ಅನಂತಶ್ರೀ ಪ್ರಶಸ್ತಿ ಪ್ರದಾನ


ಸಿದ್ದಾಪುರ
ಉತ್ತರ ಕನ್ನಡ ಜಿಲ್ಲೆಯ ಯಕ್ಷಗಾನ ರಂಗಭೂಮಿಯಲ್ಲಿ ಕೆರೆಮನೆ ಗಜಾನನ ಹೆಗಡೆಯವರ ನಂತರದಲ್ಲಿ ಸ್ತ್ರೀ ವೇಷಧಾರಿಯ ಕೊರತೆಯನ್ನು ನೀಗಿಸಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯಲ್ಲಿ ಹೆಸರಾದವರು ಭಾಸ್ಕರ ಜೋಶಿ ಶಿರಳಗಿ.ಅವರು ಎಂಬತ್ತರ ದಶಕದಲ್ಲಿ ಯಕ್ಷಗಾನದ ರಾಣಿ ಎಂದೇ ಪ್ರಸಿದ್ಧರಾದವರು ಎಂದು ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರಕೈ ಹೇಳಿದರು.


ಅವರು ಕಲಗದ್ದೆ ನಾಟ್ಯವಿನಾಯಕ ದೇವಾಲಯದ ಪ್ರಾಂಗಣದಲ್ಲಿ ಸ್ಥಳೀಯ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ರವಿವಾರ ನಡೆದ ಪ್ರಸಿದ್ಧ ಸ್ತ್ರೀವೇಷ ಕಲಾವಿದ ಭಾಸ್ಕರ ಜೋಶಿಯವರಿಗೆ ಅನಂತಶ್ರೀ ಪ್ರಶಸ್ತಿ ಪ್ರದಾನ ನೆರವೇರಿಸಿ ಮಾತನಾಡಿದರು.
ಅನಂತ ಹೆಗಡೆ ಕೊಳಗಿ ಯಕ್ಷಗಾನ ರಂಗಭೂಮಿಯಲ್ಲಿ ತಮ್ಮದೇ ಆದ ಪ್ರತಿಭೆ, ವಿದ್ವತ್, ಮಾತುಗಾರಿಕೆ ಮೂಲಕ ಪ್ರಸಿದ್ಧರಾದವರು. ಅವರು ಗುರುವಾಗಿ ಹಲವರನ್ನು ಬೆಳೆಸಿದ್ದು ಭಾಸ್ಕರ ಜೋಶಿ ಕೂಡ ಅವರ ಶಿಷ್ಯರಲ್ಲೊಬ್ಬರು. ಇಂಥ ಸಾಧಕ ಗುರುವಿನ ಹೆಸರಿನ ಪ್ರಶಸ್ತಿ ಜೋಶಿಯವರಿಗೆ ಸಲ್ಲುತ್ತಿದ್ದು ಇದು ಅವರ ಪಾಲಿಗೆ ರಾಷ್ಟ್ರಪ್ರಶಸ್ತಿಗೂ ಮಿಗಿಲಾದದ್ದು ಎಂದರು.


ಅಭಿನಂದನಾ ಮಾತುಗಳನ್ನಾಡಿದ ಸೆಲ್ಕೋ ಇಂಡಿಯಾದ ಸಿ.ಇ.ಒ ಹಾಗೂ ಕಲಾವಿದ ಮೋಹನ ಹೆಗಡೆ ಹೆರವಟ್ಟಾ ಯಕ್ಷಗಾನ ಕ್ಷೇತ್ರವನ್ನು ಉಜ್ವಲಗೊಳಿಸಿದ ಕೆಲವೇ ಮಹನೀಯರಲ್ಲಿ ಭಾಸ್ಕರ ಜೋಶಿ ಓರ್ವರು. ಸ್ತ್ರೀವೇಷದಲ್ಲಿ ಹಲವು ಪಾತ್ರಗಳನ್ನು ನಿರ್ವಹಿಸಿ ಸೈ ಅನಿಸಿಕೊಂಡ ಜೋಶಿ ಸುಧೀರ್ಘ ಕಾಲ ಯಕ್ಷಗಾನಕ್ಕಾಗಿ ದುಡಿದವರು. ಸ್ವಂತ ಮೇಳ ಕಟ್ಟಿ ಯಕ್ಷಗಾನ ರಂಗದಲ್ಲಿ ಮೊಟ್ಟಮೊದಲು ಪೂರ್ಣಚಂದ್ರ ರಂಗವನ್ನು ಅಳವಡಿಸಿದವರು. ಅವರ ಪಾತ್ರಗಳು ಇಂದಿಗೂ ಸ್ಮರಣೀಯವಾಗಿದೆ ಎಂದರು.


ಟಿ.ಎಂ.ಎಸ್.ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೆಸರ ಮೂರು ದಶಕಗಳಿಗೂ ಅಧಿಕ ಕಾಲ ಯಕ್ಷಗಾನಕ್ಷೇತ್ರದಲ್ಲಿ ಪಾತ್ರ ನಿರ್ವಹಿಸಿ ಪ್ರಸಿದ್ಧರಾದ ಜೋಶಿಯವರಿಗೆ ಅನಂತಶ್ರೀ ಪ್ರಶಸ್ತಿ ನೀಡಿದ್ದು ಶಾಘ್ಲನೀಯ ಎಂದರು.
ಅತಿಥಿಗಳಾದ ವಿ|ದತ್ತಮೂರ್ತಿ ಭಟ್ ಶಿವಮೊಗ್ಗ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಮಾತನಾಡಿದರು. ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರತಿಷ್ಠಾನದ ಕಾರ್ಯದರ್ಶಿ,ಪ್ರಸಿದ್ಧ ಭಾಗವತ ಕೇಶವ ಹೆಗಡೆಕೊಳಗಿ ಸ್ವಾಗತಿಸಿದರು. ತುಳಸಿ ಹೆಗಡೆ ಬೆಟ್ಟಕೊಪ್ಪ ನಿರ್ವಹಿಸಿದರು. ಪತ್ರಕರ್ತ ನಾಗರಾಜ ಮತ್ತಿಗಾರ ವಂದಿಸಿದರು.
ನಂತರ ಕಾರ್ತವಿರ್ಯಾರ್ಜುನ ಯಕ್ಷಗಾನ ಪ್ರದರ್ಶನಗೊಂಡಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *