ಸೆಟಲೈಟ್‌ ಕರೆ:ಉ.ಕ. ದಲ್ಲಿ ಆತಂಕ!

Thumbnail image

ಉತ್ತರಕನ್ನಡದಲ್ಲಿ ಹೆಚ್ಚುತ್ತಿರುವ ಸ್ಯಾಟಲೈಟ್ ಕರೆಗಳು: ಪೊಲೀಸರಿಗೂ ತಿಳಿಯದ ಜಾಡು!

ಉತ್ತರಕನ್ನಡದಲ್ಲಿ ಸ್ಯಾಟ​ಲೈಟ್ ಫೋನ್ ಕರೆಗಳು ಕಳೆದ ಎರಡು ಮೂರು ವರ್ಷಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿವೆ. ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ಸ್ಯಾಟಲೈಟ್ ಕರೆಗಳು ಹೊರಹೋಗುವುದನ್ನು ಗುಪ್ತಚರ ಇಲಾಖೆ ಪತ್ತೆ ಮಾಡುತ್ತಿದೆ. ದಟ್ಟ ಅರಣ್ಯ ಪ್ರದೇಶದಲ್ಲಿ ಬಹುತೇಕ ಸಂದರ್ಭಗಳಲ್ಲಿ ಕಾಣಿಸಿಕೊಂಡಿದೆ.

ಕಾರವಾರ(ಉತ್ತರಕನ್ನಡ): ಜಿಲ್ಲೆಯಲ್ಲಿ ದೇಶದ ಪ್ರತಿಷ್ಠಿತ ಯೋಜನೆಗಳಾದ ಕದಂಬ ನೌಕಾನೆಲೆ, ಕೈಗಾ ಅಣುವಿದ್ಯುತ್ ಸ್ಥಾವರಗಳಿವೆ. ಅಲ್ಲದೇ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುವ ಜಗತ್ ಪ್ರಸಿದ್ಧ ಪ್ರವಾಸಿ ತಾಣಗಳಿದ್ದು, ಜಿಲ್ಲೆಯು ಸೂಕ್ಷ್ಮ ಪ್ರದೇಶವಾಗಿದೆ. ಹೀಗಿರುವಾಗ ಕಳೆದ ಮೂರು ವರ್ಷಗಳಿಂದ ವಿವಿಧೆಡೆ ಸ್ಯಾಟ​​ಲೈಟ್ ಕರೆಗಳು ಹೋಗಿರುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡುತ್ತಿದೆ. ಆದರೆ ಇದುವರೆಗೂ ಸಹ ಈ ಕರೆಗಳ ಜಾಡು ಪೊಲೀಸ್ ಇಲಾಖೆಗೂ ತಿಳಿಯದಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಉತ್ತರಕನ್ನಡದಲ್ಲಿ ಸ್ಯಾಟ​ಲೈಟ್ ಫೋನ್ ಕರೆಗಳು ಕಳೆದ ಎರಡು ಮೂರು ವರ್ಷಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿವೆ. ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ಸ್ಯಾಟಲೈಟ್ ಕರೆಗಳು ಹೊರಹೋಗುವುದನ್ನು ಗುಪ್ತಚರ ಇಲಾಖೆ ಪತ್ತೆ ಮಾಡುತ್ತಿದೆ. ದಟ್ಟ ಅರಣ್ಯ ಪ್ರದೇಶದಲ್ಲಿ ಬಹುತೇಕ ಸಂದರ್ಭಗಳಲ್ಲಿ ಕಾಣಿಸಿಕೊಂಡಿದೆ.

ಜೊತೆಗೆ ಸಮುದ್ರ ಪ್ರದೇಶದಲ್ಲೂ ಸಹ ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆಗಿರುವುದನ್ನ ಗುಪ್ತಚರ ಇಲಾಖೆ ಪತ್ತೆ ಮಾಡಿತ್ತಾದರೂ ಇದುವರೆಗೂ ಸಹ ಕರೆ ಮಾಡಿದ್ದು ಯಾರೆಂಬುದು ತಿಳಿದುಬಂದಿಲ್ಲ. ಕೈಗಾ, ನೌಕಾನೆಲೆಯಂತಹ ಸೂಕ್ಷ್ಮ ಪ್ರದೇಶಗಳನ್ನ ಹೊಂದಿರುವ ಜಿಲ್ಲೆಯಲ್ಲಿ ಮೇಲಿಂದ ಮೇಲೆ ಸ್ಯಾಟಲೈಟ್ ಕರೆಗಳು ಪತ್ತೆಯಾಗುತ್ತಿರೋದು ಆತಂಕಕಾರಿ ವಿಚಾರ ಅಂತಾರೆ ಸ್ಥಳೀಯರು.

ಉತ್ತರಕನ್ನಡದಲ್ಲಿ ಹೆಚ್ಚುತ್ತಿರುವ ಸ್ಯಾಟಲೈಟ್ ಕರೆಗಳು

ಜಿಲ್ಲೆಯ ಕಾರವಾರ, ಕೈಗಾ ಹಾಗೂ ಯಲ್ಲಾಪುರ ವ್ಯಾಪ್ತಿಯ ಅರಣ್ಯ ಪ್ರದೇಶ ಹಾಗೂ ಗೋಕರ್ಣ ಸಮೀಪದ ಅರಣ್ಯ ಪ್ರದೇಶದಲ್ಲಿ ಈ ಹಿಂದೆ ಸ್ಯಾಟಲೈಟ್ ಫೋನ್ ಬಳಕೆಯಾಗಿರುವುದು ಕಂಡುಬಂದಿದೆ. ಬಹುತೇಕ ಸಂದರ್ಭಗಳಲ್ಲಿ ದಟ್ಟ ಅರಣ್ಯ ಪ್ರದೇಶಗಳಲ್ಲೇ ಸ್ಯಾಟಲೈಟ್ ಫೋನ್ ಹೆಚ್ಚು ಬಾರಿ ಆ್ಯಕ್ಟೀವ್ ಆಗಿರುವುದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

ಸ್ಯಾಟಲೈಟ್ ಫೋನ್ ಕರೆ ಹಿಂಬಾಲಿಸಿ ಈ ಹಿಂದೆ ಯಲ್ಲಾಪುರ ಅರಣ್ಯ ಪ್ರದೇಶದಲ್ಲಿ ಪೊಲೀಸರು ಕೂಂಬಿಂಗ್ ಸಹ ನಡೆಸಿದ್ದರಾದರೂ ಸ್ಯಾಟಲೈಟ್ ಫೋನ್ ಮೂಲ ಮಾತ್ರ ಪತ್ತೆಯಾಗಿರಲಿಲ್ಲ. ಸೂಕ್ಷ್ಮ ಪ್ರದೇಶವಾಗಿರುವ ಜಿಲ್ಲೆಯಲ್ಲಿ ಈ ರೀತಿಯ ಚಟುವಟಿಕೆ ನಿರ್ಲಕ್ಷ್ಯ ಮಾಡುವುದು ಅಪಾಯಕಾರಿಯಾಗಿದೆ.ಪೊಲೀಸ್ ಇಲಾಖೆ ಇದರ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹ.

ಈ ಬಗ್ಗೆ ಪ್ರತಿಕ್ರಿಯಿಸಿದರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ ಪೆನ್ನೇಕರ್, ವಿವಿಧ ಭದ್ರತಾ ಸಂಸ್ಥೆಗಳು ಈ ಬಗ್ಗೆ ನಿಗಾ ಇರಿಸಿವೆ. ಇದುವರೆಗೂ ಯಾವುದೇ ಅನುಮಾನಾಸ್ಪದ ಪ್ರಕರಣಗಳು ಕಂಡುಬಂದಿಲ್ಲ. ಸಮುದ್ರ ಪ್ರದೇಶದಲ್ಲಿ ಸಂಚರಿಸುವ ಹಡಗುಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡುವುದರಿಂದಾಗಿ ಕೆಲವೊಮ್ಮೆ ಅದು ಭೂಪ್ರದೇಶದಲ್ಲಿ ಪತ್ತೆಯಾದಂತೆ ತೋರಿಸಿರುವ ಸಾಧ್ಯತೆಗಳಿವೆ ಎಂದಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *