ಈಗೆಲ್ಲಿವೆ ಚಿವ್, ಚಿವ್ ಗುಬ್ಬಿ ?

ಈಗೆಲ್ಲಿವೆ ಚಿವ್, ಚಿವ್ ಗುಬ್ಬಿ ?

ಇತ್ತೀಚೆಗೆ ನಿಧನರಾದ ಮುಂಡಗೋಡ ಮೂಲದ ಶಿರಸಿಯ ಪಿ.ಡಿ.ಸುದರ್ಶನ್ ಒಮ್ಮೆ ಗುಬ್ಬಿಗಳ ಬಗ್ಗೆ ಮಾತನಾಡುತ್ತಾ ‘ಮೊಬೈಲ್ ಸಿಗ್ನಲ್, ಟಾವರ್‍ರೇಡಿಯೇಷನ್ ಗಳಿಂದಾಗಿ ಗುಬ್ಬಿಸಂತತಿನಶಿಸುತ್ತಿದೆ. ಪ್ರತಿಮನೆಯ ನೀರವತೆಯನ್ನು ಚಿಂವ್, ಚಿಂವ್ ಶಬ್ಧದಿಂದ ಜೀವಂತವಿರಿಸುತ್ತಿದ್ದ ಗುಬ್ಬಿಗಳ ಕಥೆ ವ್ಯಥೆಯೆನಿಸುತ್ತಿದೆ’ ಎಂದಿದ್ದರು.
ನನ್ನ ಮನಸ್ಸು ಬಾಲ್ಯಕ್ಕೆ ನೆಗೆದಿತ್ತು. ನಮ್ಮ ಮನೆಯ ಮಧ್ಯ ಕೋಣೆಯ ಸಾಲು ಸಾಲು ಧರ್ಮಸ್ಥಳದ ಮಂಜು, ಅಣ್ಣಪ್ಪ, ಇಡಗುಂಜಿ ಗಣಪ, ಮುರ್ಡೆಶ್ವರದ ಮಾತೋ(ಭಾ)ಬಾರ ಚಂದ್ರಗುತ್ತಿ ರೇಣುಕಮ್ಮ, ಕೊಡಲಿಯ ಪರಶುರಾಮ! ಇಂಥ ನಿಷ್ಪ್ರಯೋಜಕ, ಅಮಾಯಕರ ಚಿತ್ರಪಟದ ಪೊಟರೆಯಂಥ ಜಾಗವನ್ನು ಗುಬ್ಬಿಗಳು ತಮ್ಮಆವಾಸಸ್ಥಾನವನ್ನಾಗಿಸಿಕೊಂಡಿದ್ದವು.
ಜಗಲಿಯ ಚಿತ್ರಪಟಗಳ ಹಿಂದೆ ಕೆಲವು ಸಂದಿಗೊಂದಿಗಳಲ್ಲಿ ವಾಸಿಸುತ್ತ ಕೊಟ್ಟಿಗೆ, ಕಟ್ಟಿಗೆ ಮನೆ, ಹೊಡಸಲು ಎಲ್ಲೆಂದರಲ್ಲಿ ಕಂಡುಬರುತ್ತಿದ್ದ ಗುಬ್ಬಿಗಳ ರಗಳೆಗಳು ಮಾತ್ರ ನಮ್ಮ
ಜಗಲಿಯಲ್ಲೇ
ವಿಪರೀತವಾಗಿದ್ದವು, ಜನ,
ಶಬ್ಧವಿಲ್ಲದ ಸಮಯದಲ್ಲಿ ಚಿ..ಂವ್‍ಗುಟ್ಟುತ್ತ, ಮನುಷ್ಯ ಪ್ರಾಣಿ ಕಾಣುತ್ತಲೇ ಗೊಂದಲಗೊಂಡು ತುಸು ಹೆಚ್ಚೇ ಚಿಂವ್, ಚಿಂವ್ ಎನ್ನುತ್ತಿದ್ದವು. ಕೆಲವೊಮ್ಮೆ ಮನುಷ್ಯರಿಗೆ ಹೆದರಿ ಹಾರುತ್ತಾ ಗೂಡು, ಮೊಟ್ಟೆ, ಮರಿಗಳನ್ನೇ ನೆಲಕ್ಕೆ ಬೀಳಿಸಿಕೊಂಡು ಗೋಳಾಡುವಾಗ ನಮಗೆ ಪಾಪ ಎನಿಸಿದ್ದಿದೆ.
ಮಳೆಗಾಲದಲ್ಲಿಮಂದವಾಗಿ, ಚಳಿ, ಬೇಸಿಗೆಅವಧಿಯಲ್ಲಿ ದಿನವಿಡೀ ಚಿವ್‍ಗುಟ್ಟುತ್ತಿದ್ದ ಈ ಗುಬ್ಬಿಗಳು ಮೌನವಾಗಿರುತ್ತಿದ್ದವೋ ? ರಾತ್ರಿ ಸಮಯಕ್ಕೆ ಗುಳೆ ಹೋಗುತ್ತಿದ್ದವೋ?. ದಿನದಲ್ಲಿ ಆಗೀಗ ಚಿಂವ್, ಚಿರ್-ಪುರ್ ಮಾಡುತಿದ್ದ ಗುಬ್ಬಿಗಳು. ರಾತ್ರಿ ಮೌನ ವೃತಕ್ಕೆ ಶರಣಾಗುತಿದ್ದವೋ! ಗೊತ್ತಿಲ್ಲ.
ನಮ್ಮ ಸಂಗಾತಿಗಳಂತೆ ಜತೆಗಿದ್ದು, ಈಗ ನೌಕರಿಗಾಗಿ ಊರು ಬಿಟ್ಟಿರುವ ಸ್ನೇಹಿತರಂತೆ ಅದೃಶ್ಯವಾಗಿರುವ ಗುಬ್ಬಿಗಳು ರಜೆಗೆ ಬರುವ ಸ್ನೇಹಿತರಂತೆ ಆಗೀಗ ಬಂದು ಹೋಗುತ್ತಿದ್ದರೆ ಅವುಗಳು ಬದುಕಿವೆ ಎಂಬುದನ್ನಾದರೂ ಸಮಾಧಾನಕ್ಕೆ ಬಳಸಿಕೊಳ್ಳಬಹುದಿತ್ತು. ಆದರೆ, ಟಾರ್ ರಸ್ತೆ ಆಗುವ ಮುನ್ನವಿದ್ದ ಮನೆ ಮುಂದಿನ ದಾಸವಾಳದ ಗಿಡದಂತೆ, ಗುಬ್ಬಿಗಳು ನಾಪತ್ತೆ.
ಮರದ ಬಡ್ಡೆ ಬುಡದ ಮೇಲೆ ಶೋ ಹೂವಿನ ಗಿಡದ ಕೊಂಬೆಯಂತೆ ತಲೆಎತ್ತಿ ನಿಂತು. ತನ್ನ ಮೇಲಿನ ಕೊಂಬೆಯ ಮರೆಯಲ್ಲಿ ಮಳೆ, ಬಿಸಿಲು, ಗಾಳಿಗೆ ಬಚ್ಚಿಟ್ಟುಕೊಂಡಂತೆ ಸುಮ್ಮನೆ ಕೂತಿರುತ್ತಿದ್ದ ದಾಸವಾಳದ ರೆಂಬೆಯ ಗುಬ್ಬಿಗೂಡು ಈಗಿಲ್ಲ.
ಗುಬ್ಬಿಗಳು ಗಿಡಗಳ ಬೇಲಿ ಬೋನ್ಸಾಯಿಯಂತಹ ದಾಸವಾಳದ ಗಿಡಗಳು, ಇವೆಲ್ಲ ಜೀವಪ್ರಬೇಧಗಳ ಕ್ರಮೇಣ ನಾಶದ ಸಂಕೇತಗಳೆ ? ಅರ್ಥವಾಗುತ್ತಿಲ್ಲ.
ಮನೆ ಬೇಲಿಯ ನಿತ್ಯಪುಷ್ಪದ ಮೂರ್ನಾಲ್ಕು ದಾಸವಾಗಳು ಟಾರ್ ರಸ್ತೆ-ಗಟಾರಕ್ಕೆ ಬಲಿಯಾಗಿವೆ. ಅವುಗಳಲ್ಲಿರುತ್ತಿದ್ದ ಗುಬ್ಬಿ-ಗುಬ್ಬಿಗೂಡುಗಳು ಎಲ್ಲಿವೆ? ಎಂದು ಯಾರನ್ನು ಕೇಳೋಣ.
ಜಗತ್ತಿನಾದ್ಯಂತ ಬಹುತೇಕ ದೇಶಗಳಲ್ಲಿ ಜನವಸತಿ ಇರುವೆಡೆ ಮಾತ್ರ ಕಂಡುಬರುವ ಈ ಮನೆ ಗುಬ್ಬಿಗಳು ಮನಮೋಹಕವಾಗಿ ಕಾಣುವುದು, ಅವುಮಾಡುವ ನೀರುಸ್ನಾನ, ಧೂಳುಸ್ನಾನಗಳ ಸಮಯದಲ್ಲಿ.
ಅವು ನೈಸರ್ಗಿಕ ಅನುಕೂಲತೆಗಳಿಗಿಂತ ಹೆಚ್ಚಾಗಿ ಮಾನವ ನಿರ್ಮಿತ ಸರಳ ಜಾಗ, ನೈಸರ್ಗಿಕ ಗಿಡಗಂಟಿಗಳ ಮರೆಯಲ್ಲೇ ಗೂಡು ಕಟ್ಟುವುದನ್ನು ಬಯಸುತ್ತವೆ. ಸರಿಸುಮಾರು ಹದಿನೈದು ವರ್ಷ ಬದುಕುವ ಗುಬ್ಬಿಗಳು ಮಾನವನ ಆಸೆ, ಲೈಗಿಕತೆಯ ಸಂತ್ರಪ್ತತೆಯ ಸಂಕೇತವಂತೆ!
.ಜಾಗತೀಕರಣ, ಯಾಂತ್ರಿಕರಣ ಮನುಷ್ಯನ ಮನುಷ್ಯತ್ವ ಕೊಂದಿದೆ. ಮಾನವರ ನಡುವಿನ ನಂಬಿಕೆ, ಪ್ರೀತಿ, ವಿಶ್ವಾಸಗಳಿಗೆ ಕೂಡ ಜಾಗತೀಕರಣದ ಕೊಳ್ಳುಬಾಕತನ, ದುರಾಸೆ ದುಬಾರಿಯಾಗಿ ಪರಿಣಮಿಸಿದೆ. ಈ ಸಮಯದಲ್ಲಿ ಮನುಷ್ಯನ ಒಡನಾಡಿಗಳಾಗಿದ್ದ ಗುಬ್ಬಿಗಳು ಹೋದವೆಲ್ಲಿ? ಎಂದು ಯೋಚಿಸಿದರೆ.
ಅವುಗಳನ್ನು ಮೊಬೈಲ್, ಟಿ.ವಿಗಳ ರೇಡಿಯೇಷನ್ ಮನೆಯಿಂದ ದೂರಮಾಡುವಲ್ಲಿ ಯಶಸ್ವಿಯಾಗಿದೆ. ಟಿ.ವಿ ಮೊಬೈಲ್ ಸೇರಿದಂತೆ ಆಧುನಿಕ ಯಂತ್ರೋಪಕರಣಗಳ ಅತಿಯಾದ ಬಳಕೆ ಮನುಷ್ಯ ಸ್ನೇಹಿ ಗುಬ್ಬಿಗಳ ಮನುಷ್ಯ ಪ್ರೀತಿಯನ್ನು ದೂರವಾಗಿಸಿದೆ.
ಗುಬ್ಬಿಗಳ ಕಣ್ಮರೆಗೆ ಮುಖ್ಯಕಾರಣ ಮೊಬೈಲ್, ಟಿ.ವಿ, ಡಿಟಿಎಚ್. ರೇಡಿಯೇಷನ್‍ಗಳಾದರೆ, ಅವುಗಳೊಂದಿಗೆ ಏರುತ್ತಿರುವ ವಿಪರೀತ ಸೆಕೆ, ಅತ್ಯಧಿಕ ಕೀಟನಾಶಕ ಬಳಕೆ, ಗುಬ್ಬಿಗಳ ಪ್ರೀತಿಯ ಆಹಾರಗಳಾದ ಕಾಳು-ಕಡಿ, ಹುಳುಗಳ ಲಭ್ಯತೆ ಪ್ರಮಾಣದ ಇಳಿಕೆ. ಹೀಗೆ ನಮ್ಮ ಪ್ರೀತಿಯ (ಮನೆ) ಗುಬ್ಬಿಗಳನ್ನು ಸ್ಮರಿಸಲು ಈ ವರ್ಷದ ಮಾರ್ಚ್ 23ರ ‘ವಿಶ್ವ ಗುಬ್ಬಿದಿನ’ಕಾರಣವಾದಂತೆ.
ಅದನ್ನು ನೆನಪಿಸಿದ ‘ಗುಬ್ಬಿ ಪ್ರೀತಿ’ಗೂ ಸಲಾಂ-ನಮಸ್ತೆ ಎನ್ನಬೇಕು.
ನಮ್ಮ ಮನೆ, ಬದುಕಿನ ಅಂಗವಾದಂತಿದ್ದ ಗುಬ್ಬಿಕೂಗು, ಸಾಂಗತ್ಯ ಈಗಲೂ ಪ್ರತಿಧ್ವನಿ.ಮಾಸದ ನೆನಪು, ಜಾಗತಿಕ ತಾಪಾಮಾನ, ಯಾಂತ್ರೀಕರಣ ಏರಿಕೆ ದುಷ್ಪರಿಣಾಮಗಳ ಪರಿಣಾಮವಾಗಿ ಗುಬ್ಬಿ ಮಾಯವಾದಂತೆ ಜೀವವೈವಿಧ್ಯತಾ ಸರಣಿ ಮುಂದುವರೆದರೆ……
ಧರೆ ಹತ್ತಿ ಉರಿದೊಡೆ….
ಸಿರಿಯ ಗರ ಬಡಿದೊಡೆ……
_ಕೋಲ್‍ಶಿರ್ಸಿ ಕನ್ನೇಶ್. ( 07-04-14)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *