ಸಮಾರೋಪ,ಸನ್ಮಾನ,ಚಕ್ರವ್ಯೂಹ…ನಾದತರಂಗಿಣಿ ವಿಶೇಶ!

ಹಾರ್ಸಿಕಟ್ಟಾ ಕಲಾಪೋಷಕರ ಊರಾಗಿದ್ದು, ಕಲೆ,ಸಂಸ್ಕೃತಿ,ಕ್ರೀಡಾ ಪೋಷಣೆಗಳಿಂದ ಈ ಗ್ರಾಮಕ್ಕೆ ಪ್ರತ್ಯೇಕ ಐಡೆಂಟಿಟಿ ದೊರೆತಿದೆ. -ಕನ್ನೇಶ್‌

ಸಿದ್ದಾಪುರ
ಯಕ್ಷಗಾನದಿಂದ ಪುರಾಣ ಕಥೆಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಉತ್ತಮ ಸಂಸ್ಕೃತಿ ಪೋಷಣೆಗೆ ಉತ್ತೇಜನ ದೊರೆಯುತ್ತದೆ . ಕಳೆದ ವರ್ಷ ಉಪೇಂದ್ರ ಪೈ ಸೇವಾ ಟ್ರಸ್ಟ್ ನಿಂದ ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಹತ್ತು ಯಕ್ಷಗಾನ ಕಾರ್ಯಕ್ರಮ ಆಯೋಜಿಸಿಲಾಗಿತ್ತು. ಈ ವರ್ಷ ೨೦ ಯಕ್ಷಗಾನ ಕಾರ್ಯಕ್ರಮ ಮಾಡಲಾಗುವುದು ಎಂದು ಉದ್ಯಮಿ ಉಪೇಂದ್ರ ಪೈ ಶಿರಸಿ ಹೇಳಿದರು.


ತಾಲೂಕಿನ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ಯಕ್ಷತರಂಗಿಣಿ ಹಾರ್ಸಿಕಟ್ಟಾ ಆಯೋಜಿಸಿದ್ದ ಮಕ್ಕಳ ಯಕ್ಷಗಾನ ತರಬೇತಿ ಶಿಬಿರದ ಮುಕ್ತಾಯ ಸಮಾರಂಭವನ್ನು ಉದ್ಘಾಟಿಸಿ ಯಕ್ಷಸಿರಿ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಕೃಷ್ಣ ಜಿ. ಬೇಡ್ಕಣಿ ಅವರನ್ನು ಸನ್ಮಾನಿಸಿ ಬುಧವಾರ ಮಾತನಾಡಿದರು.


ಸನ್ಮಾನ ಸ್ವೀಕರಿಸಿ ಮಾತನಾಡಿದ ಕೃಷ್ಣ ಜಿ.ನಾಯ್ಕ ಬೇಡ್ಕಣಿ ಯಕ್ಷಗಾನ ಕಲೆ ಮುಂದುವರೆಯಬೇಕಾದರೆ ಮಕ್ಕಳಿಗೆ ಯಕ್ಷಗಾನವನ್ನು ಕಲಿಸಬೇಕು.ಮಕ್ಕಳಿಗೆ ಯಕ್ಷಗಾನವನ್ನು ಕಲಿಸುವುದರಿಂದ ಕಲೆಯ ಬೆಳವಣಿಗೆಯೂ ಆಗುತ್ತದೆ ಎಂದು ಹೇಳಿದರು.


ಪ್ರಾಚಾರ್ಯ ಎಂ.ಕೆ.ನಾಯ್ಕ ಹೊಸಳ್ಳಿ ಅಧ್ಯಕ್ಷತೆವಹಿಸಿದ್ದರು. ಟೀಮ್ ಪರಿವರ್ತನಾ ಸಂಸ್ಥಾಪಕ ಹಿತೇಂದ್ರ ನಾಯ್ಕ, ಪತ್ರಕರ್ತ ಕನ್ನೇಶ ನಾಯ್ಕ ಕೋಲಶಿರ್ಸಿ, ಹಾರ್ಸಿಕಟ್ಟಾ ಅಘನಾಶಿನಿ ಸಾಂಬಾರು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಹೆಗಡೆ ಕುಂಬಾರಕುಳಿ, ಅನಂತ ಶಾನಭಾಗ, ಪಿ.ವಿ.ಹೆಗಡೆ, ಧನಂಜಯ ನಾಯ್ಕ ಉಪಸ್ಥಿತರಿದ್ದರು.
ಪತ್ರಕರ್ತ ನಾಗರಾಜ ಹೆಗಡೆ ಮತ್ತಿಗಾರ ಅಭಿನಂದನಾ ಮಾತನಾಡಿದರು. ರಮೇಶ ಹೆಗಡೆ ಹಾರ್ಸಿಮನೆ ನಿರ್ವಹಿಸಿದರು. ನಂದನ ನಾಯ್ಕ ಅರಶಿನಗೋಡ ವಂದಿಸಿದರು.


ನಂತರ ಶಿಬಿರದ ವಿದ್ಯಾರ್ಥಿಗಳಿಂದ ಚಕ್ರವ್ಯೂಹ ಯಕ್ಷಗಾನ ಪ್ರದರ್ಶನಗೊಂಡಿತು. ಹಿಮ್ಮೇಳದಲ್ಲಿ ರಾಮಚಂದ್ರ ನಾಯ್ಕ ಹೆಮ್ಮನಬೈಲ್, ಮಂಜುನಾಥ ಹೆಗಡೆ ಗುಡ್ಡೆದಿಂಬ, ಧನಂಜಯ ನಾಯ್ಕ ಪುರದಮಠ ಸಹಕರಿಸಿದರು. ಶಿಬಿರಾರ್ಥಿಗಳೊಂದಿಗೆ ಕೃಷ್ಣ ಜಿ.ನಾಯ್ಕ ಬೇಡ್ಕಣಿ ದ್ರೋಣನ ಪಾತ್ರದಲ್ಲಿ ಹಾಗೂ ಯುವರಾಜ್ ನಾಯ್ಕ ಹಳಿಯಾಳ ಅಭಿಮನ್ಯುವಿನ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿ ಮತ್ತು ಕು.ಭೂಮಿಕಾ ಪ್ರಸನ್ನ ಹೆಗಡೆ ಹೊಸಗದ್ದೆ ಇವಳು ಪ್ರಥಮ ಬಾರಿಗೆ ಚಂಡೆ ನುಡಿಸಿ ಕಲಾಸಕ್ತರ ಮೆಚ್ಚುಗೆಗಳಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *