ಶಿರಸಿ ಕ್ಷೇತ್ರ..ಕಾಗೇರಿ ಬೇಡ,ಸಿದ್ಧಾಪುರಕ್ಕಿರಲಿ ಅವಕಾಶ

ಶಿರಸಿ ಕ್ಷೇತ್ರದ ಟಿಕೇಟ್‌ ನಿರಂತರವಾಗಿ ಶಿರಸಿ ತಾಲೂಕಿಗೇ ಸಿಗುತಿದ್ದು ಈ ಬಾರಿ ಶಿರಸಿ ವಿಧಾನಸಭಾ ಕ್ಷೇತ್ರದ ಟಿಕೇಟ್‌ ಸಿದ್ಧಾಪುರ ತಾಲೂಕಿನವರಿಗೆ ದೊರೆಯಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ.

ಶಿರಸಿ-ಸಿದ್ಧಾಪುರ ತಾಲೂಕುಗಳನ್ನೊಳಗೊಂಡ ಶಿರಸಿ ಕ್ಷೇತ್ರದ ಕಾಂಗ್ರೆಸ್‌ ಮತ್ತು ಬಿ.ಜೆ.ಪಿ. ಪಕ್ಷಗಳ ಅವಕಾಶಗಳು ನಿರಂತರವಾಗಿ ಶಿರಸಿ ತಾಲೂಕಿಗೇ ದೊರೆಯುತ್ತಿವೆ. ಈ ಬಗ್ಗೆ ಬಿ.ಜೆ.ಪಿ.ಯಲ್ಲಿ ಗುಸು,ಗುಸು ಎನ್ನುವ ಕ್ಷೀಣ ಧ್ವನಿಯ ಆಕ್ಷೇಪಗಳು ಕೇಳಿಬರುತ್ತಿವೆ. ಬಿ.ಜೆ.ಪಿ.ಗಿಂತ ಒಂದು ಹೆಜ್ಜೆ ಮುಂದಿಟ್ಟಿರುವ ಕಾಂಗ್ರೆಸ್‌ ಈ ಬಾರಿ ಸಿದ್ಧಾಪುರಕ್ಕೆ ಅವಕಾಶ ನೀಡಿ ಎಂದು ಪ್ರತಿಪಾದಿಸುತ್ತಿದೆ.

ಬುಧವಾರ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಕಛೇರಿಯಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕರು ಹಾಲಿ ಶಾಸಕ,ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರ ಕಾರ್ಯವೈಖರಿ ವಿರೋಧಿಸಿದರು. ಶಿರಸಿ ಕ್ಷೇತ್ರದಲ್ಲಿ ಸಿದ್ಧಾಪುರಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಎಲ್ಲಾ ಪಕ್ಷಗಳೂ ಸಿದ್ಧಾಪುರಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಸಿದ್ಧಾಪುರ-ಶಿರಸಿಗಳಲ್ಲಿ ಅಭಿವೃದ್ಧಿ ಕಾರ್ಯಗಳಿಲ್ಲದೆ ಕ್ಷೇತ್ರ ಸೊರಗಿದೆ. ಅಕ್ರಮಸಾರಾಯಿ ಮಾರಾಟ,ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ರಾಜ್ಯ ವಿಧಾನಸಭಾ ಅಧ್ಯಕ್ಷರು ಅಕ್ರಮ ಚಟುವಟಿಕೆಗಳ ಪರವಾಗಿ ನಿಂತಿರುವುದು ನಾಚಿಗೆಗೇಡು.-ವಸಂತ್‌ ನಾಯ್ಕ

ಶಿರಸಿ ಕ್ಷೇತ್ರದ ಕಾಂಗ್ರೆಸ್‌ ಟಿಕೇಟ್‌ ನಿರಂತರವಾಗಿ ಶಿರಸಿ ತಾಲೂಕಿನ ಪಾಲಾಗುತ್ತಿದೆ. ಈ ಬಾರಿ ಸಿದ್ಧಾಪುರ ತಾಲೂಕನ್ನು ಪರಿಗಣಿಸಬೇಕು.ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ವಸಂತನಾಯ್ಕ ಉತ್ತಮ ಕೆಲಸ ಮಾಡಿದ್ದಾರೆ. ವಿ.ಎನ್.‌ ನಾಯ್ಕ ಈಗಾಗಲೆ ತಮ್ಮ ಹಕ್ಕು ಮಂಡಿಸಿದ್ದಾರೆ.-ಎಸ್. ಆರ್.‌ ಹೆಗಡೆ, ಕುಂಬಾರಕುಳಿ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *