ಕರ್ಮದಿಂದ ಶ್ರೇಷ್ಠ… felicitation for artists

ಸಿದ್ದಾಪುರ: ಜನ್ಮದಿಂದ ಶ್ರೇಷ್ಠರಲ್ಲ, ಕರ್ಮದಿಂದ ಶ್ರೇಷ್ಠರು ಎಂಬ ಪರಂಪರೆ ನಮ್ಮದು. ನಮ್ಮ ಪುರಾಣ, ಇತಿಹಾಸಗಳಲ್ಲಿ ಕಾಣುವ ಪಾತ್ರಗಳು ಯುಗ ಯುಗಾಂತರಗಳಲ್ಲೂ ಉತ್ತಮ ಸಂದೇಶವನ್ನು ನೀಡುತ್ತವೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ್ ಶಾನಭಾಗ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ಅವರು ಭಾನುವಾರ ಮಾತನಾಡಿದರು.
ಕಾರ್ಯಕ್ರಮದ ಉಪನ್ಯಾಸಕರಾಗಿ ಮಾತನಾಡಿದ ಜಿಡ್ಡಿ ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ವಿಷ್ಣುನಾಯ್ಕ ಸಾರ್ವಕಾಲಿಕವಾಗಿ ಸರಿಹೊಂದುವ ಗ್ರಂಥಗಳನ್ನು ಮಹಾಕಾವ್ಯಗಳು ಎನ್ನಬಹುದು. ವಾಲ್ಮೀಕಿ ವಿರಚಿತ ರಾಮಾಯಣ ಅಂತಹ ಗ್ರಂಥಗಳಲ್ಲೊಂದಾಗಿದೆ. ರಾಮಾಯಣ ಕೇವಲ ಭಾರತದಲ್ಲಲ್ಲದೆ ವಿದೇಶಗಳಲ್ಲೂ ತನ್ನ ಖ್ಯಾತಿಯನ್ನು ಗಳಿಸಿದೆ. ರಾಮ ಎನ್ನುವ ವ್ಯಕ್ತಿತ್ವ ಜಗತ್ತಿನಲ್ಲಿ ತನ್ನದೇ ಛಾಪು ಮೂಡಿಸಿದ ಎಂದರು.


ಪಟ್ಟಣ ಪಂಚಾಯಿತಿ ಸದಸ್ಯ ವೆಂಕೋಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಾಲ್ಮೀಕಿ ಸಮುದಾಯದ ಮುಖಂಡ ರಮೇಶ್ ಬೇಡರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯ ನಂದನ ಬೋರ್ಕರ್ ವಾಲ್ಮೀಕಿ ಜಯಂತಿಯ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರರಾದ ಸಂತೋಷ ಭಂಡಾರಿ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಕುಮಾರ್ ನಾಯ್ಕ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್ ಪಿ ನರೋನ್ಹಾ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಿದ್ದಾಪುರ:  ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಾಣಿಕಟ್ಟಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಭಾಭವನದಲ್ಲಿ ನವರಾತ್ರಿ ಉತ್ಸವದ ದುರ್ಗಾದೇವಿ ಆರಾಧನೆ ಪ್ರಯುಕ್ತ ಇತ್ತೀಚೆಗೆ ಸರ್ವಕಾಲಿಕ ಪ್ರಸಂಗಗಳಲ್ಲೊಂದಾದ ಪೌರಾಣಿಕ ಯಕ್ಷಗಾನ ಪ್ರಸಂಗ ‘ಕರ್ಣಾವಸಾನ'(ಕರ್ಣಾರ್ಜುನ ಕಾಳಗ) ತಾಳಮದ್ದಲೆಯು ವೇ.ಮೂ.ವಿನಾಯಕ ಸು ಭಟ್ಟ ಮತ್ತಿಹಳ್ಳಿ ಅವರ ದಿವ್ಯ ಉಪಸ್ಥಿತಿಯಲ್ಲಿ ಜರುಗಿತು.
ಪದ್ಮಶ್ರೀ ರಾಮಚಂದ್ರ ಹೆಗಡೆ ಚಿಟ್ಟಾಣಿ ವೇದಿಕೆಯಲ್ಲಿ, ದಿ. ಶ್ರೀ ಗಣೇಶ್ ಗಣಪತಿ ಹೆಗಡೆ ಸೂರನ್ ಸವಿ ನೆನಪಿನಲ್ಲಿ , ಶ್ರೀ ನಟರಾಜ್ ಎಂ. ಹೆಗಡೆ ಮತ್ತು ಗೆಳೆಯರ ಬಳಗ (ಯಕ್ಷಮಿತ್ರ ಬಳಗ) ನಾಣಿಕಟ್ಟಾ ಇವರ ಸಂಯೋಜನೆಯಲ್ಲಿ, ಉಪೇಂದ್ರ ಪೈ ಸೇವಾ ಟ್ರಸ್ಟ್ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ,ದಕ್ಷಿಣೋತ್ತರಕನ್ನಡ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ತಾಳಮದ್ದಲೆಯು ಅದ್ದೂರಿಯಾಗಿ  ನಡೆಯಿತು.

ಹಿಮ್ಮೇಳದಲ್ಲಿ ಗಾನ ಸಾರಥಿ,ಗಾನ ಸಾಮ್ರಾಟ- ಶ್ರೀ ರಾಘವೇಂದ್ರ ಆಚಾರ್ಯ ಜನ್ಸಾಲೆ ಇವರ ಸುಮಧುರ ಹಾಡಿಗೆ, ನಾದಶಂಕರ ಶಂಕರ ಭಗವತ್ ಮದ್ದಲೆ ವಾದನದಲ್ಲಿ ಹಾಗೂ ಚಂಡೆಯಲ್ಲಿ ಯುವ ಕಲಾವಿದ,ಚಂಡೆ ಸಾರಥಿ ಪ್ರಸನ್ನ ಹೆಗ್ಗಾರ್ ಸಹಕರಿಸಿದರು.
ಭಾವನಾತ್ಮಕವಾಗಿ ಕರ್ಣನ ಪಾತ್ರದಲ್ಲಿ ಡಾ. ಪ್ರೊ‌. ವಿನಾಯಕ ಭಟ್ಟ, ಶಲ್ಯನ ಪಾತ್ರದಲ್ಲಿ ಪ್ರೋ. ಪವನ್ ಕಿರಣಕೆರೆ, 1 ನೇ ಕೃಷ್ಣನಾಗಿ ಸುಬ್ರಹ್ಮಣ್ಯ ಹೆಗಡೆ ಚಿಟ್ಟಾಣಿ,ಮತ್ತು 2 ನೇ ಭಾಗದ ಕೃಷ್ಣನಾಗಿ ವಿದ್ವಾನ್ ಶ್ರೀ ಚಂದ್ರಶೇಖರ್ ಭಟ್ ಗಾಳಿಮನೆ, ಅರ್ಜುನನಾಗಿ ಪ್ರೋ.ಅರುಣ್ ಶಿವಮೊಗ್ಗ, ಸರ್ಪಾಸ್ತ್ರ ಪಾತ್ರದಲ್ಲಿ ಶ್ರೀ ಮಹಾಬಲೇಶ್ವರ್ ಭಟ್ಟ ಇಟಗಿ ಸಮರ್ಥವಾಗಿ ನಿರ್ವಹಿಸಿದರು.ಸೇರಿದ ಐದನೂರಕ್ಕೂ ಹೆಚ್ಚಿನ ಪ್ರೇಕ್ಷಕರು ಸಾಕ್ಷಿಯಾದರು..


ಈ ಸಂದರ್ಭದಲ್ಲಿ ಯಕ್ಷಗಾನದ ಅಪ್ರತಿಮ ಕಲಾವಿದರಾದ,ಯಕ್ಷಸಾಧಕರಾದ,ರಾಜ್ಯ ಯಕ್ಷಗಾನ ಅಕಾಡೆಮಿಯಿಂದ ನೀಡುವ ಯಕ್ಷಸಿರಿ ಪ್ರಶಸ್ತಿ ಪುರಸ್ಕೃತ ಕೃಷ್ಣಾಜಿ(ಬೆಡ್ಕಣಿ) ನಾಣಿಕಟ್ಟಾ ಮತ್ತು ಕಲಾ ಆರಾಧಕರಾದ “ಕಲಾಭಾಸ್ಕರ” ಮಹಾಬಲೇಶ್ವರ ಭಟ್ ಇಟಗಿ ಇವರಿಗೆ ಗಣ್ಯರ ಸಮ್ಮುಖದಲ್ಲಿ ಸಂಘಟಕರಿಂದ ಗೌರವ ಸನ್ಮಾನ ನಡೆಯಿತು.
ಈ ಸಂದರ್ಭದಲ್ಲಿ ವೇ. ಮೂ.ವಿನಾಯಕ ಭಟ್ಟ ಮತ್ತೀಹಳ್ಳಿ,ಉಪೇಂದ್ರ ಪೈ ಸೇವಾ ಟ್ರಸ್ಟ್ ನ ಅಧ್ಯಕ್ಷ,ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷರೂ ಆದ ಶ್ರೀ ಉಪೇಂದ್ರ ಪೈ ಶಿರಸಿ, ಜಿಲ್ಲಾ ಸಹಕಾರಿಗಳಾದ ತ್ಯಾಗಲಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ  ಶ್ರೀ ಎನ್‌.ಬಿ.ಹೆಗಡೆ ಮತ್ತಿಹಳ್ಳಿ, ಉದ್ಯಮಿಗಳಾದ ಆರ್.ಜಿ. ಹೆಗಡೆ ವಾಜಗದ್ದೆ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಸುಭಾಸ್ ನಾಯ್ಕ ಕಾನ್ಸೂರು,ಪ್ರಭಾಕರ್ ಹೆಗಡೆ, ಎಂ.ಎಂ. ಹೆಗಡೆ,ಉಮೇಶ್ ಹೆಗಡೆ, ರವಿ ಹೆಗಡೆ, ಹಾಗೂ ಸಂಘಟಕರಾದ ನಟರಾಜ ಹೆಗಡೆ, ಆರ್.ಟಿ. ನಾಯ್ಕ್, ರಮೇಶ್ ಬಾಳೆಕೈ ಶಶಿಧರ ಹೆಗಡೆ,ಉಮೇಶ ಹೆಗಡೆ,ಗಣಪತಿ ಹೆಗಡೆ , ಮಂಜುನಾಥ ಎಮ್ ಹೆಗಡೆ, ಹಾಗೂ ಐನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕಲಾಪ್ರೇಮಿಗಳು ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಆರ್. ಟಿ. ನಾಯ್ಕ ಹಂಗಾರಖಂಡ, ಪ್ರಸ್ಥಾವನೆ ಮತ್ತು ಸ್ವಾಗತವನ್ನು ನಟರಾಜ್ ಎಮ್ ಹೆಗಡೆ, ಪ್ರಾರ್ಥನೆಯನ್ನು ಕುಮಾರಿ ಅರ್ಚನಾ ಆರ್ ಹೆಗಡೆ ಹಾಗೂ ಶ್ರೀ ಶಶಿಧರ್ ಹೆಗಡೆ ತ್ಯಾಗಲಿ ಮತ್ತು ಶ್ರೀ ರಮೇಶ ನಾಯ್ಕ ಬಾಳೇಕೈ ಸನ್ಮಾನ ಪತ್ರವನ್ನು ವಾಚಿಸಿದರು. ವಂದನಾರ್ಪಣೆಯನ್ನು ರಮೇಶ್ ನಾಯ್ಕ್ ಬಾಳೆಕೈ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿಸೂರನ್ ಕುಡುಂಬದ ಏಲ್ಲಾ ಸದಸ್ಯರು,ಸಮಿತಿಯ ಏಲ್ಲಾ ಸದಸ್ಯರು , ಐದನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಕಲಾಪ್ರೇಮಿಗಳು “ಕರ್ಣಾವಸಾನ” ಕ್ಕೆ ಸಾಕ್ಷಿಯಾದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *