ಯಶಸ್ವಿನಿ ವಿಮೆ ಯೋಜನೆ ನೋಂದಣಿ ಅವಧಿ ಜ.31 ವರೆಗೆ ವಿಸ್ತರಿಸಿ ಸರ್ಕಾರದ ಆದೇಶ

ಯಶಸ್ವಿನಿ ವಿಮೆ ಯೋಜನೆಯ ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆ – ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಜ.31ರವರೆಗೆ ಅವಕಾಶ.

ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ, ನವೆಂಬರ್ 1 ರಿಂದ ನೋಂದಣಿ ಆರಂಭ

ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.

vidhan-soudha

ಬೆಂಗಳೂರು: ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.

ಯಶಸ್ವಿನಿ ಯೋಜನೆಗಾಗಿ ರೈತರು ಹಾಗೂ  ಸಹಕಾರಿ ಸಂಘಗಳು ಬೇಡಿಕೆ ಮುಂದಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಯಶಸ್ವಿನಿ ಯೋಜನೆ ಅಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸೆ ವೆಚ್ಚ 5 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ. 4 ಸದಸ್ಯರ ಕುಟುಂಬಕ್ಕೆ ವರ್ಷಕ್ಕೆ 500 ರೂಪಾಯಿ ವಂತಿಕೆ ಕಟ್ಟಬೇಕಾಗಿದೆ.

ನೊಂದಣಿ ಪ್ರಕ್ರಿಯೆಯನ್ನು ನವೆಂಬರ್ 1, 2022 ರಿಂದ ಪ್ರಾರಂಭವಾಗಲಿದೆ. ಯಶಸ್ವಿ ಯೋಜನೆ ಅವಧಿ 01-01-2023 ರಿಂದ 30-12-2023 ರವರೆಗೂ ಜಾರಿಯಲ್ಲಿರುತ್ತದೆ. 1650 ಖಾಯಿಲೆಗಳಿಗೆ ಈ ಯೋಜನೆ ಅಡಿ ಚಿಕಿತ್ಸೆ ನೀಡಲಾಗುತ್ತದೆ.

ಮಾರ್ಗಸೂಚಿ ಪ್ರಕಾರ, ಸಹಕಾರ ಸಂಘಗಳ ಸದಸ್ಯರು, ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರು, ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು, ಸಹಕಾರಿ ನೇಕಾರರಿಗೆ ಈ ಯೋಜನೆ ಅನ್ವಯವಾಗಲಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *