ಸಿದ್ಧಾಪುರದಲ್ಲಿ ಕ್ರೀಡೆ ಮತ್ತು ನಾಟಕೋತ್ಸವ

ಸಿದ್ದಾಪುರ: ದಿನ ನಿತ್ಯ ಕಚೇರಿಯಲ್ಲಿ ಕುಳಿತು ಕರ್ತವ್ಯ ನಿರ್ವಹಿಸುವವರು ಕ್ರೀಡೆಯಲ್ಲಿ ತೊಡಗಿಕೊಂಡಾಗ ನಮ್ಮ ದೈಹಿಕ ಸಾಮರ್ಥ್ಯ ಹಾಗೂ ಅರೋಗ್ಯದ ಸ್ಥಿರತೆ ಬಗ್ಗೆ ತಿಳಿಯುತ್ತದೆ ಎಂದು ಸಿದ್ದಾಪುರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ತಿಮ್ಮಯ್ಯ ಜಿ ಹೇಳಿದರು ಅವರು ಕಡಕೇರಿ ಕಾನಳ್ಳಿಯ ಸುಭಾಷಚಂದ್ರಬೋಸ್ ಕ್ರೀಡಾಂಗಣದಲ್ಲಿ ತಾಲೂಕಾ ಪತ್ರಕರ್ತರ ಸಂಘದ ಆಯೋಜಕತ್ವದಲ್ಲಿ ನಡೆದ ತೃತೀಯ ವರ್ಷದ ವಿವಿಧ ಇಲಾಖೆಗಳ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಯ ಸಮಾರೋಪ ಸಮಾರಂಭ ದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.


ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಹೆಗಡೆ ಮಾತನಾಡಿ ಪತ್ರಕರ್ತರ ಸಂಘ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿದ್ದರೂ ಮುಂದಿನ ದಿನಗಳ ಲ್ಲಿ ಇನ್ನು ಹೆಚ್ಚು ಇಲಾಖೆಗಳಿಗೆ ಅವಕಾಶ ಕಲ್ಪಿಸಿ ಎಲ್ಲರೂ ಸೇರುವಂತಾಗಲಿ ಎಂದರು.


ಬೇಡ್ಕಣಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಮೂರ್ತಿ ಕಡಕೇರಿ ಮಾತನಾಡಿದರು, ಹೆಸ್ಕಾಂ ನ ದಿಲೀಪ್ ಇನ್ಸ್ಪೆಕ್ಟರ್ ಕುಮಾರ್ ಕೆ, ಪಿ ಎಸ್ ಐ ಮಲ್ಲಿಕಾರ್ಜುನ ಕೊರಾ ಣಿ ಉಪಸ್ಥಿತರಿದ್ದರು.

ಪತ್ರಕರ್ತ ಸಂಘದ ಅಧ್ಯಕ್ಷ ಗಂಗಾಧರ್ ಕೊಳಗಿ ಅಧ್ಯಕ್ಷತೆ ವಹಿಸಿದ್ದರು
ಎರಡು ದಿನಗಳು ನಡೆದ ಪಂದ್ಯಾವಳಿಯಲ್ಲಿ ಹೆಸ್ಕಾಂ ಪ್ರಥಮ, ಪೊಲೀಸ್ ದ್ವಿತೀಯ ಸ್ಥಾನ ಪಡೆದವು.

ಸಿದ್ದಾಪುರ. ಪಟ್ಟಣದ ಶಂಕರ ಮಠದಲ್ಲಿ ನಾಲ್ಕು ದಿನಗಳ ನಾಟಕೋತ್ಸವವನ್ನು ರಂಗಕರ್ಮಿ, ನಿರ್ದೇಶಕ,ನೇಪಥ್ಯ ಕಲಾವಿದ ಪುರುಷೋತ್ತಮ ತಲವಾ ಟ ಉದ್ಘಾಟಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಂಗ ಸೌಗಂಧ ಹಾಗೂ ಒಡ್ಡೋಲಗ ನಾಟಕ ತಂಡಗಳು ನಡೆಸುತ್ತಿರುವ ನಾಲ್ಕು ದಿನಗಳ ನಾಟಕೋತ್ಸವಕ್ಕೆ ಚಾಲನೆ ನೀಡಿದ ಪುರುಷೋತ್ತಮ ತಲವಾ ಟ ಅವರಿಗೆ ರಂಗ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಂಗಭೂಮಿಯ ನೇಪಥ್ಯ‌ದಲ್ಲೇ ಹೆಚ್ಚುಕೆಲಸ ನಿರ್ವಹಿಸಿದ ತಮಗೆ ಈ ಗೌರವ ಸಂದಿದ್ದಕ್ಕೆ ಸಂತೋಷವಾಗಿದೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ರಾಘವೇಂದ್ರ ಶಾಸ್ತ್ರಿ, ಸೀತಾರಾಮ ಶಾಸ್ತ್ರಿಯವರ ರಂಗಭೂಮಿಯ ಪ್ರೀತಿಯ ಬಗ್ಗೆ ಮಾತನಾಡಿದರು. ಅಧ್ಯಕ್ಷತೆವಹಿಸಿದ್ದ ರಂಗಕರ್ಮಿ ಶ್ರೀಧರ ಹೆಗಡೆ ಹುಲಿಮನೆ ಮಾತನಾಡುತ್ತಾ ತಮ್ಮ ತಂದೆ ಸೀತಾರಾಮ ಶಾಸ್ತ್ರಿ ಯವರು ಹಾಕಿಕೊಟ್ಟ ರಂಗಪರಂಪರೆಯನ್ನು ತಮ್ಮ ಕುಟುಂಬ ರಂಗಾಸಕ್ತರ ನೆರವು ಮತ್ತು ಸಹಕಾರದೊಂದಿಗೆ ಮುನ್ನಡೆಸುತ್ತಿದೆ. ಇದನ್ನು ಇನ್ನಷ್ಟು ಬೆಳೆಸುವ ಕನಸಿದೆ ಎಂದರು. ಗಣಪತಿ ಹೆಗಡೆ ಹುಲಿಮನೆ ಸ್ವಾಗತಿಸಿದರು ಶ್ರೀಪಾದ ಹೆಗಡೆ ವಂದಿಸಿದರು. ಗಣಪತಿ ಗುಂಜಗೋಡ ನಿರೂಪಿಸಿದರು. ನಂತರ ಡಾ.ಶ್ರೀಪಾದ ಹೆಗಡೆಯವರು ನಿರ್ದೇಶಿಸಿದ ಆನಂದ ಭಾವಿನಿ ಎಂಬ ಏಕವ್ಯಕ್ತಿ ನಾಟಕವನ್ನು ಸಿರಿ ವಾನಳ್ಳಿಯವರು ಬಹು ಮನೋಜ್ಞವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *