ಪಹಣಿ ಪತ್ರದ ಶುಲ್ಕ ಏರಿಕೆ ರೈತ ಸಂಘದ ಮನವಿ

ಸಿದ್ದಾಪುರ: ತಹಶೀಲ್ದಾರ ಕಚೇರಿಯಿಂದ ರೈತರಿಗೆ ಪೂರೈಸುತ್ತಿರುವ ಪಹಣಿ ಪತ್ರಿಕೆಗೆ ರೂ. 25 ನ್ನು ವಸೂಲಿ ಮಾಡುತ್ತಿದ್ದು, ಅದನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಕೆರಿಯಪ್ಪ ನಾಯ್ಕ ಮಾತನಾಡಿ, ಈ ಮೊದಲು ತಹಶೀಲ್ದಾರ ಕಛೇರಿಯಲ್ಲಿ ನೀಡುವ ರೈತರ ಪಹಣಿ ಪತ್ರಿಕೆಗೆ ಒಂದು ಸರ್ವೆ ನಂಬರಕ್ಕೆ 15ರು ಗಳನ್ನು ಪಡೆಯುತ್ತಿದ್ದು, ಆದರೆ ಸರಕಾರದವರು ರೈತರ ಗಮನಕ್ಕೆ ತರದೆ ಪಹಣಿ ಪತ್ರಿಕೆಯ ಶುಲ್ಕವನ್ನು ಹೆಚ್ಚಿಸಿದ್ದಾರೆ. ಈಗ ನೆಮ್ಮದಿ ಕೇಂದ್ರದಲ್ಲಿ ಒಂದು ಪಹಣಿಗೆ ರೂ. 25/- ನೀಡಿ ಪಡೆಯಬೇಕಾಗಿದೆ. ಈ ಮೊದಲು ಗಣಕೀಕೃತ ಪಹಣಿ ಪತ್ರ ಬಂದಾಗ ಒಂದು ಪಹಣಿ ಪತ್ರಿಕೆಗೆ ರೂ. 5 ಪಡೆಯುತ್ತಿದ್ದರು . ಈ ಹಿಂದೆ ಪಡೆಯುತ್ತಿದ್ದಂತೆ ಐದು ರೂಪಾಯಿ ಪಡೆದು ಪಹಣಿ ಪತ್ರಿಕೆ ವಿತರಿಸುವಂತೆ ಆಗ್ರಹಿಸಿದರು.


ರೈತರನ್ನು ಹತ್ತಿಕ್ಕು ವ ಕೆಲಸ ಸರ್ಕಾರದಿಂದ ನಡೆಯುತ್ತಿದ್ದು ಅದನ್ನು ತಕ್ಷಣ ನಿಲ್ಲಿಸಬೇಕು. ರೈತರ ಒಂದು ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಹತ್ತು ಸಲ ಓಡಾಡಿಸುವುದು ಬಂದಾಗಬೇಕು. ರೈತರಿಗೆ ದಿನ ನಿತ್ಯದ ಹಾಗೂ ಸಂಘ ಸಂಸ್ಥೆಗಳ ವ್ಯವಹಾರಕ್ಕೆ ಪಹಣಿ ಪತ್ರಿಕೆ ಬೇಕಾಗಿದ್ದು, ಎಲ್ಲಾ ಸಂಸ್ಥೆಯವರು ಮೂಲ ಪಹಣಿಯನ್ನೇ ತೆಗೆಸಿ ನೀಡಲು ಆಗ್ರಹ ಮಾಡುತ್ತಿದ್ದು, ಇದರಿಂದ ಕೇವಲ ಒಂದು ಗುಂಟೆ, ಎರಡು ಗುಂಟೆ ಇರುವ ಅತಿ ಸಣ್ಣ ರೈತರು ಪದೇ ಪದೇ ಪಹಣಿಯನ್ನು ತೆಗೆಸಬೇಕಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸದ್ದಿಲ್ಲದೇ ಸುಲಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಸರಕಾರದ ನೆಮ್ಮದಿ ಕೇಂದ್ರದಲ್ಲಿ ನೀಡುತ್ತಿರುವ ಪಹಣಿಗೆ ವಿಧಿಸುತ್ತಿರುವ ರೂ. 25/- ಕೂಡಲೇ ಕಡಿಮೆ ಮಾಡಿ ಅದನ್ನು ರೂ. 5ಕ್ಕೆ ಇಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸುತ್ತೇವೆ. ಇಲ್ಲದಿದ್ದಲ್ಲಿ ರೈತರ ಪರವಾಗಿ ಬೃಹತ್‌ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *