ಬಾಳೆಕುಳಿಯಲ್ಲಿ ಕಾಗೇರಿಯವರಿಗೆ ಸನ್ಮಾನ

ಸಿದ್ದಾಪುರ ತಾಲೂಕಿನ ಹೆಗ್ಗೋಡು ಮನೆ ಬಾಳೆಕುಳಿಯಲ್ಲಿ ನ ಸುಧೀರ್ ಗೌಡರ್ ಮನೆಯಲ್ಲಿ ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ರಿಗೆ ಶ್ರೀ ವೀರಶೈವ ಕ್ಷೇಮಾಭಿವೃದ್ಧಿ ಸಂಸ್ಥೆ ಸಿದ್ದಾಪುರ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಸಿದ್ದಾಪುರ ತಾಲೂಕು ಘಟಕ ಹಾಗೂ ವೀರಶೈವ ಸಮಾಜ ಬಾಂಧವರು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ವೀರಶೈವ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಪರಮೇಶ್ವರಯ್ಯ ಕಾನಳ್ಳಿ ಮಠ ಹಾಗೂ ಎಮ್ ಎಸ್ ಗೌಡರ್ ವಕೀಲರು ಸಾಗರ ಹಾಗೂ ಅಡಿಕೆ ವರ್ತಕ ಆರ್ ಎಂ ಪಾಟೀಲ್ ಸಿದ್ದಾಪುರ ಉಪಸ್ಥಿತರಿದ್ದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ

ನಮ್ಮ ಕ್ಷೇತ್ರದಲ್ಲಿ ಅವಿರತ ಪ್ರಯತ್ನದಿಂದ ಪ್ರತಿಯೊಂದು ಗ್ರಾಮಗಳಿಗೂ ಅತಿ ಹೆಚ್ಚಿನ ಅನುದಾನವನ್ನು ನೀಡಿ ಜನಪರ ಕಾರ್ಯಕ್ರಮಗಳನ್ನು ಮಾಡುತಿದ್ದೇವೆ. ತಾಲೂಕಿಗೆ ಅವಶ್ಯಕತೆ ಇದ್ದ ಇಲಾಖೆಗಳ ಕಟ್ಟಡಗಳು ಹಾಗೂ ಶಾಲಾ ಕಾಲೇಜುಗಳನ್ನು ಹೆಚ್ಚಿಸಲಾಗಿದೆ. ಆದರೂ ಕೂಡ ರಸ್ತೆಗಳ ಬಗ್ಗೆ ಜನತೆಯ ಕೋರಿಕೆ ಇದೆ ಈ ನಿಟ್ಟಿನಲ್ಲಿ ನಾವು ಪ್ರಯತ್ನಿಸುತ್ತೇವೆ ಎಂಬ ಭರವಸೆಯನ್ನು ನೀಡಿದರು. ಹಾಗೆಯೇ ವೀರಶೈವ ಸಮಾಜದ ಕೋರಿಕೆಯಂತೆ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಅನುದಾನವನ್ನು ಬಿಡುಗಡೆ ಮಾಡುವಲ್ಲಿ ಪ್ರಯತ್ನಿಸುತ್ತೇವೆ ಎಂಬ ಆಶ್ವಾಸನೆಯನ್ನು ಕೂಡ ನೀಡಿದರು.

ಕಾರ್ಯಕ್ರಮವನ್ನು ಆಯೋಜಿಸಿದ್ದ ಸುಧೀರ್ ಗೌಡರ ಬಗ್ಗೆ ಮಾತನಾಡಿ ಸುಧೀರ್ ಗೌಡರ್ ಯಾವಾಗಲೂ ಪಾದರಸದಂತೆ ಇದ್ದು ಸದಾಕಾಲ ಜನಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಸಮಾಜಕ್ಕೆ ಅವರ ಕೊಡುಗೆ ತುಂಬಾ ಇದೆ ಅವರನ್ನು ಈ ಮೂಲಕ ಅಭಿನಂದಿಸುತ್ತೇನೆ ಎಂದರು ‌.ಹೆಗ್ಗೋಡ್ಮನೆ ಕುಟುಂಬದವರ ಬಗ್ಗೆ ಮಾತನಾಡಿ ಇಳಿ ವಯಸ್ಸಿನವರಾದ ಗಂಗಮ್ಮ ಪುಟ್ಟಣ್ಣಯ್ಯ ಗೌಡರ್ ಹಾಗೂ ಗೌರಮ್ಮ ಬಾಲಚಂದ್ರ ಗೌಡರ್ ರಿಗೆ ಅಭಿನಂದನೆಯನ್ನು ತಿಳಿಸಿ ಕುಟುಂಬಕ್ಕೆ ಶುಭ ಹಾರೈಸಿದರು.


ಸಮಾಜದ ಅಧ್ಯಕ್ಷರಾದ ಪರಮೇಶ್ವರಿಯ ಕಾನಳಿ ಮಠ ಮಾತನಾಡಿ ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇ ರಿ ನಮ್ಮ ನಾಡಿನ ಧೀಮಂತ ನಾಯಕರಾಗಿದ್ದು ನಾಡಿಗೆ ದೊರಕಿದ ಅವರ ಸೇವೆಯನ್ನು ಕೊಂಡಾಡಿದರು. ಹಾಗೂ ಅವರು ಭಾರತ ವಿಶ್ವಗುರುವಾಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲೆಂದು ಆಶಿಸಿದರು.


ಅಧ್ಯಕ್ಷತೆ ವಹಿಸಿದ ಶ್ರೀ ಎಂ ಎಸ್ ಗೌಡ ಇವರು ಮಾತನಾಡಿ ಶ್ರೀ ವಿಶ್ವೇಶ್ವರ ಹೆಗಡೆ ನಮ್ಮ ತಾಲೂಕಿನ ಶಕ್ತಿಯಾಗಿದ್ದು ಅವರು ತಮ್ಮ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ ರೈತರ ಪರ ಕಾಳಜಿಗೆ ನಾವು ಹೆಮ್ಮೆಪಡುತ್ತಿದ್ದೇವೆ ಹಾಗೂ ಸಭಾಧ್ಯಕ್ಷರಾಗಿ ಅವರ ಕಾರ್ಯಗಳನ್ನುಮೆಚ್ಚುಗೆ ವ್ಯಕ್ತಪಡಿಸಿದರು.

ಆರ್. ಎಂ. ಪಾಟೀಲ್ ಅವರು ಸನ್ಮಾನಿತರ ಬಗ್ಗೆ ಮಾತನಾಡಿ ವಿಶ್ವೇಶ್ವರ ಹೆಗಡೆ ಕಾಗೇ ರಿ ಅವರು ನಮ್ಮ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಬೇಕೆಂಬ ಆಶಯವನ್ನು ವ್ಯಕ್ತಪಡಿಸಿದರು.
ಸಿ.ಎಸ್. ಗೌಡರ್ ಸ್ವಾಗತಿಸಿದರು ಹಾಗೂ ಸುಧೀರ್ ಗೌಡರ್ ವಂದಿಸಿದರು ಈ ಎಲ್ಲಾ ಕಾರ್ಯಕ್ರಮವನ್ನು ಸುಧೀರ್ ಗೌಡರ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *