ಪರೇಶ್ ಮೇಸ್ತಾ ಸಹಜ ಸಾವು ವರದಿ: ಕ್ಷಮೆಯಾಚಿಸಿ ಸರ್ಕಾರದಿಂದ ನಷ್ಟ ಭರಿಸಲು ಕಾಂಗ್ರೆಸ್ಸಿಗರ ಆಗ್ರಹ!

Thumbnail image

ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ.

ಕಾರವಾರ: ಪರೇಶ್ ಮೆಸ್ತಾ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ರಂಗೇರುತ್ತಿದೆ. ಪರೇಶ್ ಮೇಸ್ತಾ ಸಾವು ಸಹಜ ಎಂದಿದ್ದರು ಅನ್ಯಕೋಮಿನವರೇ ಕೊಲೆ ಮಾಡಿದ್ದಾರೆಂದು ಬಿಜೆಪಿ ನಾಯಕರು ಆರೋಪ ಮಾಡಿ ಗಲಭೆಗೆ ಕಾರಣವಾಗಿದ್ದರು. ಇದೀಗ ಜಿಲ್ಲೆಯ ಜನರ ಕ್ಷಮೆಯನ್ನು ಬಿಜೆಪಿ ನಾಯಕರುಗಳು ಕೇಳಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ.

ಮಾಜಿ ಶಾಸಕ ಸತೀಶ್ ಸೈಲ್ ಅವರು ಮಾತನಾಡಿದರು

ಹೌದು, ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ 2017 ರಲ್ಲಿ ಕೋಮಗಲಭೆಯಲ್ಲಿ ನಾಪತ್ತೆಯಾಗಿದ್ದ ಪರೇಶ್ ಮೇಸ್ತಾ ಎನ್ನುವ ಮೀನುಗಾರ ಯುವಕ ಎರಡು ದಿನಗಳ ನಂತರ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದ. ಈ ವೇಳೆ ಬಿಜೆಪಿ ನಾಯಕರುಗಳು ಪರೇಶ್ ಮೇಸ್ತಾನನ್ನ ಕೊಲೆ ಮಾಡಿದ್ದು, ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ಆರೋಪಿಸಲಾಗಿತ್ತು.

ಬಿಜೆಪಿ ಇನ್ನಾದರೂ ಸುಮ್ಮನಾಗಲಿ: ಇನ್ನು ಅನ್ಯಕೋಮಿನಿಂದಲೇ ಕೊಲೆ ನಡೆದಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಇದೀಗ ಪ್ರಕರಣದ ತನಿಖೆ ನಡೆಸಿದ ಸಿಬಿಐ ಬಿ ರಿಪೋರ್ಟ್ ಹಾಕಿದೆ. ಅದಾಗಿಯೂ ಬಿಜೆಪಿಯ ಕೆಲ ನಾಯಕರು ಮರು ತನಿಖೆ ನಡೆಸಲು ಆಗ್ರಹಿಸುತ್ತಿದ್ದು, ಇದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಬಿಐ ಮೇಲೆ ವಿಶ್ವಾಸವಿಲ್ಲ ಎಂದು ಸರ್ಕಾರವೇ ಮರು ತನಿಖೆಗೆ ಆದೇಶ ಮಾಡಲಿ. ಇಲ್ಲದಿದ್ದರೆ ಜನ ಪ್ರತಿನಿಧಿಗಳೇ ಉತ್ತರ ನೀಡಲಿ. ಇಲ್ಲದಿದ್ದರೇ ಕಾಂಗ್ರೆಸ್ ಪರೇಶ್ ಮೇಸ್ತಾ ಕುಟುಂಬದ ಸಹಾಯಕ್ಕೆ ನಿಲ್ಲುತ್ತದೆ. ಜನರಲ್ಲಿ ಗೊಂದಲ ಮೂಡಿಸಿದ್ದ ಬಿಜೆಪಿ ಇನ್ನಾದರೂ ಸುಮ್ಮನಾಗಲಿ, ಜಿಲ್ಲೆಯ ಜನರ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

ಈಗಲಾದರೂ ಪರಿಹಾರಕೊಡಲಿ: ಇನ್ನು ಪರೇಶ್ ಮೇಸ್ತಾ ಸಾವಿನ ನಂತರ ಜಿಲ್ಲೆಯ ಕುಮಟಾ, ಹೊನ್ನಾವರ, ಕಾರವಾರ, ಶಿರಸಿಯಲ್ಲಿ ಗಲಭೆಗಳಾಗಿದ್ದವು. ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳು ಗಲಭೆಯಲ್ಲಿ ಹಾನಿಯಾಗಿತ್ತು. ಅಂದಿನ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರ ಕಾರನ್ನ ಸಹ ಸುಟ್ಟು ಹಾಕಲಾಗಿತ್ತು.

ಪರೇಶ್ ಮೇಸ್ತಾನನ್ನ ಅನ್ಯ ಕೋಮಿನವರು ಕೊಲೆ ಮಾಡಿದ್ದಾರೆಂದು ಜನರಲ್ಲಿ ತಲೆಗೆ ತುಂಬಿ ಈ ಗಲಭೆಗೆ ಬಿಜೆಪಿಗರು ಕಾರಣರಾಗಿದ್ದರು ಎಂದು ಕಾಂಗ್ರೆಸ್ ಸದ್ಯ ಆರೋಪಿಸುತ್ತಿದ್ದು, ಬಿಜೆಪಿ ನಾಯಕರು ಶಾಂತಿಯುತ ಜಿಲ್ಲೆಯಲ್ಲಿ ಗಲಭೆ ಎಬ್ಬಿಸಿದ್ದಕ್ಕೆ ಕ್ಷಮೆ ಕೇಳಲಿ. ಅಲ್ಲದೇ ಗಲಭೆಯಿಂದ ಹಲವರ ಆಸ್ತಿ ಪಾಸ್ತಿ ಹಾನಿಯಾಗಿದ್ದು, ಅಂತವರಿಗೆ ಈಗಲಾದರೂ ಪರಿಹಾರಕೊಡಲಿ ಎಂದು ಕೈ ನಾಯಕರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ: ಕಳೆದ ಬಾರಿ ಪರೇಶ್ ಮೇಸ್ತಾ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಗೆ ಕಾರಣವಾಗಿತ್ತು. ಕರಾವಳಿಯ ಒಂದು ಕ್ಷೇತ್ರ ಹೊರತು ಪಡಿಸಿ ಉಳಿದೆಲ್ಲ ಕ್ಷೇತ್ರದಲ್ಲಿ ಪ್ರಕರಣದಿಂದ ಸೋಲಿಗೆ ಕಾರಣವಾಗಿತ್ತು. ಸದ್ಯ ಬಿ ರಿಪೋರ್ಟ್​ ಅನ್ನು ಅಸ್ತ್ರವಾಗಿಟ್ಟುಕೊಂಡು ಈ ಬಾರಿಯ ಚುನಾವಣೆ ಎದುರಿಸಲು ಕೈ ನಾಯಕರು ಸಜ್ಜಾಗಿದ್ದು, ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎನ್ನುವುದನ್ನ ಕಾದು ನೋಡಬೇಕಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *