ಪಹಣಿ ಪತ್ರದ ಶುಲ್ಕ ಏರಿಕೆ ರೈತ ಸಂಘದ ಮನವಿ

ಸಿದ್ದಾಪುರ: ತಹಶೀಲ್ದಾರ ಕಚೇರಿಯಿಂದ ರೈತರಿಗೆ ಪೂರೈಸುತ್ತಿರುವ ಪಹಣಿ ಪತ್ರಿಕೆಗೆ ರೂ. 25 ನ್ನು ವಸೂಲಿ ಮಾಡುತ್ತಿದ್ದು, ಅದನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಕೆರಿಯಪ್ಪ ನಾಯ್ಕ ಮಾತನಾಡಿ, ಈ ಮೊದಲು ತಹಶೀಲ್ದಾರ ಕಛೇರಿಯಲ್ಲಿ ನೀಡುವ ರೈತರ ಪಹಣಿ ಪತ್ರಿಕೆಗೆ ಒಂದು ಸರ್ವೆ ನಂಬರಕ್ಕೆ 15ರು ಗಳನ್ನು ಪಡೆಯುತ್ತಿದ್ದು, ಆದರೆ ಸರಕಾರದವರು ರೈತರ ಗಮನಕ್ಕೆ ತರದೆ ಪಹಣಿ ಪತ್ರಿಕೆಯ ಶುಲ್ಕವನ್ನು ಹೆಚ್ಚಿಸಿದ್ದಾರೆ. ಈಗ ನೆಮ್ಮದಿ ಕೇಂದ್ರದಲ್ಲಿ ಒಂದು ಪಹಣಿಗೆ ರೂ. 25/- ನೀಡಿ ಪಡೆಯಬೇಕಾಗಿದೆ. ಈ ಮೊದಲು ಗಣಕೀಕೃತ ಪಹಣಿ ಪತ್ರ ಬಂದಾಗ ಒಂದು ಪಹಣಿ ಪತ್ರಿಕೆಗೆ ರೂ. 5 ಪಡೆಯುತ್ತಿದ್ದರು . ಈ ಹಿಂದೆ ಪಡೆಯುತ್ತಿದ್ದಂತೆ ಐದು ರೂಪಾಯಿ ಪಡೆದು ಪಹಣಿ ಪತ್ರಿಕೆ ವಿತರಿಸುವಂತೆ ಆಗ್ರಹಿಸಿದರು.


ರೈತರನ್ನು ಹತ್ತಿಕ್ಕು ವ ಕೆಲಸ ಸರ್ಕಾರದಿಂದ ನಡೆಯುತ್ತಿದ್ದು ಅದನ್ನು ತಕ್ಷಣ ನಿಲ್ಲಿಸಬೇಕು. ರೈತರ ಒಂದು ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಹತ್ತು ಸಲ ಓಡಾಡಿಸುವುದು ಬಂದಾಗಬೇಕು. ರೈತರಿಗೆ ದಿನ ನಿತ್ಯದ ಹಾಗೂ ಸಂಘ ಸಂಸ್ಥೆಗಳ ವ್ಯವಹಾರಕ್ಕೆ ಪಹಣಿ ಪತ್ರಿಕೆ ಬೇಕಾಗಿದ್ದು, ಎಲ್ಲಾ ಸಂಸ್ಥೆಯವರು ಮೂಲ ಪಹಣಿಯನ್ನೇ ತೆಗೆಸಿ ನೀಡಲು ಆಗ್ರಹ ಮಾಡುತ್ತಿದ್ದು, ಇದರಿಂದ ಕೇವಲ ಒಂದು ಗುಂಟೆ, ಎರಡು ಗುಂಟೆ ಇರುವ ಅತಿ ಸಣ್ಣ ರೈತರು ಪದೇ ಪದೇ ಪಹಣಿಯನ್ನು ತೆಗೆಸಬೇಕಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸದ್ದಿಲ್ಲದೇ ಸುಲಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಸರಕಾರದ ನೆಮ್ಮದಿ ಕೇಂದ್ರದಲ್ಲಿ ನೀಡುತ್ತಿರುವ ಪಹಣಿಗೆ ವಿಧಿಸುತ್ತಿರುವ ರೂ. 25/- ಕೂಡಲೇ ಕಡಿಮೆ ಮಾಡಿ ಅದನ್ನು ರೂ. 5ಕ್ಕೆ ಇಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸುತ್ತೇವೆ. ಇಲ್ಲದಿದ್ದಲ್ಲಿ ರೈತರ ಪರವಾಗಿ ಬೃಹತ್‌ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *