ಸೋಜಿಗವೀಜಗ!- ಸೆಲ್ಫಿ ವಿಥ್‌ ಆನೆ!

ಹುಬ್ಬಳ್ಳಿ: ಎಲ್ಲರ ಗಮನ ಸೆಳೆಯುತ್ತಿರುವ ಆನೆ ಆಕೃತಿಯ ಈ ಮರ, ಈಗ ಸೆಲ್ಫಿ ಕೇಂದ್ರ!

ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ?

The elephant trunk tree in Dajibanpet area of Hubballi - D Hemanth

ಹುಬ್ಬಳ್ಳಿ: ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಆ ಮರ ಆನೆಯ ಆಕೃತಿಯಲ್ಲಿದ್ದು ಸೆಲ್ಫಿ ಪ್ರಿಯರಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅತ್ಯುತ್ತಮ ತಾಣವಾಗಿ ಮಾರ್ಪಾಡಾಗಿದೆ. 

ಆನೆಯ ಸೊಂಡಿಲ ಮಾದರಿಯಲ್ಲಿ ಈ ಮರ ಬೆಳೆದಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರ ಜೊತೆಗೆ ಈ ಮರಕ್ಕೆ ಪೂಜೆ ಸಲ್ಲಿಸುವ ಭಕ್ತಾದಿಗಳ ಸಂಖ್ಯೆಯೂ ಹೆಚ್ಚಳವಾಗಿದೆ. ಈ ಮರಕ್ಕೆ ಜನರು ಹಣ್ಣು, ಹೂವುಗಳನ್ನು ಅರ್ಪಿಸಲು ಪ್ರಾರಂಭಿಸಿದ್ದಾರೆ. 

ಈ ಬೇವಿನ ಮರ ಹಲವು ವರ್ಷಗಳಿಂದ ಇದೆ. ಆದರೆ ಬೆಳೆಯುತ್ತಾ ಅದು ಆನೆಯ ಸೊಂಡಿಲ ಆಕೃತಿ ಪಡೆದಿದ್ದರಿಂದ ಸ್ಥಳೀಯ ವರ್ತಕರು ಅದಕ್ಕೆ ಕಣ್ಣು ಹಾಗೂ ದಂತಗಳನ್ನು ಬರೆದಿದ್ದಾರೆ.  ಕೆಲವು ತಿಂಗಳ ಹಿಂದೆ ಬಣ್ಣ ಹಾಕಿದ ನಂತರ ಈ ಮರ ಮತ್ತಷ್ಟು ಜನಪ್ರಿಯತೆ/ ಖ್ಯಾತಿ ಗಳಿಸಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಮಂದಿ ವಾಹನ ನಿಲ್ಲಿಸಿ ತಲೆಬಾಗಿ ನಮಿಸಿ ಮುಂದೆ ಸಾಗುತ್ತಾರೆ. 

ಈ ಬಗ್ಗೆ ಮಾತನಾಡಿರುವ ಕಲಬುರಗಿ ಮ್ಯಾಚಿಂಗ್ ಸೆಂಟರ್ ನ ಮಾಲಿಕರಾಗಿರುವ ಉದಯ್ ಕಲಬುರಗಿ, ಈ ಮರ ತಮ್ಮ ಮಳಿಗೆಯ ಪಕ್ಕದಲ್ಲೇ ಇದ್ದು, ಬಾಲ್ಯದಿಂದಲೂ ಈ ಮರವನ್ನು ನೋಡುತ್ತಿರುವುದಾಗಿ ಹೇಳಿದ್ದಾರೆ.

ಆನೆ ಆಕೃತಿಯನ್ನು ಹೊಂದಿರುವ ಮರ ಬೇವಿನ ಮರವಾಗಿದ್ದು, ಪಕ್ಕದಲ್ಲೇ ಆಲದ ಮರವೂ ಇದೆ. ಎರಡೂ ಮರಗಳೂ ಕನಿಷ್ಟ 100 ವರ್ಷಗಳಷ್ಟು ಹಳೆಯದ್ದಾಗಿದೆ ಎಂಬ ಮಾಹಿತಿ ನೀಡಿದ್ದಾರೆ. 

ನಾಲ್ಕು ವರ್ಷಗಳ ಹಿಂದೆಯೂ ಈ ಮರ ಆನೆಯ ಸೊಂಡಿಲ ಆಕೃತಿಯಲ್ಲಿ ಬೆಳೆಯತ್ತಿರುವುದನ್ನು ಯಾರೂ ಗಮನಿಸಿರಲಿಲ್ಲ. ಏಕಾ ಏಕಿ ಈ ಪ್ರದೇಶದಲ್ಲಿ ಮರ ಇಷ್ಟೊಂದು ಜನಪ್ರಿಯವಾಗಿದೆ ಎನ್ನುತ್ತಾರೆ ಉದಯ್ ಕಲಬುರಗಿ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *