ಎಂ. ಜಿ. ನಾಯ್ಕ ರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ


ಸಿದ್ದಾಪುರ: ೫: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಮೈಸೂರು ರಾಜ್ಯದ ನಿಕಟ ಪೂರ್ವ ಸಿ.ಆರ್.ಪಿ ಗಳಿಗೆ ನೀಡುವ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಸಿದ್ದಾಪುರ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಮಂಜುನಾಥ ಜಿ. ನಾಯ್ಕ ( ಎಮ್.ಜಿ.ನಾಯ್ಕ) ಆಯ್ಕೆಯಾಗಿದ್ದು ಸರಕಾರಿ ಶಾಲಾ ಬಡವಿದ್ಯಾರ್ಥಿಗಳ ಬಗ್ಗೆ ಅವರ ಸಾಮಾಜಿಕ ಕಾಳಜಿ, ಬದ್ಧತೆಯನ್ನು ಅರಸಿಬಂದ ಪ್ರಶಸ್ತಿಯಾಗಿದೆ ಇದು. ಅವರು ಬೆಂಗಳೂರಿನ ಯಲಹಂಕ ದಲ್ಲಿ ರಾಜ್ಯಾಧ್ಯಕ್ಷ ಪಿ. ಮಹೇಶ್ ಅವರ ನೇತೃತ್ವದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.


ಎಮ್.ಜಿ. ನಾಯ್ಕ ಈ ಹಿಂದೆ ಬಿಳಗಿ ಕ್ಲಸ್ಟರ್ ಸಂಪನ್ಮೂಲ ಶಿಕ್ಷಕರಾಗಿದ್ದಾಗ ಎಲ್ಲಾ ಶಾಲೆಗಳ ಶಿಕ್ಷಕರು ,ವಿದ್ಯಾರ್ಥಿಗಳ ಪ್ರೀತಿ ವಿಶ್ವಾಸ ಗೆದ್ದಿದ್ದಲ್ಲದೆ ಕರೋನ ಗೃಹಬಂಧನ ಸಂಕಷ್ಟದ ಸಮಯದಲ್ಲಿ ಎಲ್ಲಾ ಶಾಲೆಗಳ ಶಿಕ್ಷಕರನ್ನು ಆನ್ಲೈನ್ ಮೂಲಕ ಸಂಪರ್ಕಿಸಿ ಮನೆಯಿಂದಲೇ ಶಿಕ್ಷಕರಿಗೆ ಕಲಿಕೋಪಕರಣಗಳ ತಯಾರಿಕಾ ಸ್ಫರ್ಧೆ ಏರ್ಪಡಿಸಿದ ಜಿಲ್ಲೆಯ ಏಕೈಕ ಕ್ಲಸ್ಟರ್ ಎಂದು ಹೆಸರಾಗಿದ್ದರು. ಬಿಳಗಿ ಕ್ಲಸ್ಟರ್ ನ ಯೂಟ್ಯೂಬ್ ಚಾನೆಲ್ ತೆರೆದು ಅದರಲ್ಲಿ ತಮ್ಮ ಕ್ಲಸ್ಟರ್ ಶಿಕ್ಷಕರು ತಯಾರಿಸಿದ ಕಲಿಕಾ ಸಾಮಗ್ರಿಗಳ ವಿಡಿಯೋ ಗಳನ್ನು ಅಪ್ಲೋಡ್ ಮಾಡಿ ಎಲ್ಲರೂ ವೀಕ್ಷಿಸುವಂತೆ ಮಾಡಿದ್ದಾರೆ.

ನಲಿಕಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಸಾವಿರಾರು ಶಿಕ್ಷಕರಿಗೆ ತರಬೇತಿಯನ್ನು ನೀಡಿರುತ್ತಾರೆ. ಇತ್ತೀಚೆಗೆ ಅವರು ತಮ್ಮದೇ ನೇತೃತ್ವದಲ್ಲಿ ತಾಲೂಕಿನ ಆಸಕ್ತ ಶಿಕ್ಷಕರ ನೆರವಿನಿಂದ ‘ಧ್ವನಿ’ ಹೆಸರಿನ ಸ್ವಯಂ ಸೇವಕ ಸಂಘ ತೆರೆದು ತಾಲೂಕಿನ ಅನಾಥ, ಏಕಪಾಲಕ, ಕಡು ಬಡತನದಿಂದ ಬಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಛತ್ರಿ, ಮಾಸಿಕ ಧನಸಹಾಯ ಇತ್ಯಾದಿ ಹತ್ತಾರು ಮಾನವೀಯ ಕಾಯಕದಲ್ಲಿ ತೊಡಗಿದ್ದಾರೆ.
ಇವರ ಮಾನವೀಯ, ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಇಂದು ದಿನಾಂಕ ೫-೧-೨೦೨೩ ರಂದು ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವುದು ಪ್ರಶಸ್ತಿಯ ಗರಿಮೆಯನ್ನು ಹೆಚ್ಚಿಸಿದೆ.


ಪ್ರಶಸ್ತಿ ಪುರಸ್ಕೃತ ಎಮ್.ಜಿ. ನಾಯ್ಕ ರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯ ಕುಮಾರ್, ಶಿಕ್ಷಕರ ಪ್ರತಿಭಾ ಪರಿಷತ್ತಿನ ರಾಜ್ಯ ಸಹಕಾರ ಸಮಿತಿಯ ಸದಸ್ಯ ಗೋಪಾಲ ನಾಯ್ಕ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಮಾಜಿ ಅಧ್ಯಕ್ಷ ಎಮ್.ಕೆ. ನಾಯ್ಕ ಕಡಕೇರಿ, ಶಿಕ್ಷಕರ ಪ್ರತಿಭಾ ಪರಿಷತ್ತಿನ ತಾಲೂಕು ಅಧ್ಯಕ್ಷೆ ರೀಟಾ ಡಿಸೋಜ, ಹಾಗೂ ನೂರಾರು ಶಿಕ್ಷಕರು,, ಎಸ್.ಡಿ.ಎಮ್.ಸಿ ಅಧ್ಯಕ್ಷ ನಾಗರಾಜ ಅಂಬಿಗ, ಸದಸ್ಯರು, ಪಾಲಕರು ಅಭಿನಂದಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *