ಬುಡಕಟ್ಟು ಕುಣಬಿ ಸಮುದಾಯದ ಬೇಡಿಕೆಗೆ ಸಿಗದ ಮನ್ನಣೆ: ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯ

ಉತ್ತರಕನ್ನಡ ಜಿಲ್ಲೆಯಲ್ಲಿ ಹಾಲಕ್ಕಿ ಕುಣಬಿ ಗೌಳಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಎರಡು-ಮೂರು ದಶಕಗಳಿಂದ ಕೇಳಿ ಬರುತ್ತಿರುವ ಕೂಗು.‌

ಕಾರವಾರ(ಉತ್ತರ ಕನ್ನಡ): ಬುಡಕಟ್ಟು ಜನಾಂಗಕ್ಕೆ ಸೇರಿದ ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕಳೆದ ಎರಡು ಮೂರು ದಶಕಗಳಿಂದ ಬೇಡಿಕೆ ಕೇಳಿಬರುತ್ತಿದೆ. ಆದರೆ ಇದುವರೆಗೂ ಯಾವುದೇ ಸರ್ಕಾರಗಳೂ ಕುಣಬಿ ಸಮುದಾಯದವರ ಬೇಡಿಕೆಗೆ ಮನ್ನಣೆ ನೀಡಿರಲಿಲ್ಲ. ಇದೀಗ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹಾಕಲು ಕುಣಬಿ ಸಮುದಾಯ‌‌ ನಿರ್ಧರಿಸಿದ್ದು, ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲೇಬೇಕೆಂದು ಭಾರಿ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯ ಸರ್ಕಾರಕ್ಕೆ 15 ದಿನಗಳ ಗಡುವು ನೀಡುವ ಮೂಲಕ ಮುಂದಿನ ಪರಿಣಾಮಗಳನ್ನು ಎದುರಿಸುವಂತೆ ಎಚ್ಚರಿಕೆ ರವಾನಿಸಲಾಗಿದೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ.

ಹೌದು, ಉತ್ತರಕನ್ನಡ ಜಿಲ್ಲೆಯಲ್ಲಿ ಹಾಲಕ್ಕಿ, ಕುಣಬಿ, ಗೌಳಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಎರಡು- ಮೂರು ದಶಕಗಳಿಂದ ಕೇಳಿ ಬರುತ್ತಿರುವ ಕೂಗು.‌ ಅದರಲ್ಲೂ ಕುಣಬಿ ಸಮಾಜ ತಮ್ಮನ್ನು 2ಎ ಪ್ರವರ್ಗದಿಂದ ತೆಗೆದು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಾಕಷ್ಟು ಸಮಯಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮುಂದೆ ತಮ್ಮ ಮನವಿಗಳನ್ನು ಸಲ್ಲಿಸಿಕೊಂಡು ಬರುತ್ತಿದ್ದಾರೆ.

ಕುಣಬಿ ಸಮುದಾಯದ ವ್ಯಕ್ತಿ ಪ್ರಸನ್ನ ಗಾವಡಾ ಅವರು ಮಾತನಾಡಿದರು

ಜಿಲ್ಲೆಯ ಜನಪ್ರತಿನಿಧಿಗಳು ಸೇರಿದಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಯೂ ತಮ್ಮ ಬೇಡಿಕೆಯನ್ನು ಸಲ್ಲಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಆಗ್ರಹಿಸಿತ್ತು. ಆದರೆ, ದಶಕಗಳಿಂದಲೂ ಸಮುದಾಯಕ್ಕೆ ಆಶ್ವಾಸನೆ ದೊರೆಯುತ್ತಿದೆಯೇ ಹೊರತು, ಈ ಕುರಿತು ಯಾವುದೇ ಪ್ರಕ್ರಿಯೆಗಳು ನಡೆದಿಲ್ಲ. ಇವರ ನಂತರದಲ್ಲಿ ಮನವಿ ನೀಡಿದ ಬೆಟ್ಟ ಕುರುಬ ಸೇರಿದಂತೆ ಇತರೆ ಸಮುದಾಯಗಳನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸರ್ಕಾರ ಅನುಮೋದನೆ ನೀಡಿದ್ದು, ಅರ್ಹ ಪಟ್ಟಿಯಲ್ಲಿ ಬರುವ ಕುಣಬಿ ಸಮುದಾಯವನ್ನು ಮಾತ್ರ ಇದುವರೆಗೂ ಕಡೆಗಣಿಸಲಾಗಿದೆ.

ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ: ಈ ಹಿನ್ನೆಲೆ ಇದೀಗ ಕುಣಬಿ ಸಮುದಾಯದವರು ಹೋರಾಟದ ಮೂಲಕ ಗಮನ ಸೆಳೆಯಲು ಮುಂದಾಗಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿರುವ ಕುಣಬಿ ಮುಖಂಡರು, ಬೇಡಿಕೆ ಈಡೇರಿಸದಿದ್ದಲ್ಲಿ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕುಣಬಿ ಸಮಾಜ ಅಭಿವೃದ್ಧಿ ಸಂಘದ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಮಿರಾಶಿ ಅವರು ಮಾತನಾಡಿದರು

ಇನ್ನು, ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಕಳೆದ ಮೂರು ದಶಕಗಳಿಂದ ನಿರಂತರವಾಗಿ ಹೋರಾಟ ನಡೆಸಲಾಗುತ್ತಿದೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ವರ್ಗದವರ ಹೋರಾಟವನ್ನು ಕಡೆಗಣಿಸುತ್ತಲೇ ಬಂದಿವೆ. ಹೀಗಾಗಿ ಜಿಲ್ಲೆಯ ಕುಣಬಿ ಸಮುದಾಯದ 40 ಸಾವಿರಕ್ಕೂ ಅಧಿಕ ಜನರು ಹೋರಾಟಕ್ಕೆ ಸಿದ್ಧರಾಗಿರೋದಾಗಿ ಸಮುದಾಯದ ಮುಖಂಡರು ತಿಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲಿರುವ ಕುಣಬಿ ಸಮುದಾಯದವರು ಮೂಲತಃ ಗೋವಾ ರಾಜ್ಯದವರು.

ಕುಣಬಿ ಸಮುದಾಯವರಿಂದ ಬೇಸರ: ಪೋರ್ಚುಗೀಸರ ಕಾಲದಲ್ಲಿ ಮತಾಂತರಕ್ಕೆ ಹೆದರಿ ಜೋಯಿಡಾ ತಾಲೂಕಿನ ಅರಣ್ಯ ಪ್ರದೇಶಕ್ಕೆ ಬಂದು ಇವರು ನೆಲೆಸಿದ್ದರು. ಗೋವಾದಲ್ಲಿರುವ ಕುಣಬಿ ಸಮುದಾಯಕ್ಕೆ 2007ರಲ್ಲೇ ಪರಿಶಿಷ್ಟ ಜಾತಿಯ ಮಾನ್ಯತೆ ನೀಡಲಾಗಿದೆ. ಆದರೆ, ಕರ್ನಾಟಕದಲ್ಲಿರುವ ಕುಣಬಿ ಸಮುದಾಯದ ಬೇಡಿಕೆಯನ್ನು ರಾಜ್ಯ, ಕೇಂದ್ರ ಸರ್ಕಾರಗಳು ನಿರ್ಲಕ್ಷಿಸುತ್ತಿವೆ ಎಂದು ಕುಣಬಿ ಸಮುದಾಯವರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ, ಬಹಳಷ್ಟು ಹಿಂದುಳಿದಿರುವ ಕುಣಬಿ ಸಮಾಜ ತಮ್ಮ ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ಪಂಗಡಕ್ಕೆ ಪರಿಗಣಿಸಲು ಬೇಡಿಕೆ ಇಟ್ಟಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಾದ್ರೂ ಸರ್ಕಾರ ಈ ಬಗ್ಗೆ ಗಮನಹರಿಸಿ ಹಿಂದುಳಿದ ಸಮುದಾಯದ ಬೇಡಿಕೆ ಈಡೇರಿಸುತ್ತಾ ಅನ್ನೋದನ್ನ ಕಾದು ನೋಡಬೇಕು.(etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *