ಡಾಲ್ಫಿನ್ ಜಿಗಿಯುವುದನ್ನು ನೋಡಬೇಕಾ?: ಹಾಗಿದ್ದರೆ ಕಾರವಾರದ ದೇವಬಾಗ್ ಗೆ ಬನ್ನಿ!

ಕರ್ನಾಟಕ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಡಾಲ್ಫಿನ್‌ಗಳನ್ನು ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಹೊರತಂದಿದೆ.  

A humpback dolphin breaches near Devbagh in Karwar

ಕಾರವಾರ: ಕರ್ನಾಟಕ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಡಾಲ್ಫಿನ್‌ಗಳನ್ನು ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಹೊರತಂದಿದೆ.  

ಕಾರವಾರದ ದೇವಬಾಗ್ ಬಳಿಯ ಕಾಳಿ ನದಿಯಲ್ಲಿ ಡಾಲ್ಫಿನ್ ಜಂಪ್ ನೋಡಬಹುದು. ಪ್ರವಾಸೋದ್ಯಮಇಲಾಖೆಯು  ಸಾಗರ ಮತ್ತು ಕರಾವಳಿ ಪರಿಸರ ವ್ಯವಸ್ಥೆ ಕೋಶದ ಮೂಲಕ, ದೇವಬಾಗ್‌ನಲ್ಲಿನ ಒಂದು ನಿರ್ದಿಷ್ಟ ಸ್ಥಳದಿಂದ ಸಮುದ್ರದಲ್ಲಿರುವ ಡಾಲ್ಫಿನ್ ನೋಡಲು ಅವಕಾಶ ನೀಡಲು ನಿರ್ಧರಿಸಿದೆ, ಈ ಪ್ರಯೋಗ ದೇಶದಲ್ಲೇ ಮೊದಲು ಎನ್ನಲಾಗಿದೆ.

ಡಾಲ್ಫಿನ್‌ಗಳು ಆರೋಗ್ಯಕರ ಪರಿಸರ ವ್ಯವಸ್ಥೆಯ ಸೂಚಕಗಳಾಗಿವೆ. ಅವು ಶುದ್ಧ ನೀರಿನಲ್ಲಿ ಬೆಳೆಯುುತ್ತವೆ ಈ ಪ್ರಸ್ತಾವನೆಯು ಹೊಸದಾಗಿದೆ.

ಸಾಮಾನ್ಯವಾಗಿ, ಜನರು ಕಾಳಿ ನದಿಯ ಸೇತುವೆಯಿಂದ ಡಾಲ್ಫಿನ್‌ಗಳನ್ನು ವೀಕ್ಷಿಸುತ್ತಾರೆ. ನಮ್ಮ ಕರಾವಳಿ ಮತ್ತು ಸಾಗರ ಪರಿಸರ ವ್ಯವಸ್ಥೆ ಕೋಶವು ದೇವಬಾಗ್‌ನಲ್ಲಿ ಡಾಲ್ಫಿನ್‌ಗಳನ್ನು ನೋಡುವ ವೇದಿಕೆಯನ್ನು ನಿರ್ಮಿಸಲು ನಿರ್ಧರಿಸಿದೆ ಎಂದು ಉತ್ತರ ಕನ್ನಡ ಜಿಲ್ಲೆ ಅರಣ್ಯ ಸಂರಕ್ಷಣಾಧಿಕಾರಿ  ವಸಂತ ರೆಡ್ಡಿ ತಿಳಿಸಿದ್ದಾರೆ.

ಸದ್ಯ ದೇವಬಾಗ್ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಪ್ರವಾಸಿಗರನ್ನು ದೋಣಿಯಲ್ಲಿ ಕರೆದೊಯ್ಯುವ ಮೂಲಕ ಪ್ರತಿದಿನ ಎರಡು ಬಾರಿ ‘ಡಾಲ್ಫಿನ್ ಸಫಾರಿ’ ಆಯೋಜಿಸುತ್ತದೆ. ಆದಾಗ್ಯೂ, ಸ್ಥಳೀಯರು ಡಾಲ್ಫಿನ್‌ಗಳನ್ನು ನೋಡುವುದು ಅವರಿಗೆ ಅಸಾಮಾನ್ಯ ಸಂಗತಿಯಲ್ಲ ಎಂದು ಹೇಳುತ್ತಾರೆ.

ನಾನು ಇಲ್ಲಿ ಡಾಲ್ಫಿನ್‌ಗಳನ್ನು ಅತ್ಯಂತ ಸಮೀಪದಿಂದ ನೋಡಿದ್ದೇನೆ. ಕೆಲವೊಮ್ಮೆ ಗುಂಪುಗಳಲ್ಲಿ ಮತ್ತು ಕೆಲವೊಮ್ಮೆ ಒಂಟಿಯಾಗಿರುತ್ತವೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ  ಸಾಗರ ಜೀವಶಾಸ್ತ್ರ ವಿಭಾಗದ (ಎಂಬಿಡಿ) ವಿದ್ಯಾರ್ಥಿ ಕಿರಣ್ ವಾಸುದೇವಮೂರ್ತಿ ಹೇಳಿದ್ದಾರೆ.

ಹಂಪ್‌ಬ್ಯಾಕ್ ಡಾಲ್ಫಿನ್ ಅನ್ನು ಸಾಮಾನ್ಯವಾಗಿ ನೋಡಬಹುದು ಮತ್ತು ಕೆಲವೊಮ್ಮೆ ಫಿನ್‌ಲೆಸ್ ಪೋರ್ಪೊಯಿಸ್ ಅನ್ನು ಕಾಣಬಹುದು. ಎರಡೂ ಆಳವಿಲ್ಲದ ನೀರಿನಲ್ಲಿ ಬೆಳೆಯುತ್ತವೆ ಎಂದು ಇನ್ನೋರ್ವ ಸಂಶೋಧಕ ಸೂರಜ್ ಎಸ್ ಪೂಜಾರ್ ತಿಳಿಸಿದ್ದಾರೆ.

ಪ್ಯಾನ್-ಟ್ರಾಪಿಕಲ್ ಸ್ಪಾಟೆಡ್ ಡಾಲ್ಫಿನ್ ಮತ್ತು ಸ್ಪಿನ್ನರ್ ಡಾಲ್ಫಿನ್‌ನಂತಹ ಕೆಲವು ಅಪರೂಪದ ತಳಿಗಳಿವೆ ಎಂದು ಸಹಾಯಕ ಪ್ರೊಫೆಸರ್ ಶಿವಕುಮಾರ ಹರಗಿ ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *