ಬಿಆರ್‌ಎಸ್ ಜೊತೆ ಜೆಡಿಎಸ್ ಮೈತ್ರಿ: ಹೆಚ್ ಡಿ ಕುಮಾರಸ್ವಾಮಿ

Thumbnail image

ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಬಿಆರ್‌ಎಸ್ ಜೊತೆ ಜೆಡಿಎಸ್ ಮೈತ್ರಿ: ಹೆಚ್ ಡಿ ಕುಮಾರಸ್ವಾಮಿ

ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಂಡರು. ಈ ವೇಳೆ ಹೊಸ ರಾಷ್ಟ್ರೀಯ ಪಕ್ಷಕ್ಕೆ ಸಾತ್ ನೀಡುವ ಅಭಯ ನೀಡಿದರು.

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಹೇಳಿದರು.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮಾತನಾಡುತ್ತಿರುವುದು

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮಾತನಾಡುತ್ತಿರುವುದು

ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಂಡರು. ಈ ವೇಳೆ ಹೊಸ ರಾಷ್ಟ್ರೀಯ ಪಕ್ಷಕ್ಕೆ ಸಾತ್ ನೀಡುವ ಅಭಯ ನೀಡಿದರು.

ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ: ನಂತರ ಬೆಂಗಳೂರಿಗೆ ಹೊರಡುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಮೊದಲಿನಿಂದಲೂ ಜೆಡಿಎಸ್ ಮತ್ತು ಟಿಆರ್​ಎಸ್ ಪಕ್ಷಗಳು ಸಹಜ ಮಿತ್ರಪಕ್ಷಗಳಾಗಿದ್ದವು. ಪರಸ್ಪರ ವಿಶ್ವಾಸದಿಂದ ಕೆಲಸ ಮಾಡಿಕೊಂಡು ಬಂದಿವೆ. ಈಗ ಟಿಆರ್​ಎಸ್​ ರಾಷ್ಟ್ರೀಯ ಪಕ್ಷವಾಗಿ ಬಿಆರ್​ಎಸ್ ಹೆಸರಿನಲ್ಲಿ ಹೊರಹೊಮ್ಮಿರುವುದನ್ನು ನಮ್ಮ ಪಕ್ಷ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ. ಮುಂದಿನ ದಿನಗಳಲ್ಲಿ ನಾವು ಕೆ. ಚಂದ್ರಶೇಖರ್ ರಾವ್ ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದರು.

2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್​​ಎಸ್ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲಿವೆ. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯ ವಾತಾವರಣವಿದೆ. ಅದೇ ಸ್ಥಿತಿಯನ್ನು ಕರ್ನಾಟದಲ್ಲೂ ತರಲು ನಾನು ಮತ್ತು ಚಂದ್ರಶೇಖರ್ ರಾವ್ ಅವರೂ ನಿರ್ಧಾರ ಮಾಡಿದ್ದೇವೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.

ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ತೆಲಂಗಾಣ ಸಿಎಂ ಕೆಸಿಆರ್ ಮಾತುಕತೆ

ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ತೆಲಂಗಾಣ ಸಿಎಂ ಕೆಸಿಆರ್ ಮಾತುಕತೆ

ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೊರತಾದ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡುವ ಬಗ್ಗೆ ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ. ಸಂಪೂರ್ಣ ಬೆಂಬಲ ನೀಡುವುದಾಗಿ ಕೆಸಿಆರ್ ಅವರು ಭರವಸೆ ನೀಡಿದ್ದಾರೆ. 2023ರ ಚುನಾವಣೆಯಲ್ಲಿ ಫಲಿತಾಂಶ ಜೆಡಿಎಸ್ ಪರವಾಗಿ ಬಂದರೆ, ಅದು 2024ರ ಲೋಕಸಭೆ ಚುನಾವಣೆಗೆ ಹೊಸ ದಿಕ್ಸೂಚಿಯಾಗಲಿದೆ.

ಕರ್ನಾಟಕವೂ ರಾಷ್ಟ್ರ ರಾಜಕಾರಣದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರ್ಕಾರ ತರುವ ನಿಟ್ಟಿನಲ್ಲಿಯೂ ನಾವಿಬ್ಬರೂ ಚರ್ಚೆ ನಡೆಸಿದ್ದೇವೆ. ಅದಕ್ಕೆ ಇವತ್ತಿನ ಕಾರ್ಯಕ್ರಮ ವೇದಿಕೆಯಾಗಿದೆ ಎಂದು ಹೇಳಿದರು.

ಜನಪರ ಕಾರ್ಯಕ್ರಮ ರಾಜ್ಯದಲ್ಲೂ ಜಾರಿ: ದೃಢ ನಾಯಕತ್ವದ ಕೆಸಿಆರ್ ಅವರು ತಮ್ಮ ಸಂಕಲ್ಪ ಬಲದಿಂದಲೇ ತೆಲಂಗಾಣದ ಜನರನ್ನು ಒಟ್ಟಾಗಿ ಕರೆದೊಯ್ದು ತೆಲಂಗಾಣ ರಾಜ್ಯವನ್ನು ಸಾಧನೆ ಮಾಡಿದರು. ನಂತರ ತಮ್ಮ ಆಡಳಿತಾವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು.

ʼರೈತಬಂಧುʼ, ʼದಲಿತ ಬಂಧುʼದಂತಹ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದು ಸರ್ಕಾರದ ಕಾರ್ಯಕ್ರಮಗಳು ಪ್ರತೀ ನಾಗರಿಕನಿಗೂ ತಲುಪುವಂತೆ ಮಾಡಿದರು. ಇದೇ ರೀತಿಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಕೂಡ ಮಾಡಿತ್ತು. ಮುಂದಿನ ದಿನಗಳಲ್ಲಿ ಅಂತಹ ಜನಪರ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲೂ ಜಾರಿಗೆ ತರಲಾಗುವುದು ಎಂದರು.

ರಾಜಕೀಯ ಏಕಸ್ವಾಮ್ಯತೆಗೆ ಅಂತ್ಯ: ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯ ಇತ್ತು. ಕೆಲವೇ ಪಕ್ಷಗಳ ರಾಜಕೀಯ ಏಕಸ್ವಾಮ್ಯತೆಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು. ಅದಕ್ಕೆ ಬಿಆರ್​ಎಸ್ ಒಂದು ಪ್ರಬಲ ಪರ್ಯಾಯ ಎನ್ನುವುದು ನನ್ನ ಭಾವನೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್ ಸೇರಿದಂತೆ ಇನ್ನೂ ಹಲವಾರು ಪ್ರಮುಖ ಪಕ್ಷಗಳ ನಾಯಕರು ಬಿಆರ್​ಎಸ್​ ಒಕ್ಕೂಟದಲ್ಲಿ ಕೆಲಸ ಮಾಡಲಿವೆ ಎನ್ನುವ ವಿಶ್ವಾಸ ನನಗಿದೆ. ಅಂತಹ ಪ್ರಯತ್ನ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಜೆಡಿಎಸ್-ಬಿಆರ್​ಎಸ್​ ಮಿತ್ರಪಕ್ಷಗಳಾಗಿ ಮುನ್ನಡೆಯಲಿವೆ ಎಂದು ಹೇಳಿದರು.

ದೇಶದ ಸಂಪತ್ತು ಸಮಾನ ಹಂಚಿಕೆ: ರೈತರು, ದಲಿತರು ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗದ ಜನರ ಕಲ್ಯಾಣಕ್ಕಾಗಿ ಕೆಸಿಆರ್ ಅವರು ಪರಿಣಾಮ ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ತೆಲಂಗಾಣದಲ್ಲಿ ಅಂಥ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಮುಖ್ಯವಾಗಿ ದೇಶದ ಸಂಪತ್ತು ಕೆಲವರಲ್ಲಿಯೇ ಸಂಗ್ರಹವಾಗದೇ ಅದು ಸಮಾನ ಹಂಚಿಕೆ ಆಗಬೇಕು. ಸಾಮಾನ್ಯನಿಗೂ ಆ ಸಂಪತ್ತಿನಲ್ಲಿ ಪಾಲಿರಬೇಕು ಎನ್ನುವ ಗುರಿಯೊಂದಿಗೆ ಅವರು ಕೆಲಸ ಮಾಡುತ್ತಿದ್ದಾರೆ.

ಕೆಸಿಆರ್ ಅವರು ತಮ್ಮ ರಾಜ್ಯದಲ್ಲಿ ರೈತರಿಗೆ, ದಲಿತರಿಗೆ ಹಾಗೂ ದುರ್ಬಲರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಬಿಆರ್​ಎಸ್ ಸ್ಥಾಪನೆ ಬಗ್ಗೆ ಈ ಹಿಂದೆಯೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿಗಳಾದ ಹೆಚ್. ಡಿ ದೇವೇಗೌಡರು, ನನ್ನ ಜತೆ ಕೆಸಿಆರ್ ಅವರು ಸಮಾಲೋಚನೆ ನಡೆಸಿದ್ದರು. ಕೆಲ ದಿನಗಳ ಹಿಂದೆ ಸ್ವತಃ ನಾನೇ ಹೈದರಾಬಾದ್​ಗೆ ಭೇಟಿ ನೀಡಿ ಚರ್ಚೆ ಮಾಡಿದ್ದೆ. ನಮ್ಮನ್ನು ಪರಿಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಅವರು ಈ ಹೆಜ್ಜೆ ಇರಿಸಿದ್ದಾರೆ ಎಂದು ಹೇಳಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *