ಬಾಹ್ಯ ಮತ್ತು ಆಂತರಿಕ ಸೌಂಧರ್ಯಗಳಿಂದ ಸಮಾಜಮುಖಿಗಳಾಗಿ

ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ
ಸಿದ್ದಾಪುರ
ಶಿಕ್ಷಣಕ್ಕೆ ಬಹುದೊಡ್ಡ ಶಕ್ತಿಯಿದೆ. ಬಾಹ್ಯ ಮತ್ತು ಆಂತರಿಕ ಸೌಂಧರ್ಯ, ಶಕ್ತಿಗಳನ್ನು ಹೆಚ್ಚಿಕೊಳ್ಳಲು ಶಿಕ್ಷಣ ಸಹಕಾರಿಯಾಗುತ್ತದೆ ಎಂದು ಎಂಜಿಸಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ| ಸುರೇಶ ಎಸ್.ಗುತ್ತೀಕರ ಹೇಳಿದರು.
ಅವರು ಎಂಜಿಸಿ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ವಿದ್ಯಾರ್ಥಿ ಸಂಸತ್ ಸಹಯೋಗದಲ್ಲಿ ಆಯೋಜಿಸಿದ 2022-23ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಹಸಿವಿನ ಜೊತೆ ಕಲಿತ ಪಾಠ ಯಾವಾಗಲೂ ಜ್ಞಾಪಕದಲ್ಲಿರುತ್ತದೆ. ಆಳವಾದ ಅಧ್ಯಯನ, ಗ್ರಹಿಕೆಗಳಿಂದ ಶಿಕ್ಷ ಣವನ್ನು ಪಡೆದುಕೊಂಡಾಗ ಅದು ಬದುಕಿನುದ್ದಕ್ಕೂ ಇರುತ್ತದೆ ಎಂದರು.


ಅತಿಥಿಗಳಾಗಿ ಪಾಲ್ಗೊಂಡಿದ್ದ ಕಿರುತೆರೆ,ಚಲನಚಿತ್ರ ಹಾಗೂ ಭರತನಾಟ್ಯ ಕಲಾವಿದೆ ಭಾರತಿ ಹೆಗಡೆ ಮಾತನಾಡಿ ಶಿಕ್ಷಕರು ಧನಾತ್ಮಕ ಅಂಶಗಳಿಗೆ ಪ್ರೋತ್ಸಾಹಿಸಿ ಉತ್ತಮ ನಾಗರಿಕರಾಗುವಲ್ಲಿ ನಮ್ಮನ್ನು ರೂಪಿಸುತ್ತಾರೆ. ಯುವ ಜನಾಂಗ ನಮ್ಮ ತಳಪಾಯವನ್ನು ಮರೆಯಬಾರದು. ಉಳಿದವರಿಗೆ ಒಳ್ಳೆಯದನ್ನು ಮಾಡುವ ರೀತಿಯಲ್ಲಿ, ಪಾಲಕರಿಗೆ ಹೆಮ್ಮೆ ತರುವ ನಿಟ್ಟನಲ್ಲಿ ಸಮಾಜಮುಖಿಯಾಗಿ ಬೆಳೆಯಬೇಕು.ಈ ದಿನಗಳಲ್ಲಿ ಕನಸು,ಧ್ಯೇಯೋದ್ದೇಶಗಳು ಸಂಕುಚಿತಗೊಳ್ಳುತ್ತಿದ್ದು ದೊಡ್ಡ ಕನಸು, ದೊಡ್ಡ ವಿಚಾರಗಳು ಸಾಕಾರಗೊಳ್ಳಲು ಶ್ರಮವಹಿಸಬೇಕು ಎಂದರು.


ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಪತ್ರಕರ್ತ,ಬರೆಹಗಾರ ಗಂಗಾಧರ ಕೊಳಗಿ ಕೃಷಿ ಸಂಸ್ಕøತಿ ನಮಗೆ ಸಹನೆ, ಶ್ರಮ, ಭರವಸೆ ಮುಂತಾದ ಮೌಲಿಕ ಗುಣಗಳನ್ನು ಕಲಿಸುತ್ತದೆ. ಕೃಷಿಸಂಸ್ಕøತಿ ಮೂಲದಿಂದ ಬಂದ ನಾವು ಅವುಗಳ ಜೊತೆಗೆ ಶಿಕ್ಷಣ ನೀಡುವ ಜ್ಞಾನ, ಅರಿವುಗಳನ್ನು ಗ್ರಹಿಕೆಯ ಮೂಲಕ ವಿಸ್ತಿರಿಸಿಕೊಂಡಾಗ ಬದುಕಿನ ಸವಾಲುಗಳನ್ನು ಎದುರಿಸಲು ಸಾಧ್ಯ. ತಂದೆ, ತಾಯಿಗಳ ಜೊತೆ ವಿನಯದ ನಡವಳಿಕೆ, ಗುರುಗಳಿಗೆ ಗೌರವ, ಸಮಾಜದ ಇನ್ನಿತರರ ಜೊತೆ ಸ್ನೇಹಶೀಲತೆ ಇವೆಲ್ಲ ನಮ್ಮನ್ನು ಬೆಳೆಸುತ್ತದೆ ಎಂದರು.


ಅತಿಥಿಗಳಾಗಿ ಪಾಲ್ಗೊಂಡ ಶಿಕ್ಷಣ ಪ್ರಸಾರಕ ಸಮಿತಿ ಗೌರವ ಕಾರ್ಯದರ್ಶಿ ಕೆ.ಐ.ಹೆಗಡೆ ಮಾತನಾಡಿ ಶಿಕ್ಷಣ ಪಡೆಯಲು ಯಾವ ಸೌಕರ್ಯಗಳಿಲ್ಲದ ಕಷ್ಟದ ಸಂದರ್ಭದಲ್ಲಿ ಈ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದವರು ಗಣೇಶ ಹೆಗಡೆ ದೊಡ್ಮನೆಯವರು. ಅವರು ರೂಪಿಸಿದ ಈ ಸಂಸ್ಥೆಯ ಕನಸನ್ನು ನನಸು ಮಾಡುವ ಜವಾಬ್ದಾರಿ ವಿದ್ಯಾರ್ಥಿ ಸಮೂಹ ಮತ್ತು ಪಾಲಕರ ಮೇಲಿದೆ ಎಂದರು. .ವಿದ್ಯಾರ್ಥಿ ಸಂಸತ್ ಪದಾಧಿಕಾರಿ ದರ್ಶನ ಚಕ್ರಸಾಲಿ ಉಪಸ್ಥಿತರಿದ್ದರು.
ಬಿಂದು ಗೌಡ ಸಂಗಡಿಗರು ಪ್ರಾರ್ಥಿಸಿದರು. ಪ್ರೊ| ವಿಘ್ನೇಶ್ವರ ಭಟ್ ಸ್ವಾಗತಿಸಿದರು.ವಿದ್ಯಾರ್ಥಿ ಸಂಸತ್ ಪದಾಧಿಕಾರಿ ಅದಿತಿ ಪೈ ವಾರ್ಷಿಕ ವರದಿ ವಾಚಿಸಿದರು. ಪ್ರೊ| ಶ್ರೀಶೈಲ ಕೊಂಡಗೂಳಿಕರ ವಂದಿಸಿದರು. ಮಾನಸಾ ಹೆಗಡೆ,ಅನೂಷಾ ಭಟ್ಟ ನಿರೂಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *