ಮೊದಲು ಆರ್.ಎಸ್ಎಸ್. ನಿಷೇಧಿಸಿ: ಸಿಪಿಐ(ಎಂ)

ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ಎಸ್ ಅನ್ನು ನಿಷೇಧಿಸಿ: ಸಿಪಿಐ(ಎಂ)

ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು…

govind

ತಿರುವನಂತಪುರಂ: ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು ಎಂದು ಕೇರಳದ ಆಡಳಿತಾರೂಢ ಸಿಪಿಐ(ಎಂ) ಮಂಗಳವಾರ ಹೇಳಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಅನ್ನು ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂಬ ವರದಿಗಳ ನಡುವೆ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ ವಿ ಗೋವಿಂದನ್ ಅವರು ಈ ಹೇಳಿಕೆ ನೀಡಿದ್ದಾರೆ.

ಕೇರಳವು ಈಗ ಭಯೋತ್ಪಾದನೆ ಮತ್ತು ಸಮಾಜಘಾತುಕ ಶಕ್ತಿಗಳ “ಹಾಟ್‌ಸ್ಪಾಟ್” ಆಗಿದೆ. ಈ ದಕ್ಷಿಣ ರಾಜ್ಯದ ಜನರ ಜೀವನ ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಆರೋಪಿಸಿದ ಮಾರನೇ ದಿನವೇ ಸಿಪಿಐ(ಎಂ) ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ ಎಸ್ ನಿಷೇಧಿಸಿ ಎಂದು ಹೇಳುವ ಮೂಲಕ ತಿರುಗೇಟು ನೀಡಿದೆ.

“ಆರ್ ಎಸ್ಎಸ್ ಕೋಮುವಾದಿ ಚಟುವಟಿಕೆಗಳನ್ನು ನಡೆಸುವ ಪ್ರಮುಖ ಸಂಘಟನೆಯಾಗಿದೆ. ಅದನ್ನು ನಿಷೇಧಿಸಲಾಗುತ್ತದೆಯೇ? ಉಗ್ರಗಾಮಿ ಸಂಘಟನೆಯನ್ನು ನಿಷೇಧಿಸುವುದರಿಂದ ಸಮಸ್ಯೆಗೆ ಪರಿಹಾರವಿಲ್ಲ. ಆರ್‌ಎಸ್‌ಎಸ್ ಅನ್ನು ಈ ಹಿಂದೆ ನಿಷೇಧಿಸಲಾಗಿದೆ. ಸಿಪಿಐ ಅನ್ನು ನಿಷೇಧಿಸಲಾಗಿದೆ, ”ಸಂಘಟನೆಯನ್ನು ನಿಷೇಧಿಸುವುದರಿಂದ ಅದು ಅಥವಾ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಮತ್ತೆ ಹಿಂತಿರುಗುತ್ತಾರೆ. ಇಂತಹ ಗುಂಪುಗಳ ವಿರುದ್ಧ ಜಾಗೃತಿ ಮೂಡಿಸಿ ಅಕ್ರಮ ಎಸಗಿದಾಗ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’’ ಎಂದು ಎಂ ವಿ ಗೋವಿಂದನ್ ಅವರು ಹೇಳಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *