ಸಿದ್ದಾಪುರ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮಂಡಲದ ವತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಅವರ
ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು.
ಈ ವೇಳೆ ಮಂಡಲದ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಮಾತನಾಡಿ, ದೀನ್ ದಯಾಳ್ ಉಪಾಧ್ಯಾಯ ಅವರ ಧ್ಯೇಯವಾದ ಅಂತ್ಯೋದಯ ಹಾಗೂ ಸಾಮಾಜಿಕ ನ್ಯಾಯ ಪರಿಕಲ್ಪನೆ ಇಂದಿಗೂ ಸಹ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಹಾಗೂ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಪರಿಪಾಲನೆ ಮಾಡುತ್ತಿದ್ದು, ಅವರ ಜೊತೆಯಲ್ಲಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರಾದ ನಾವುಗಳು ಅವರ ಧ್ಯೇಯೋದ್ದೇಶ ಇಟ್ಟುಕೊಂಡು ಮುಂದೆ ಸಾಗಿದ್ದಲ್ಲಿ ಮಾತ್ರವೇ ಅವರಿಗೆ ಗೌರವ ಸಲ್ಲಿಸಿದಂತೆ ಆಗುತ್ತದೆ.
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರದ್ದು ಯಾವಾಗಲೂ ಸಿದ್ದಾಂತವನ್ನು ಬಲಿಕೊಟ್ಟು ಅಧಿಕಾರ ಹಿಡಿಯುವ ಅಪೇಕ್ಷೆಯಾಗಲಿ, ಸೈದ್ದಾಂತಿಕವಾಗಿ ರಾಜಿ ಮಾಡಿಕೊಳ್ಳುವ ವ್ಯಕ್ತಿತ್ವವಾಗಲಿ ಅವರದಾಗಿರಲಿಲ್ಲ. ಇಂದಿನ ರಾಜಕೀಯವನ್ನು ಸೂಕ್ಷ್ಮವಾಗಿ
ಗಮನಿಸಿದರೇ ಅಧಿಕಾರಕ್ಕಾಗಿ ಸಿದ್ದಾಂತವನ್ನು ಬಲಿ ಕೊಡಲಾಗುತ್ತಿದೆ . ನಾವೆಲ್ಲ ಇಂತಹ ಮಹಾಪುರುಷರು ಹಾಕಿಕೊಟ್ಟ ಹೆಜ್ಜೆಯಲ್ಲಿ ಮುನ್ನಡೆಯುತ್ತ ಅವರು ಕಂಡ ಭವ್ಯ ಭಾರತದ ಕನಸನ್ನು ಸಾಕಾರಗೊಳಿಸೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಪಕ್ಷದ ಕಾರ್ಯಾಲಯದಲ್ಲಿ ವೀಕ್ಷಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಎಸ್ ಕೆ ಮೇಸ್ತ, ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಮಡಿವಾಳ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮನಾ ಕಾಮತ್, ಪಟ್ಟಣ ಪಂಚಾಯತ ಸದಸ್ಯೆ ಮಂಜುಳಾ ನಾಯ್ಕ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ತೋಟಪ್ಪ ನಾಯ್ಕ, ಎಸ್ ಟಿ ಮೋರ್ಚಾ ಅಧ್ಯಕ್ಷ ವೆಂಕೋಬ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ವಿಕ್ಕಿ ಫರ್ನಾಂಡಿಸ್, ಸಾಮಾಜಿಕ ಜಾಲತಾಣದ ಸಂಚಾಲಕ ಶಿವಕುಮಾರ್ ನಾಯ್ಕ ಕೊಂಡ್ಲಿ, ಸಹ-ಸಂಚಾಲಕ ಸಚೀನ್ ಶೇಟ್, ಪ್ರಮುಖರಾದ ಸತೀಶ್ ಕಾಮತ್, ಸುರೇಶ್ ಕೊಂಡ್ಲಿ, ರಾಮಕೃಷ್ಣ ಕೊಂಡ್ಲಿ ಉಪಸ್ಥಿತರಿದ್ದದರು.