ಅನಂತಶ್ರೀ ಪ್ರಶಸ್ತಿ ಪ್ರದಾನ


ಸಿದ್ದಾಪುರ
ಉತ್ತರ ಕನ್ನಡ ಜಿಲ್ಲೆಯ ಯಕ್ಷಗಾನ ರಂಗಭೂಮಿಯಲ್ಲಿ ಕೆರೆಮನೆ ಗಜಾನನ ಹೆಗಡೆಯವರ ನಂತರದಲ್ಲಿ ಸ್ತ್ರೀ ವೇಷಧಾರಿಯ ಕೊರತೆಯನ್ನು ನೀಗಿಸಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯಲ್ಲಿ ಹೆಸರಾದವರು ಭಾಸ್ಕರ ಜೋಶಿ ಶಿರಳಗಿ.ಅವರು ಎಂಬತ್ತರ ದಶಕದಲ್ಲಿ ಯಕ್ಷಗಾನದ ರಾಣಿ ಎಂದೇ ಪ್ರಸಿದ್ಧರಾದವರು ಎಂದು ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರಕೈ ಹೇಳಿದರು.


ಅವರು ಕಲಗದ್ದೆ ನಾಟ್ಯವಿನಾಯಕ ದೇವಾಲಯದ ಪ್ರಾಂಗಣದಲ್ಲಿ ಸ್ಥಳೀಯ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ರವಿವಾರ ನಡೆದ ಪ್ರಸಿದ್ಧ ಸ್ತ್ರೀವೇಷ ಕಲಾವಿದ ಭಾಸ್ಕರ ಜೋಶಿಯವರಿಗೆ ಅನಂತಶ್ರೀ ಪ್ರಶಸ್ತಿ ಪ್ರದಾನ ನೆರವೇರಿಸಿ ಮಾತನಾಡಿದರು.
ಅನಂತ ಹೆಗಡೆ ಕೊಳಗಿ ಯಕ್ಷಗಾನ ರಂಗಭೂಮಿಯಲ್ಲಿ ತಮ್ಮದೇ ಆದ ಪ್ರತಿಭೆ, ವಿದ್ವತ್, ಮಾತುಗಾರಿಕೆ ಮೂಲಕ ಪ್ರಸಿದ್ಧರಾದವರು. ಅವರು ಗುರುವಾಗಿ ಹಲವರನ್ನು ಬೆಳೆಸಿದ್ದು ಭಾಸ್ಕರ ಜೋಶಿ ಕೂಡ ಅವರ ಶಿಷ್ಯರಲ್ಲೊಬ್ಬರು. ಇಂಥ ಸಾಧಕ ಗುರುವಿನ ಹೆಸರಿನ ಪ್ರಶಸ್ತಿ ಜೋಶಿಯವರಿಗೆ ಸಲ್ಲುತ್ತಿದ್ದು ಇದು ಅವರ ಪಾಲಿಗೆ ರಾಷ್ಟ್ರಪ್ರಶಸ್ತಿಗೂ ಮಿಗಿಲಾದದ್ದು ಎಂದರು.


ಅಭಿನಂದನಾ ಮಾತುಗಳನ್ನಾಡಿದ ಸೆಲ್ಕೋ ಇಂಡಿಯಾದ ಸಿ.ಇ.ಒ ಹಾಗೂ ಕಲಾವಿದ ಮೋಹನ ಹೆಗಡೆ ಹೆರವಟ್ಟಾ ಯಕ್ಷಗಾನ ಕ್ಷೇತ್ರವನ್ನು ಉಜ್ವಲಗೊಳಿಸಿದ ಕೆಲವೇ ಮಹನೀಯರಲ್ಲಿ ಭಾಸ್ಕರ ಜೋಶಿ ಓರ್ವರು. ಸ್ತ್ರೀವೇಷದಲ್ಲಿ ಹಲವು ಪಾತ್ರಗಳನ್ನು ನಿರ್ವಹಿಸಿ ಸೈ ಅನಿಸಿಕೊಂಡ ಜೋಶಿ ಸುಧೀರ್ಘ ಕಾಲ ಯಕ್ಷಗಾನಕ್ಕಾಗಿ ದುಡಿದವರು. ಸ್ವಂತ ಮೇಳ ಕಟ್ಟಿ ಯಕ್ಷಗಾನ ರಂಗದಲ್ಲಿ ಮೊಟ್ಟಮೊದಲು ಪೂರ್ಣಚಂದ್ರ ರಂಗವನ್ನು ಅಳವಡಿಸಿದವರು. ಅವರ ಪಾತ್ರಗಳು ಇಂದಿಗೂ ಸ್ಮರಣೀಯವಾಗಿದೆ ಎಂದರು.


ಟಿ.ಎಂ.ಎಸ್.ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೆಸರ ಮೂರು ದಶಕಗಳಿಗೂ ಅಧಿಕ ಕಾಲ ಯಕ್ಷಗಾನಕ್ಷೇತ್ರದಲ್ಲಿ ಪಾತ್ರ ನಿರ್ವಹಿಸಿ ಪ್ರಸಿದ್ಧರಾದ ಜೋಶಿಯವರಿಗೆ ಅನಂತಶ್ರೀ ಪ್ರಶಸ್ತಿ ನೀಡಿದ್ದು ಶಾಘ್ಲನೀಯ ಎಂದರು.
ಅತಿಥಿಗಳಾದ ವಿ|ದತ್ತಮೂರ್ತಿ ಭಟ್ ಶಿವಮೊಗ್ಗ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಮಾತನಾಡಿದರು. ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರತಿಷ್ಠಾನದ ಕಾರ್ಯದರ್ಶಿ,ಪ್ರಸಿದ್ಧ ಭಾಗವತ ಕೇಶವ ಹೆಗಡೆಕೊಳಗಿ ಸ್ವಾಗತಿಸಿದರು. ತುಳಸಿ ಹೆಗಡೆ ಬೆಟ್ಟಕೊಪ್ಪ ನಿರ್ವಹಿಸಿದರು. ಪತ್ರಕರ್ತ ನಾಗರಾಜ ಮತ್ತಿಗಾರ ವಂದಿಸಿದರು.
ನಂತರ ಕಾರ್ತವಿರ್ಯಾರ್ಜುನ ಯಕ್ಷಗಾನ ಪ್ರದರ್ಶನಗೊಂಡಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *