ನಾಳೆ ಕಾನಸೂರಿನಲ್ಲಿ ಯಕ್ಷಗಾನ ಜೋಡಾಟ


ಕಾನಸೂರು: ಶ್ರೀ ಕ್ಷೇತ್ರ ಸಿಗಂದೂರು ಯಕ್ಷಗಾನ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕಾನಸೂರಿನ ಮಾದನ ಕಳ್ ದಲ್ಲಿ ಕೂಡಾಟ ಮತ್ತು ಜೋಡಾಟ ಹಾಗೂ ಸನ್ಮಾನ ಕಾರ್ಯಕ್ರಮ ಜನವರಿ ೬ರಂದು ನಡೆಯಲಿದೆ.
ಕಾರ್ಯಕ್ರಮವನ್ನು ಬೈಲಹೊಂಗಲ ಡಿವೈಎಸ್ಪಿ ರವಿ ಡಿ ನಾಯ್ಕ ಉದ್ಘಾಟಿಸಲಿದ್ದಾರೆ. ಕಾನಸೂರು ಗ್ರಾಪಂ ಅಧ್ಯಕ್ಷ ವೀರಭದ್ರ ಜಂಗಣ್ಣನವರ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರವಿಕುಮಾರ್, ಉದ್ಯಮಿ ಆರ್‌ಜಿ ಶೇಟ್, ಗ್ರಾಪಂ ಸದಸ್ಯ ಶಶಿಕಾಂತ ನಾಮಧಾರಿ, ನಿವೃತ್ತ ಶಿಕ್ಷಕ ಕೆ.ಆರ್. ಹೆಗಡೆ, ಸಿರ್ಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ, ಗ್ರಾಪಂ ಉಪಾಧ್ಯಕ್ಷೆ ಶಶಿಪ್ರಭಾ ಹೆಗಡೆ ಹಾಗೂ ನಿಕಟಪೂರ್ವ ಯಕ್ಷಗಾನ ಅಕಾಡೆಮಿ ಸದಸ್ಯೆ ನಿರ್ಮಲ ಹೆಗಡೆ ಗೋಳಿ ಕೊಪ್ಪ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ವಿದ್ಯಾಧರ ಜಳವಳ್ಳಿ, ರಘುಪತಿ ನಾಯ್ಕ್ ಹೆಗ್ಗರಣಿ, ಅತ್ಯುತ್ತಮ ಭಾಣಸಿಗ ರಘುನಂದನ್ ಭಟ್ ಶಿರಳಗಿ, ರೇಖಾ ಹೆಗಡೆ ತುಂಬೆಬೀಡು, ಶಿಕ್ಷಕ ಮನೋಹರ್ ದುಂಡಸಿ, ಗುತ್ತಿಗೆದಾರ ಮುತ್ತುಸ್ವಾಮಿ, ವೈದ್ಯ ಡಾಕ್ಟರ್ ವಿಕ್ರಂ ಶೆಟ್ಟಿ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪಶಸ್ತಿ ಪುರಸ್ಕೃತ ಕುಮಾರಿ ಕೌಶಲ್ಯ ಹೆಗಡೆ ಹಾಗೂ ಕುಶ ರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕ ವೆಂಕಟರಮಣ ಹೆಗಡೆ ತಿಳಿಸಿದ್ದಾರೆ.

ಶನಿವಾರ ಶಿರಸಿ ಬಂದ್….
ಸಿದ್ದಾಪುರ:- ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಶ್ರೀಮಠದ ಸಂಕಷ್ಟಾಪನೆ 14 ನೇ ವಾರ್ಷಿಕೋತ್ಸವ, ಮಹಾಸ್ವಾಮಿಗಳ ಜಂಗಮ ದೀಕ್ಷೆ 24 ನೇ ಹಾಗೂ 39ನೇ ಜನ್ಮದಿನ ವಾರ್ಷಿಕೋತ್ಸವ ಮತ್ತು ಜಗದ್ಗುರು ಡಾಕ್ಟರ್ ಶ್ರೀ ಬಸವ ಮಾಚಿದೇವಸ್ವಾಮಿಗಳ್ ರವರ ಐದನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ “ಕಾಯಕ ಜನೋತ್ಸವ – 2023” ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಿದ್ದಾಪುರ ತಾಲೂಕ ಮಡಿವಾಳ ಸಮಾಜದ ಅಧ್ಯಕ್ಷರಾದ ಪಿ ಬಿ ಹೊಸೂರ್ ಕೋರಿದ್ದಾರೆ.‌


ಪಟ್ಟಣದ ರಾಘವೇಂದ್ರ ಮಠದ ಸಭಾಭವನದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ವಿಷಯ ತಿಳಿಸಿ 2023 ಜನವರಿ ಐದು ಗುರುವಾರ ಮತ್ತು 6 ಶುಕ್ರವಾರ ರಂದು ಕಾರ್ಯಕ್ರಮಗಳು ನಡೆಯಲಿದ್ದು ಮಾಚಿದೇವರ ಜೀವನ ಮೌಲ್ಯಗಳು ಕುರಿತು ಉಪನ್ಯಾಸ, ಸಾಂಸ್ಕೃತಿಕ ಸಂಭ್ರಮ, ಮತ್ತು ಸಾಧಕರ ಸಮಾವೇಶ ನಡೆಯಲಿದೆ. ಅಂದು ಮಾಚಿದೇವ ಸೇವಾ ರತ್ನ ಪ್ರಶಸ್ತಿ ಪ್ರದಾನ, ವಿವಿಧ ದತ್ತಿ ನಿಧಿಗಳ ದಾನಿಗಳಿಗೆ ಪ್ರಶಸ್ತಿ ಪ್ರಧಾನ, ವಿಶ್ವ ಆದರ್ಶ ಕುಟುಂಬ ಪ್ರಶಸ್ತಿ ಪ್ರಧಾನ, ಕಾಯಕಶ್ರೀ ಪ್ರಶಸ್ತಿ ಪ್ರಧಾನ, ಮಲ್ಲಿಗೆಮ್ಮ ಮಾತೋಶ್ರೀ 2023 ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿವೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಮಡಿವಾಳ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *