ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು….

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ದು ಹೇಗೆ?: ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು….

ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು  ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು.

: Congress candidate RS Bali being greeted by supporters, celebrating his victory in the Himachal Pradesh Assembly polls, in Nagrota. (Photo | PTI)

ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು  ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು. ಆದರೆ ಅದು ಘೋಷ ವಾಕ್ಯಕ್ಕೆ ಅಷ್ಟೇ ಸೀಮಿತವಾಗಿ ಕಾಂಗ್ರೆಸ್ 5 ವರ್ಷಗಳ ನಂತರ ಅಧಿಕಾರಕ್ಕೇರುತ್ತಿದೆ.

  • ಬಿಜೆಪಿ ಈ ಬಾರಿ ರಾಜ್ಯದಲ್ಲಿ ಚುನಾವಣೆಯನ್ನು ಪ್ರಧಾನಿ ಮೋದಿ ಕೇಂದ್ರಿತವನ್ನಾಗಿಸಿತ್ತು.  ಬಿಜೆಪಿಗೆ ನೀಡುವ ಪ್ರತಿ ಮತ ಮೋದಿಗೇ ಸೇರುತ್ತದೆ ಎಂಬುದು ಚುನಾವಣೆಯಲ್ಲಿ ಬಿಜೆಪಿ ಬಳಸಿದ ಅಸ್ತ್ರವಾಗಿತ್ತು. 
  • ಮತ್ತೊಂದು ಪ್ರಮುಖ ಅಂಶವೆಂದರೆ 1985 ರ ನಂತರ ಹಿಮಾಚಲ ಪ್ರದೇಶದಲ್ಲಿ ಯಾವುದೇ ಪಕ್ಷ ಸತತ 2 ನೇ ಬಾರಿಗೆ ಅಧಿಕಾರಕ್ಕೆ ಬಂದಿಲ್ಲ.
  • ನಿರುದ್ಯೋಗ ಸಮಸ್ಯೆ: ಈ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಎದುರಿಸುವುದಕ್ಕೆ ನಿರುದ್ಯೋಗ ಸಹ ಪ್ರಮುಖ ಅಂಶವಾಗಿತ್ತು. ಅಕ್ಟೋಬರ್ ವೇಳೆಗೆ ನಿರುದ್ಯೋಗ ಸಮಸ್ಯೆ ಶೇ.8.6 ರಷ್ಟಿತ್ತು. ಹಾಗೂ ಈ ಅಂಕಿ-ಅಂಶ ದೇಶದ ಸರಾಸರಿಗಿಂತಲೂ ಹೆಚ್ಚಾಗಿತ್ತು.
  • ಬಿಜೆಪಿಯ ಅಧಿಕಾರದ ಕನಸನ್ನು ಸುಟ್ಟ ಅಗ್ನಿಪಥ ಯೋಜನೆ:  ಅತಿ ಹೆಚ್ಚು ಪರಮವೀರ ಚಕ್ರ ಪದಕ ಯೋಧರನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ಪಡೆದಿರುವ ಹಿಮಾಚಲ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆ ಬಹಳ ವಿರೋಧ ಎದುರಿಸಿತ್ತು. 

ಕಾಂಗ್ರೆಸ್ ಗೆ ಸಕಾರಾತ್ಮಕವಾದ ಅಂಶಗಳು 

  • ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಭರವಸೆ ನೀಡಿತ್ತು. 
  • ಸೆಬು ಬೆಳೆಗಾರರ ಆಕ್ರೋಶ, ಬಿಜೆಪಿಯ ಬಂಡಾಯ, ಚುನಾವಣೆ ಎದುರಿಸಲು 21 ಮಂದಿ ಹೊರಬಂದಿದ್ದೂ ಆಡಳಿತ ಪಕ್ಷಕ್ಕೆ ಮುಳುವಾಯಿತು. 
  • ಇನ್ನು ಬುಡಕಟ್ಟು ಪ್ರದೇಶಗಳಲ್ಲಿ ಪರಿಸರ ವಿಷಯಗಳು ಹೆಚ್ಚು ಪ್ರಬಲವಾಗಿ ಕೆಲಸ ಮಾಡಿದ್ದು, ಲಾಹೌಲ್ ಮತ್ತು ಸ್ಪಿತಿ ಮತ್ತು ಕಿನ್ನೌರ್ ಗಳಲ್ಲಿ ಹೊಸ ಜಲವಿದ್ಯುತ್ ಯೋಜನೆಗಳು ಮತ್ತು ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನುಷ್ಠಾನದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮತದಾರರನ್ನು ಕೇಳಿಕೊಳ್ಳುತ್ತಿದ್ದರು.
  • ಬುಡಕಟ್ಟು ಜಿಲ್ಲೆಗಳಲ್ಲಿ ಹೊಸ ಜಲವಿದ್ಯುತ್ ಯೋಜನೆಗಳ ವಿರುದ್ಧ ನೋ ಎಂದರೆ ನೋ ಎಂಬ ಅಭಿಯಾನ ನಡೆದಿದ್ದವು. ಬಿಜೆಪಿ ವಿರುದ್ಧ ಜನರ ಅಭಿಪ್ರಾಯ ಒಗ್ಗೂಡುವುದಕ್ಕೆ ಇದೂ ಒಂದು ಕಾರಣವಾಗಿದೆ.
  • ಇದರೊಂದಿಗೆ ಬೆಲೆ ಏರಿಕೆಯಿಂದಲೂ ರೋಸಿ ಹೋಗಿದ್ದ ಜನತೆ ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *