ಬಿ.ಜೆ.ಪಿ.ಯಿಂದ ಕಾಂಗ್ರೆಸ್‌ ಗೆ ಮರಳಲಿದ್ದಾರಾ…ವಲಸಿಗರು?

ಕಾಂಗ್ರೆಸ್ ಸೇರ್ಪಡೆ ವಿಚಾರ ಖಚಿತಪಡಿಸಿದ ಅಡಗೂರು ಎಚ್. ವಿಶ್ವನಾಥ್

ಬಿಜೆಪಿ ಸೇರಿದ್ದ ಪ್ರಮುಖ ಬಂಡಾಯ ನಾಯಕರೊಬ್ಬರು ಕಾಂಗ್ರೆಸ್‌ಗೆ ವಾಪಸ್ಸಾಗುತ್ತಿರುವುದು ಇದೀಗ ಖಚಿತಗೊಂಡಿದ್ದು, ಇತರರ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ.

vishwanath

ಬೆಂಗಳೂರು: ಬಿಜೆಪಿ ಸೇರಿದ್ದ ಪ್ರಮುಖ ಬಂಡಾಯ ನಾಯಕರೊಬ್ಬರು ಕಾಂಗ್ರೆಸ್‌ಗೆ ವಾಪಸ್ಸಾಗುತ್ತಿರುವುದು ಇದೀಗ ಖಚಿತಗೊಂಡಿದ್ದು, ಇತರರ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ.

ಅಡಗೂರು ವಿಶ್ವನಾಥ್ (72) ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಳ್ಳುವುದಾಗಿ ಖಚಿತಪಡಿಸಿದ್ದಾರೆ.

ವಿಶ್ವನಾಥ್ ಅವರು 2019 ರಲ್ಲಿ ಬಿಜೆಪಿ ಸೇರಿದ್ದರು. ಬಿಜೆಪಿ ಸೇರ್ಪಡೆ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳುವಂತೆ ಮಾಡಿ, ಯಡಿಯೂರಪ್ಪ ಮತ್ತೆ ಸಿಎಂ ಆಗಲು ಸಹಾಯ ಮಾಡಿದ್ದರು.

ಬಿಜೆಪಿಗೆ ಬಂದಿದ್ದ ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಕೊಟ್ಟ ಭರವಸೆ ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ವಿಶ್ವನಾಥ್ ಅವರು ಹೇಳಿದ್ದಾರೆ. ಅಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಕಳೆದ ಬಾರಿ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದ ವಿಜಯಶಂಕರ್‌ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿತ್ತು. ಆದರೆ, ಚುನಾವಣೆ ನಂತರ ಅವರು ಮತ್ತೆ ಬಿಜೆಪಿಗೆ ಮರಳಿದ್ದರು.

ಮೂಲಗಳ ಪ್ರಕಾರ, “ಬಿಜೆಪಿಗೆ ಸೇರ್ಪಡೆಗೊಂಡ ತಂಡದಲ್ಲಿ ವಿಶ್ವನಾಥ್ ಮಾತ್ರವಲ್ಲದೆ, ಮಾಜಿ ಹಾಲಿ ಶಾಸಕ ಪ್ರತಾಪಗೌಡ ಪಾಟೀಲ್ ಕೂಡ ಆ ನಿರ್ಧಾರದಿಂದ ಬೇಸರಗೊಂಡಿದ್ದಾರೆಂದು ತಿಳಿದುಬಂದಿದೆ, ಹಾಗೆಯೇ ಕೇಲವ ಶಾಸಕರ ಸ್ಥಾನ ಪಡೆದುಕೊಂಡಿರುವ ಮಾಜಿ ಸಚಿವ ಆರ್ ಶಂಕರ್ ಅವರು ಕೂಡ ಬೇಸರಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಂಕರ್ ಅವರು, ಕಾದು ನೋಡೋಣ ಏನಾಗುತ್ತದೆ ಎಂದು ಹೇಳಿದ್ದಾರೆ.

ತನಿಖಾ ಅಧಿಕಾರಿಗಳು ತಿಂಗಳ ಹಿಂದೆಯೇ ಕ್ಲೀನ್ ಚಿಟ್ ನೀಡಿದ್ದರೂ ರಮೇಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಮಂತ್ರಿಗಿರಿ ಸ್ಥಾನ ನೀಡಿಲ್ಲ. ಇದೀಗ 17 ಬಂಡಾಯನಾಯಕರು ಜೊತೆಗೆ ಪರಸ್ಪರ ಸಂಪರ್ಕದಲ್ಲಿದ್ದು, ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂಬುದನ್ನು ಕಾದು ನೋಡಬೇಕಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *