ಒಂದೇ ಗುಂಪಿಗೆ ಮಾನ್ಯತೆ…ಭಾಜಪದ ಕಾಂಗ್ರೆಸ್ ದಾರಿ, ಉ.ಕ.ದಲ್ಲಿ ಬಿ.ಜೆ.ಪಿ. ಆಡಳಿತದ ಫಲಶೃತಿ!?!

ರಾಜಕೀಯದಲ್ಲಿ ಗುಂಪು ಕಟ್ಟುವುದು,ಗುಂಪುಗಾರಿಕೆ ಮಾಡುವುದು ಸಾಮಾನ್ಯ ವಿಚಾರ. ಆದರೆ ಈ ಗುಂಪುಗಾರಿಕೆ ರಾಜಕೀಯ ಪಕ್ಷ, ನಾಯಕರಿಗೆ ಮಾರಕವಾಗುವುದು ಲಾಗಾಯ್ತಿನ ವಾಸ್ತವ. ದೇಶ,ರಾಜ್ಯಗಳಲ್ಲಿ ನಾನಾ ಪಕ್ಷಗಳ ಇಂಥ ಬಣ,ಗುಂಪುಗಳ ಹಲವು ಸುದ್ದಿಗಳಿವೆ. ಆದರೆ ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ಗುಂಪುಗಾರಿಕೆ ಇಲ್ಲಿಯ ಬಹುಸಂಖ್ಯಾತರಿಗೇ ಮಾರಕವಾಗುತ್ತಿರುವುದಕ್ಕೆ ಅನೇಕ ಉದಾಹರಣೆಗಳಿವೆ.

ಜನತಾ ದಳ ವಿಭಾಗವಾಗಲು ರಾಮಕೃಷ್ಣ ಹೆಗಡೆ ಮತ್ತು ದೇವೇಗೌಡರ ಬಣ ರಾಜಕೀಯ ಕಾರಣ. ಅದಕ್ಕೂ ಮೊದಲು ದೇವ ರಾಜ್‌ ಅರಸು, ಬಂಗಾರಪ್ಪ ಸೇರಿದ ಕೆಲವು ನಾಯಕರ ಬಣ ರಾಜಕೀಯದಿಂದ ಕಾಂಗ್ರೆಸ್‌ ಅನೇಕ ಬಾರಿ ಸೋತಿದೆ.

ಹಿಂದೆ ಜನತಾದಳದಲ್ಲಿದ್ದು ನಂತರ ಕಾಂಗ್ರೆಸ್‌ ಗೆ ಬಂದಿದ್ದ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಮೂಲಕಾಂಗ್ರೆಸ್‌ ಗೆ ಪರ್ಯಾಯವಾಗಿ ದೇಶಪಾಂಡೆ ಬಣ ರಚಿಸಿಕೊಂಡು ಕಾಂಗ್ರೆಸ್‌ ಗೆಲ್ಲಿಸಿದ್ದಕ್ಕಿಂತ ಸೋಲಿಸಿದ್ದೇ ಹೆಚ್ಚು. ಇದೇ ದಾರಿಯಲ್ಲಿ ಸಾಗಿದ್ದ ಮಾಜಿ ಕೇಂದ್ರ ಸಚಿವೆ ಮಾರ್ಗರೇಟ್‌ ಆಳ್ವ ಕೂಡಾ ತಮ್ಮ ಬಣ ಬೆಳೆಸಲು ಶ್ರಮಿಸಿ ಬಿ.ಜೆ.ಪಿ.ಗೆ ಸಹಕರಿಸಿದ್ದೇ ಹೆಚ್ಚು. ಇಂಥ ಬಣ.ಗುಂಪುಗಾರಿಕೆಯ ರಾಜಕಾರಣದಿಂದ ಉತ್ತರ ಕನ್ನಡ ಜಿಲ್ಲೆಯ ಅನೇಕ ಉತ್ತಮ ನಾಯಕರಿಗೆ ಅನ್ಯಾಯವಾಗಿದೆ. ಅವರಲ್ಲಿ ದೇವರಾಯ ನಾಯ್ಕ, ಪ್ರಭಾಕರ ರಾಣೆ, ಪ್ರಮೋದ್‌ ಹೆಗಡೆ, ಭೀಮಣ್ಣ ನಾಯ್ಕ ಪ್ರಮುಖರು!

ಇಂಥ ಇತಿಹಾಸದ ರಾಜಕೀಯ ಚರಿತ್ರೆಯ ಉತ್ತರ ಕನ್ನಡದಲ್ಲಿ ಈಗ ಬಿ.ಜೆ,ಪಿ,ಯ ಬಣ ರಾಜಕೀಯ ವಿಜೃಂಬಿಸುತ್ತಿದೆ. ೨೫ ವರ್ಷಗಳಿಂದ ಜನಪ್ರತಿನಿಧಿಗಳಾಗುತ್ತಿರುವ ಹಿರಿಯ ರಾಜಕಾರಣಿಗಳಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಅನಂತಕುಮಾರ ಹೆಗಡೆಗಳ ಬಣ ರಾಜಕೀಯ ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತರನ್ನು ಮೋಸಗೊಳಿಸುವ ವೈದಿಕ ರಾಜಕೀಯದ ತಂತ್ರ ಎನ್ನುವ ವದಂತಿಗಳಿವೆ. ಇದರ ಮಧ್ಯೆ ಹಿಂದುತ್ವ,ರಾಷ್ಟ್ರೀಯತೆ ಸೋಗಿನಲ್ಲಿ ರಾಜಕೀಯ ಮಾಡಿರುವ ಬಿ.ಜೆ.ಪಿ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬ್ರಾಹ್ಮಣತ್ವ ಪ್ರತಿಪಾದಿಸುತ್ತಿರುವುದಕ್ಕೆ ನೂರಾರು ಜ್ವಲಂತ ಸಾಕ್ಷಿಗಳಿವೆ. ಇದರ ನಡುವೆ ಬಿ.ಜೆ.ಪಿ. ಯ ಹಿರಿಯ ನಾಯಕರು ಉಪಾಯದಿಂದ ಹಿಂದೆ ಸರಿಸಿರುವ ನಾಯಕರಲ್ಲಿ ಹಿಂದುಳಿದ ವರ್ಗದವರೇ ಹೆಚ್ಚಿರುವುದು ದುರಂತ.

ಈಗ ಉತ್ತರ ಕನ್ನಡ ಜಿಲ್ಲೆಯ ವೈದಿಕ ರಾಜಕೀಯಕ್ಕೆ ಬಲಿಯಾಗುತ್ತಿರುವ ಪ್ರಮುಖ ಹೆಸರು ಕೆ.ಜಿ. ನಾಯ್ಕ ಹಣಜಿಬೈಲ್.‌ ಬಿ.ಜೆ.ಪಿ. ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ಕೆ.ಜಿ.ನಾ ವಿರುದ್ಧ ಆಂತರಿಕ,ಬಹಿರಂಗ ಸಂಘರ್ಷಕ್ಕಿಳಿದಿರುವ ರಾಜ್ಯ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಸಂಘಬಲದಿಂದ ವಿರೋಧಿಗಳನ್ನು ಹಣಿಯುತ್ತ ಕೆ.ಜಿ.ನಾಯ್ಕರನ್ನೇ ಗುರಿಯಾಗಿಸಿದ್ದಾರೆ.

ಕೇ.ಜಿ. ನಾಯ್ಕರ ಆಪ್ತರು, ಶಿಷ್ಯರನ್ನೇ ಅವರ ವಿರುದ್ಧ ಎತ್ತಿಕಟ್ಟುತ್ತಿರುವ ಕಾಗೇರಿ ಸರ್ಕಾರಿ ನೇಮಕಾತಿಗಳಲ್ಲಿ,ಪಕ್ಷದ ಹುದ್ದೆಗಳಲ್ಲಿ ಕೆಲವರನ್ನು ಪ್ರತಿಷ್ಠಾಪಿಸಿ ಕೆ.ಜಿ.ನಾಯ್ಕ ಬಣಕ್ಕೆ ಏಟುಕೊಡತೊಡಗಿದ್ದಾರೆ. ಇದರ ಮುಂದುವರಿದ ಭಾಗವಾಗಿ ಸಿದ್ಧಾಪುರದಲ್ಲಿ ಬಿ.ಜೆ.ಪಿ. ಮಂಡಳದ ಅಧ್ಯಕ್ಷರ ಬದಲಾವಣೆಯಾಗಿದೆ. ಕೆ.ಜಿ.ನಾಯ್ಕರ ನಂತರ ಕಾಗೇರಿಯವರ ಗುರಿಯಾದ ಜಿ.ಪಂ. ಮಾಜಿ ಸದಸ್ಯ ನಾಗರಾಜ್‌ ನಾಯ್ಕ ತಮ್ಮ ಹುದ್ದೆ ಕಳೆದುಕೊಳ್ಳುವುದರೊಂದಿಗೆ ಕಾಗೇರಿ ಬಣದ ಪ್ರಮುಖ ಮಾರುತಿ ನಾಯ್ಕ ಈ ಹುದ್ದೆ ಅಲಂಕರಿಸಿದ್ದಾರೆ. ಹೀಗೆ ಮನೆಯ ಕಿಚ್ಚು ಮನೆಯ ಸುಟ್ಟಿತಲ್ಲದೆ ..ಎನ್ನುವಂತೆ ಬಿ.ಜೆ.ಪಿ. ಒಳಬೆಂಕಿ ಬಿ.ಜೆ.ಪಿ.ಗೆ ಮಾರಕವಾಗುತ್ತಿದೆ. ಈ ಅವಕಾಶವನ್ನು ಬಳಸಿಕೊಳ್ಳಬೇಕಾಗಿದ್ದ ಕಾಂಗ್ರೆಸ್‌ ನಲ್ಲಿ ಯುದ್ದೋತ್ಸಾಹ ಕಾಣುತ್ತಿಲ್ಲ. ಆಪ್‌, ಜೆ.ಡಿ.ಎಸ್.‌ ಇತರ ಪಕ್ಷಗಳು ಇಲ್ಲಿ ಆಟಕ್ಕಿದ್ದರೂ ಲೆಕ್ಕಕ್ಕಿಲ್ಲ. ಕಾಗೇರಿ ಎನ್ನುವ ಸೋಲಿಲ್ಲದ ಸರದಾರನನ್ನು ಸೋಲಿಸುವ ವಿಚಾರದಲ್ಲಿ ಮಾತ್ರ ಸಾರ್ವತ್ರಿಕ ಏಕತೆ ಮೂಡುತ್ತಿರುವುದು ೨೫ ವರ್ಷಗಳ ಬಿ.ಜೆ.ಪಿ. ಆಡಳಿತದ ಸಾಧನೆಯ ಫಲಶೃತಿ!

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *