ಲಿಟ್ಲ್ ಫ್ಲವರ್ ಬಗ್ಗೆ ಭಜರಂಗಿ ವಿರೋಧ

ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಸಿದ್ದಾಪುರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀ ರವರ ಫೋಟೋ ಪಕ್ಕದಲ್ಲಿ ಒಬ್ಬ ಕ್ರಿಶ್ಚಿಯನ್ ಸಂತಳ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಮತದ ಬಗ್ಗೆ ಗಾಂಧೀಜಿಯವರಿಗೆ ಒಲವಿತ್ತು ಎಂದು ಬೋಧನೆಯನ್ನು ಮಾಡಿದ್ದಾರೆ. ಶಾಲೆ ಎನ್ನುವುದು ಯಾವುದೇ ಒಂದು ಜಾತಿಗೆ ಸೀಮತವಾದದ್ದಲ್ಲ. ಲಿಟಲ್ ಫ್ಲವರ್ ಶಾಲೆ ಎಂದರೆ ಇದು ಎಲ್ಲರ ಶಾಲೆ ಎಂಬ ಭಾವನೆ ಸಿದ್ದಾಪುರದವರಿಗಿದೆ. ಇದೊಂದು ಸರ್ಕಾರದ ಅನುದಾನಿತ ಶಾಲೆಯಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಬಾರದು ಈ ಬಗ್ಗೆ ನಾವು ಇಂದು ಮನವಿಯನ್ನು ಕೊಡುತ್ತಿದ್ದೇವೆ ಮತ್ತು ಇದೇ ರೀತಿ ಆದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟವನ್ನು ನಡೆಸುತ್ತೇವೆ. ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯದ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಳ್ಳಬೇಕು ಎಂದು ತಾಲೂಕ ಭಜರಂಗ ದಳದವರು ತಹಸೀಲ್ದಾರ್ ರಿಗೆ ಮನವಿ ಸಲ್ಲಿಸಿದರು.


ರಾಷ್ಟ್ರೀಯ ಹಬ್ಬವಾದ ಗಾಂಧೀ ಜಯಂತಿಯ ದಿನ ಶಾಸ್ತ್ರೀಜೀಯವರ ಜನ್ಮದಿನ ಸಹ ಇದ್ದು, ಅವರಿಬ್ಬರ ಫೋಟೋಗಳಿಗೆ ಪೂಜೆ ಸಲ್ಲಿಸುವುದು ಮಾತ್ರ ಸರಿಯೆ ವಿನಃ ಯಾವುದೋ ಬೇರೊಬ್ಬರ ಫೋಟೋವನ್ನು ಮಹಾತ್ಮರ ಜಯಂತಿಯಂದು ಅವರ ಫೋಟೋ ಜೊತೆಗಿಟ್ಟು ಪೂಜಿಸುವುದು ಮಹನೀಯರಿಗೆ ಮಾಡಿದ ಅವಮಾನ ಮತ್ತು ಸಾರ್ವಜನಿಕ ಸ್ಥಳವಾದ ಶಾಲೆಯಲ್ಲಿ ಎಲ್ಲಾ ಧರ್ಮದ ಮಕ್ಕಳಿರುವಾಗ ಮುಗ್ಧ ಮಕ್ಕಳಲ್ಲಿ ಯಾವುದೋ ಒಂದು ಧರ್ಮದ ಪ್ರಚಾರ ಮಾಡುವುದು ಸರಿಯಲ್ಲ.

ಕಾರಣ ಈ ಮೇಲಿನ ಎಲ್ಲಾ ಕಾರಣಗಳಿಂದ ಲಿಟ್ಲಫ್ಲವರ್ ಅನುದಾನಿತ ಶಾಲೆ ಸಿದ್ದಾಪರ ಇದರ ಶಿಕ್ಷಕರು ಕಾನೂನನ್ನು ಉಲ್ಲಂಘಿಸಿದ್ದಾರೆ. ಕಾರಣ ಶಾಲಾ ಶಿಕ್ಷರು ಮತ್ತು ಆಡಳಿತ ಮಂಡಳಿಯವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಈ ಮೂಲಕ ನಿಮ್ಮಲ್ಲಿ ದೂರು ನೀಡುತ್ತಿದ್ದು, ಶಾಲೆಯ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಜರುತಿಸಲು ವಿನಂತಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *