ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಘಟ್ಟದ ಮೇಲಿನವರಿಗೂ ನ್ಯಾಯ

ಸಿದ್ದಾಪುರ
ನಾಟಕಗಳು ಸಮಾಜದ ನೈಜ ಸ್ಥಿತಿಯನ್ನು ತಿಳಿಸುವುದರ ಜತೆಗೆ ಉತ್ತಮ ಸಂದೇಶವನ್ನು ನೀಡುತ್ತವೆ. ನಮ್ಮ ಭಾಷೆ, ಸಂಸ್ಕೃತಿಯ ಮಹತ್ವವನ್ನು ನಾಟಕಗಳು ಸಾದರಪಡಿಸುತ್ತದೆ ಎಂದು ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ರಂಗ ಸೌಗಂಧ ಸಿದ್ದಾಪುರ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದಲ್ಲಿ ಆಯೋಜಿಸಿದ್ದ ಧರ್ಮಸಾಮ್ರಾಜ್ಯ ಪೌರಾಣಿಕ ನಾಟಕಕ್ಕೆ ಚಾಲನೆ ನೀಡಿ ಅವರು ಸೋಮವಾರ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನರೇಂದ್ರ ನಾಯಕ ಮಾತನಾಡಿ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಉಳಿವಿಗಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಜಿಲ್ಲಾ ಕೇಂದ್ರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಗಳು ಘಟ್ಟದ ಕೆಳಗಿನ ತಾಲೂಕಿನ ಸಂಘಟಕರಿಗೆ ಹೆಚ್ಚು ಕಾರ್ಯಕ್ರಮ ನೀಡುತ್ತಿದೆ ಎನ್ನುವ ಆಪಾದನೆ ಇದೆ. ಮುಂದಿನ ದಿನದಲ್ಲಿ ಹಾಗಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.


ಯಕ್ಷಗಾನ ಕಲಾವಿದ ಪಿ.ವಿ.ಹೆಗಡೆ ಹೊಸಗದ್ದೆ ಅಧ್ಯಕ್ಷತೆವಹಿಸಿದ್ದರು. ಟಿಎಸ್‌ಎಸ್ ಮಾಜಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ, ವರ್ತಕ ಅನಂತ ಶಾನಭಾಗ ಉಪಸ್ಥಿತರಿದ್ದರು. ಗಣಪತಿ ಹೆಗಡೆ ಹುಲಿಮನೆ, ರಮೇಶ ಹೆಗಡೆ ಹಾರ್ಸಿಮನೆ ಕಾರ್ಯಕ್ರಮ ನಿರ್ವಹಿಸಿದರು.
ನಂತರ ರಂಗ ಸೌಗಂಧ ತಂಡದಿಂದ ದಿ.ಸೀತಾರಾಮ ಶಾಸ್ತಿç ಹುಲಿಮನೆ ರಚನೆಯ ಗಣಪತಿ ಹೆಗಡೆ ಹುಲಿಮನೆ ನಿರ್ದೇಶನದ ಧರ್ಮಸಾಮ್ರಾಜ್ಯ ನಾಟಕ ಪ್ರದರ್ಶನಗೊಂಡಿತು.

ಸಂಗೀತದಲ್ಲಿ ರಾಜೇಂದ್ರ ಕೊಳಗಿ,ಜಯರಾಮ ಭಟ್ಟ ಹೆಗ್ಗಾರಳ್ಳಿ,ಶುಭಾ ರಮೇಶ, ಭೂಮಿಕಾ ಹೆಗಡೆ ಹೊಸಗದ್ದೆ ಸಹಕರಿಸಿದರು.
ಗಣಪತಿ ಹೆಗಡೆ ಗುಂಜಗೋಡು, ರಾಜಾರಾಮ ಭಟ್ಟ ಹೆಗ್ಗಾರಳ್ಳಿ, ರಾಮ ಅಂಕೋಲೇಕರ,ನಾಗಪತಿ ಭಟ್ಟ ವಡ್ಡಿನಗದ್ದೆ, ಶ್ರೀಪಾದ ಹೆಗಡೆ ಕೋಡನಮನೆ, ಅಜಿತ ಭಟ್ಟ ಹೆಗ್ಗಾರಳ್ಳಿ, ಜನಾರ್ಧನ ಭಟ್ಟ ಗೋಕರ್ಣ, ನಂದನ ನಾಯ್ಕ ಅರಶಿನಗೋಡ,ಪ್ರವೀಣಾ ಹೆಗಡೆ ಗುಂಜಗೋಡು, ಜಯಶ್ರೀ ಹೆಗಡೆ ವಡ್ಡಿನಗದ್ದೆ ವಿವಿಧ ಪಾತ್ರನಿರ್ವಹಿಸಿ ಮೆಚ್ಚುಗೆಗಳಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *