೆ ಹಾನಿಗೀಡಾಗುವ ಬೆಳೆಗೆ ಪರಿಹಾರ ನೀಡಲು ಸರ್ಕಾರದಿಂದ ಸ್ಪಷ್ಟ ಮಾರ್ಗಸೂಚಿ ಇಲ್ಲ. ಕಾರಣ ಕೊಳೆರೋಗ ಪರಿಹಾರ ಎನ್ನುವುದು ಕೃಷಿಕರಿಗೆ ಮರೀಚಿ ಕೆಯಾಗಿದೆ.

ಪ್ರತಿ ವರ್ಷ ಸಾವಿರಾರು ಹೆಕ್ಟೇರ್ ಅಡಕೆ ಬೆಳೆ ಕೊಳೆ ರೋಗದಿಂದ ನಾಶವಾಗುತ್ತದೆ. ಆದರೆ, ಅದಕ್ಕೆ ಪರಿಹಾರ ನೀಡಲು ಸರ್ಕಾರದ ಕಾನೂನಡಿ ಅವಕಾಶವಿಲ್ಲ. ಈ ಬಗ್ಗೆ ಪ್ರತಿ ವರ್ಷ ತೋಟಗಾರಿಕಾ ಇಲಾಖೆಗೆ ಪ್ರಸ್ತಾವನೆ ಕಳುಹಿಸಿದರೂ, ಪರಿಹಾರ ಬರುವ ಭರವಸೆಯೇ ಇಲ್ಲದಂತಾಗಿದೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಿಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ 32 ಸಾವಿರ ಹೆಕ್ಟೇರ್ ಅಡಕೆ ಪ್ರದೇಶವಿದೆ. ಅಂದಾಜು 3,900 ಹೆಕ್ಟೇರ್ ಪ್ರದೇಶದಷ್ಟು ಹಾನಿಯಾಗಿದೆ. ಅತಿವೃಷ್ಟಿ ಕಾರಣಕ್ಕೆ ಉಂಟಾದ ಕೊಳೆರೋಗಕ್ಕೆ ಪರಿಹಾರ ನೀಡಲು ಸರ್ಕಾರದ ನಿಯಮದಲ್ಲಿ ಅವಕಾಶ ಇಲ್ಲ.ಇದಕ್ಕಾಗಿಯೇ ಪ್ರತ್ಯೇಕ ಸಹಾಯಧನ ಘೋಷಣೆ ಆಗಬೇಕಿರುವ ಕಾರಣ ಪರಿಹಾರ ಸಿಗುವುದು ಕಷ್ಟವಾಗಿದೆ.

ಇನ್ನು ಈ ಕೊಳೆರೋಗ ಪರಿಹಾರ ಎನ್ನುವುದು ಸಿದ್ಧರಾಮಯ್ಯ ಸರ್ಕಾರದಲ್ಲಿ ಮಾತ್ರ ನೀಡಲಾಗಿತ್ತು‌.ಈ ಬಾರಿ ಅಡಕೆ ಕೊಳೆರೋಗಕ್ಕೆ ವಿಶೇಷ ಪರಿಹಾರ ನೀಡಲು ಸರ್ಕಾರ ನಿರ್ಣಯಿಸಬೇಕು. ಇದಲ್ಲದೇ ಹಾನಿಗೆ ಒಳಗಾದ ಭತ್ತ, ಜೋಳಕ್ಕೂ ಪರಿಹಾರ ಒದಗಿಸುವ ಕೆಲಸ ಆಗಬೇಕಿದೆ. ನೇರವಾಗಿ ಅತಿವೃಷ್ಟಿ ಹಾನಿ ಅಲ್ಲದೇ ಹೋದರೂ ಅಡಕೆ ಕೊಳೆ ಎಂಬುದು ಅತಿಯಾದ ಮಳೆಯಿಂದಲೇ ಬರುವ ರೋಗವಾಗಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎನ್ನುವುದು ರೈತರ ಆಗ್ರಹವಾಗಿದೆ.

ಒಟ್ಟಾರೆಯಾಗಿ ಪ್ರತಿ ವರ್ಷದಂತೆ ಈ ವರ್ಷವೂ ತೋಟಗಾರಿಕಾ ಇಲಾಖೆಯಿಂದ ಕೊಳೆ ರೋಗದ ಮಾಹಿತಿ ಜಿಲ್ಲಾಡಳಿತಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಅದು ಸರ್ಕಾರಕ್ಕೆ ತಲುಪುತ್ತದೆ. ಆದರೆ, ಅಡಕೆ ಬೆಳೆಗಾರರೇ ಹೆಚ್ಚಿರುವ ಜಿಲ್ಲೆಗೆ ಮಾತ್ರ ಸರ್ಕಾರದ ಪರಿಹಾರ ಇಲ್ಲವಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *