ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.. ಉತ್ತರಕನ್ನಡ ನೂತನ ಡಿಸಿ ಪ್ರಭುಲಿಂಗ ಕವಲಿಕಟ್ಟಿ

ರಾಜ್ಯ ಸರ್ಕಾರ ಡಿಸಿ ಮುಲ್ಲೈ ಮುಗಿಲನ್ ಎಂ.ಪಿ ಅವರನ್ನು ವರ್ಗಾವಣೆ ಮಾಡಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿ ನೇಮಕಗೊಳಿಸಿದೆ. ಉತ್ತರಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಬೆಂಗಳೂರಿನ ದಿ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನಿರ್ದೇಶಕರಾಗಿದ್ದ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಕಾಂತಾರ ವಿವಾದ: ನಟ ಚೇತನ್‌ಗೆ ದಲಿತ ಸಂಘಟನೆಗಳ ಬೆಂಬಲ

ಕಾಂತಾರ ಚಿತ್ರದ ವಿರುದ್ಧ ಮಾತನಾಡಿ ವಿರೋಧಗಳನ್ನು ಎದುರಿಸುತ್ತಿರುವ ನಟ ಚೇತನ್ ಅವರಿಗೆ ದಲಿತ ಸಂಘಟನೆಗಳು ಶನಿವಾರ ಬೆಂಬಲ ವ್ಯಕ್ತಪಡಿಸಿವೆ.

Actor chethan

ಮೈಸೂರು: ಕಾಂತಾರ ಚಿತ್ರದ ವಿರುದ್ಧ ಮಾತನಾಡಿ ವಿರೋಧಗಳನ್ನು ಎದುರಿಸುತ್ತಿರುವ ನಟ ಚೇತನ್ ಅವರಿಗೆ ದಲಿತ ಸಂಘಟನೆಗಳು ಶನಿವಾರ ಬೆಂಬಲ ವ್ಯಕ್ತಪಡಿಸಿವೆ. 

ರಿಷಬ್ ಶೆಟ್ಟಿ ಮಾತು ಸುಳ್ಳು, ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು. ವೈದಿಕ ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯದೊಂದಿಗೆ ಪ್ರದರ್ಶಿಸಬೇಕು ಎಂದು ಚೇತನ್ ಅವರು ಹೇಳಿದ್ದರು. ಈಗಾಗಲೇ ಚಿತ್ರ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಜನರಿಂದಲಷ್ಟೇ ಅಲ್ಲದೆ, ಸ್ಟಾರ್ ನಟ-ನಟಿಯರಿಂದಲು ಪ್ರಶಂಸೆ ಪಡೆಯುತ್ತಿದೆ. ಈ ಸಂದರ್ಭದಲ್ಲಿ ಚಿತ್ರದ ಕುರಿತು ವಿವಾದ ಸೃಷ್ಟಿಸಿರುವ ನಟ ಚೇತನ್ ಅವರ ವಿರುದ್ಧ ಹಲವರು ಕಿಡಿಕಾರುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಚೇತನ್ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿರುವ ದಲಿತ ಮುಖಂಡ ಮತ್ತು ಮಾಜಿ ಮೇಯರ್ ಪುರುಷೋತ್ತಮ ಅವರು, “ಪೂಜೆ ಮಾಡುವುದು ಹಿಂದೂ ಸಂಸ್ಕೃತಿಯಾಗಿರಲಿಲ್ಲ. ಸುಮಾರು 3,500 ವರ್ಷಗಳ ಹಿಂದೆ ಮಧ್ಯ ಏಷ್ಯಾದಿಂದ ಬಂದ ಆರ್ಯರು ಇದನ್ನು ಪರಿಚಯಿಸಿದರು ಮತ್ತು ವೈದಿಕ ಸಂಸ್ಕೃತಿಯನ್ನು ಪ್ರಾರಂಭಿಸಿದರು. ದ್ರಾವಿಡರು ಮತ್ತು ಮೂಲ ವಂಶಸ್ಥರ ಸಂಸ್ಕೃತಿ ಮತ್ತು ಸಂಪ್ರದಾಯಗಳು ವೈದಿಕ ಸಂಸ್ಕೃತಿಗಿಂತ ಹಳೆಯದು, ”ಎಂದು ಅವರು ಹೇಳಿದರು.

ಆರ್ಯರು ಭಾರತಕ್ಕೆ ಬರುವ ಮೊದಲು ಯಾವುದೇ ಪೂಜೆ ಇರಲಿಲ್ಲ ಎಂದು ಕನ್ನಡ ಲೇಖಕ ಕೆ.ಎಸ್.ಭಗವಾನ್ ಹೇಳಿದ್ದಾರೆ.”ಚೇತನ್ ಅವರು ಹೇಳಿದ್ದು ಸರಿಯಿದೆ. ಮೂಲ ವಂಶಸ್ಥರು ಭೂತ ಕೋಲವನ್ನು ಅಭ್ಯಾಸ ಮಾಡಲಿಲ್ಲ, ಆದರೆ, ಇದು ವೈದಿಕ ಆಚರಣೆಗಳಿಂದ ಪ್ರಾರಂಭವಾಯಿತು ತಿಳಿಸಿದರು. 

ಇದೇ ವೇಳೆ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ‘ಹಿಂದೂ ದೇವರುಗಳು ಮತ್ತು ಆಚಾರ ವಿಚಾರಗಳ ಬಗ್ಗೆ ವಿವಾದ ಹುಟ್ಟುಹಾಕಲು ಚೇತನ್‌ಗೆ ಮುಸ್ಲಿಮರಿಂದ ಹಣ ನೀಡಲಾಗಿದೆ’ ಎಂದು ಆರೋಪಿಸಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *