ಭುವನೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆಗ್ರಹ

ಕನ್ನಡಿಗರ ಕುಲದೇವತೆ ಶ್ರೀ ಭುವನೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕೆಂದು ಆಗ್ರಹಿಸಿ ಕದಂಬ ಸೈನ್ಯದವರು ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಮೂಲಕ ಮನವಿ ನೀಡಿದರು ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಮಾತನಾಡಿ ಕನ್ನಡ ಕುಲದೇವಿಯ ಭುವನೇಶ್ವರಿ ಕದಂಬರ ಕಾಲದಲ್ಲಿ ಶಂಕುಸ್ಥಾಪನೆಯಾಗಿ ಪ್ರಾರಂಭವಾಗಿ ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ನಿರ್ಮಾಣ ಕಾರ್ಯ ಮುಂದುವರಿಸಿದ್ದರು. ನಂತರ 1692 ರಲ್ಲಿ ಬಿಳಗಿ ಸಾಮಾಜ್ಯದ ಅರಸರು ಪೂರ್ಣಗೊಳಿಸಿದರು. ಕದಂಬರು, ವಿಜಯನಗರ ಸಾಮ್ರಾಜ್ಯ ಬೆಳಗಿ ಸಾಮ್ರಾಜ್ಯದ ಆರಸರುಗಳು ಆರಾಧಿಸುತ್ತಿದ್ದರು. ನಾಡ ದೇವತೆಯಾಗಿ ಮೈಸೂರು ರಾಜಮನೆತನದವರು ಆರಾಧಿಸುತ್ತಿದ್ದರು. ಇಷ್ಟೊಂದು ಹಿನ್ನಲೆ ಇರುವ ದೇವಾಲಯ ಅಭಿವೃದ್ಧಿಯಾಗದೆ ಇರುವುದು ಜನಪ್ರತಿನಿದಿನಗಳ ನಿರ್ಲಕ್ಷ ಕ್ಕೆ ಕಾರಣ ವಾಗಿದೆ ಕೂಡಲೇ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವಂತೆ ಒತ್ತಾಯ ಮಾಡುತ್ತಿದ್ದೇವೆ ಎಂದರು.


ಇದಕ್ಕೂ ಮೊದಲು ಶಂಕರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು
ಕನ್ನಡಿಗರ ಕುಲದೇವತೆ ಶ್ರೀ.ಭುವನೇಶ್ವರಿಯನ್ನು ಕನ್ನಡ ನಾಡಿನ ಅರಸರು ಇಷ್ಟಾರ್ಥ ಸಿದ್ಧಿಗಾಗಿ ಆರಾಧಿಸುತ್ತಿದ್ದರು. ತತ್ಪಲವಾಗಿ ಆಕೆಯು ಕನ್ನಡ ಭುವನೇಶ್ವರಿಯಾಗಿ ಕನ್ನಡಿಗರ ದೇವಿಯಾಗಿ ಹರಸುತ್ತಿರುವಳೆಂದು ಪ್ರತೀತಿ ಇದೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ನಗರದಿಂದ ಕುಮಟಾ ಮಾರ್ಗವಾಗಿ 8 ಕಿ.ಮೀ.ದೂರದಲ್ಲಿರುವ ಭುವನಗಿರಿಯಲ್ಲಿ 365 ದಿನಗಳಲ್ಲೂ ವಿಶೇಷ ಪೂಜೆ, ಪುನಸ್ಕಾರಗಳು ಜಾತ್ರೆ, ಉತ್ಸವ, ರಥೋತ್ಸವವನ್ನು ವಿಜೃಂಭಣೆಯಿಂದ ಆಡಳಿತ ಮಂಡಳಿ ನಡೆಸಿಕೊಂಡು ಬರುತ್ತಿದೆ. ಕೆಳಮಟ್ಟದಿಂದ 300 ಮೀಟರ್‌ಗಳಷ್ಟು ಎತ್ತರ ಪ್ರದೇಶ, ಸುಮಾರು 125 ಹಳೆಯ ಮೆಟ್ಟಿಲುಗಳಿವೆ. ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ.


ಕನ್ನಡ ಭಾಷೆಯ ಉಳಿವು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ನಮ್ಮ ನಾಡಿನ ಸಂಸ್ಕೃತಿ ಪರಂಪರೆ, ಕಲೆ ವಾಸ್ತುಶಿಲ್ಪ, ಮರಾತನ ದೇವಾಲಯಗಳನ್ನು ಉಳಿಸಿ ಸಂರಕ್ಷಣೆ ಮಾಡುವುದು ಅತಿ ಮುಖ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆ ಹಸಿರು ಸಮೃದ್ಧಿಯ ನಡುವೆ ಶೋಭಿಸುವ ಈ ಭುವನಗಿರಿ ತಾಣ ತನ್ನ ಪ್ರಶಾಂತತೆಯಿಂದಲೂ ರಮಣೀಯ ಪ್ರಾಕೃತಿಕ ಸೊಬಗಿನಿಂದಲೂ ಮನ ಸೆಳಯುತ್ತಿದೆ. ಕನ್ನಡ ಕುಲದೇತೆಯನ್ನು ಸಮಸ್ತ ಕನ್ನಡಿಗರು ಆರಾಧಿಸುತ್ತಿದ್ದಾರೆ. ಅತ್ಯಂತ ನೋವಿನ ವಿಚಾರ ಮೂಲಭೂತ ಸೌಲಭ್ಯಗಳ ಕೊರತೆ, ತಂಗುವ ವ್ಯವಸ್ಥೆಯ ಕೊರತೆ, ಭುವನಗಿರಿ ತಾಣದ ಸುತ್ತಲೂ ರಮ್ಯ ತಾಣವಾಗಿದೆ. ಪ್ರವಾಸಿಗಳನ್ನು ಕೈ ಬೀಸಿ ಕರೆಯುತ್ತಿದೆ. ಶ್ರೀ ಭುವನೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು. ಶ್ರೀ ಕಾಗಿನೆಲೆಯನ್ನು ಅಭಿವೃದ್ಧಿಪಡಿಸಿದಂತೆ ಅಭಿವೃದ್ಧಿಪಡಿಸಲು ಒತ್ತಾಯಿಸಿದೆ ಎಂದು ಅಗ್ರಹಿಸಿದರು

ಶ್ರೀ.ಭುವನೇಶ್ವರಿ ತಾಯಿಯು 10 ಮಹಾ ವಿದ್ಯಾದೇವತೆಗಳಲ್ಲಿ ಒಬ್ಬಳು. ಹಾಗೂ ತಾಯಿ ದುರ್ಗೆಯ ಒಂದು ಅಂಶ. “ಭುವನೇಶ್ವರಿ” ಅಂದರೆ ಈ ವಿಶ್ವದ ತಾಯಿ, ಶ್ರೀ.ಭುವನೇಶ್ವರಿ ದೇವಿಯ ಪಾದ ತಳದಲ್ಲಿ ಉದ್ಭವ ಲಿಂಗವು ಇದೆ. ಹತ್ತಿರದಲ್ಲೇ ಹನುಮಂತ ದೇವಾಲಯವಿದೆ. ಬಿಳಗಿಯಲ್ಲಿ
ಪುರಾತನ ಜೈನಬಸದಿ ಬಾವಿಗಳಿವೆ. ಪ್ರಸಿದ್ಧ ಶಿರಸಿ ಮಾರಿಕಾಂಭ, ಬನವಾಸಿ ಶ್ರೀ ಉಮಾ ಮಧುಕೇಶ್ವರ ದೇವಾಲಯಗಳಿವೆ. ಪ್ರಸಿದ್ಧ ಜೋಗ್‌ ಜಲಪಾತ ಹತ್ತಿರದಲ್ಲಿದೆ. ಇನ್ನು ಅನೇಕ ರಮ್ಯ ತಾಣಗಳಿವೆ.

ಕನ್ನಡದ ಪ್ರಥನು ರಾಜಧಾನಿ ಬನವಾಸಿ ಅಭಿವೃದ್ಧಿ ಪ್ರಾಧಿಕಾರಕ್ಕೆ ನಿರ್ಲಕ್ಷ್ಯ

2017 ರಲ್ಲಿ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ 5 ಕೋಟಿ ಹಣ ಬಿಡುಗಡೆ ಮಾಡಿ ಕಳೆದ ವರ್ಷಗಳಿಂದಲೂ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಣ ಬಿಡುಗಡೆ ಮಾಡಲೇ ಇಲ್ಲ ಬನವಾಸಿಯಲ್ಲಿ ರಾಜ್ಯದ ಪ್ರತಿಷ್ಠಿತ ಕದಂಬೋತ್ಸವ ಮತ್ತು ಪಂಪ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಬನವಾಸಿಗೆ ರಾಜ್ಯ, ರಾಷ್ಟ್ರ, ಮತ್ತು ಅಂತರರಾಷ್ಟ್ರೀಯ ಪ್ರವಾಸಿಗರು ಬರುತ್ತಾರ, ಮೂಲಭೂತ ಸೌಲಭ್ಯಗಳಿಲ್ಲದೆ ಶಾಪ ಹಾಕುತ್ತಿದ್ದಾರೆ. ಪ್ರಸಿದ್ಧ ಶ್ರೀ ಉಮಾ ಮಹೇಶ್ವರ ದೇವಾಲಯವಿದೆ ಸುತ್ತಲು ರಮಣೀಯ ಪ್ರಕೃತಿ ಸಂಪತ್ತು ಇದೆ ಬನವಾಸಿ ಒಂದು ಕಾಲದಲ್ಲಿ ಭಾರತ ದೇಶದಲ್ಲೇ ಪ್ರಸಿದ್ಧಿಯಾಗಿತ್ತು. ಆನೇಕ ಸಾಮ್ರಾಟರು ಆಳಿ ಹೋಗಿದ್ದಾರೆ. ಬನವಾಸಿ ಅಭಿವೃದ್ಧಿ ಪ್ರಧಿಕಾರಕ್ಕೆ 300 ಕೋಟಿ ರೂ.ಗಳನ್ನು ಫೆಬ್ರವರಿ ಬಜೆಟ್‌ನಲ್ಲಿ ನೀಡಬೇಕೆಂದು ಆಗ್ರಹಿಸಿ ಮನವಿ ಮಾಡಲಾಯಿತು.

ಕನ್ನಡ ಚಕ್ರವರ್ತಿ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಕೇಶಿ ಪುತ್ತಳಿಯನ್ನು ಬೆಂಗಳೂರು ವಿಧಾನಸೌಧದ ಮುಂದೆ ಚಾಲುಕ್ಯ ರಾಜಧಾನಿ ಬಾದಾಮಿಯಲ್ಲಿ ಸ್ಥಾಪಿಸಲು ಒತ್ತಾಯ ಮಾಡುತ್ತೇವೆ

ಜಗಜ್ಯೋತಿ ಬಸವಣ್ಣನವರು, ನಾಡಪ್ರಭು ಕೆಂಪೇಗೌಡರ ಪುತ್ತಳಿ ಸ್ಥಾಪಿಸಲು ವಿಧಾನಸೌಧದ ಮುಂದೆ ಶಂಕುಸ್ಥಾಪನೆಮಾಡಿರುವುದನ್ನು ಕದಂಬ ಸೈನ್ಯ ಸ್ವಾಗತಿಸಿದೆ, ಆದರೆ ದಕ್ಷಿಣಪಥೇಶ್ವರ ಇಮ್ಮಡಿ ಮಲಕೇಶಿ ಪ್ರತಿಮೆ ಸ್ಥಾಪಿಸಲು ಸರ್ಕಾರ ನಿರಾಸಕ್ತಿ ವಹಿಸುತ್ತಿದೆ ಏಕೆ ಕನ್ನಡ ಇಚ್ಛಾಸಕ್ತಿ ಇರುವ ಮುಖ್ಯಮಂತ್ರಿಗಳೇ? ಚಾಲುಕ್ಯ ರಾಜಧಾನಿ ಬಾದಾಮಿಯಲ್ಲಿ ಸರ್ಕಾರದ ಹೃದಯ ಯೋಜನೆಯಡಿಯಲ್ಲಿ ಇಮ್ಮಡಿ ಪುಲಕೇಶಿ, ಪುತ್ತಳಿ ಅನಾವರಣಗೊಳ್ಳಲು ಸಿದ್ಧವಾಗಿದ್ದರೂ ಸ್ಥಳಾವಕಾಶ ಕೊಡದೇ ಅನಾಥವಾಗಿ ಮಳೆಯಿಂದ ನೆನೆಯುತ್ತಿದೆ. ಬಿಸಿಲಿಗೆ ಒಣಗುತ್ತಿದೆ. ಜೊತೆಗೆ ಜಗಜ್ಯೋತಿ ಬಸವಣ್ಣನವರ ಮತ್ಥಳಿ ಕೂಡ ಸರ್ಕಾರದ ನಿರ್ಲಕ್ಷ್ಯಕ್ಕೆ ಸಮಸ್ತ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು ಸುದ್ದಿಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಶಿವಪ್ಪ, ಶಿರ್ಸಿ ತಾಲೂಕ ಸಂಚಾಲಕ ಗುತ್ಯಪ್ಪ ಮಾದರ, ಮಂಡ್ಯ ಜಿಲ್ಲಾ ಉಪಾಧ್ಯಕ್ಷ ರಾಮು, ಶಂಕರ ಮಠದ ಧರ್ಮಾಧಿಕಾರಿ ವಿಜಯ್ ಹೆಗಡೆ ದೊಡ್ಮನೆ ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *