ಎಂ. ಜಿ. ನಾಯ್ಕ ರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ


ಸಿದ್ದಾಪುರ: ೫: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಮೈಸೂರು ರಾಜ್ಯದ ನಿಕಟ ಪೂರ್ವ ಸಿ.ಆರ್.ಪಿ ಗಳಿಗೆ ನೀಡುವ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಸಿದ್ದಾಪುರ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಮಂಜುನಾಥ ಜಿ. ನಾಯ್ಕ ( ಎಮ್.ಜಿ.ನಾಯ್ಕ) ಆಯ್ಕೆಯಾಗಿದ್ದು ಸರಕಾರಿ ಶಾಲಾ ಬಡವಿದ್ಯಾರ್ಥಿಗಳ ಬಗ್ಗೆ ಅವರ ಸಾಮಾಜಿಕ ಕಾಳಜಿ, ಬದ್ಧತೆಯನ್ನು ಅರಸಿಬಂದ ಪ್ರಶಸ್ತಿಯಾಗಿದೆ ಇದು. ಅವರು ಬೆಂಗಳೂರಿನ ಯಲಹಂಕ ದಲ್ಲಿ ರಾಜ್ಯಾಧ್ಯಕ್ಷ ಪಿ. ಮಹೇಶ್ ಅವರ ನೇತೃತ್ವದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.


ಎಮ್.ಜಿ. ನಾಯ್ಕ ಈ ಹಿಂದೆ ಬಿಳಗಿ ಕ್ಲಸ್ಟರ್ ಸಂಪನ್ಮೂಲ ಶಿಕ್ಷಕರಾಗಿದ್ದಾಗ ಎಲ್ಲಾ ಶಾಲೆಗಳ ಶಿಕ್ಷಕರು ,ವಿದ್ಯಾರ್ಥಿಗಳ ಪ್ರೀತಿ ವಿಶ್ವಾಸ ಗೆದ್ದಿದ್ದಲ್ಲದೆ ಕರೋನ ಗೃಹಬಂಧನ ಸಂಕಷ್ಟದ ಸಮಯದಲ್ಲಿ ಎಲ್ಲಾ ಶಾಲೆಗಳ ಶಿಕ್ಷಕರನ್ನು ಆನ್ಲೈನ್ ಮೂಲಕ ಸಂಪರ್ಕಿಸಿ ಮನೆಯಿಂದಲೇ ಶಿಕ್ಷಕರಿಗೆ ಕಲಿಕೋಪಕರಣಗಳ ತಯಾರಿಕಾ ಸ್ಫರ್ಧೆ ಏರ್ಪಡಿಸಿದ ಜಿಲ್ಲೆಯ ಏಕೈಕ ಕ್ಲಸ್ಟರ್ ಎಂದು ಹೆಸರಾಗಿದ್ದರು. ಬಿಳಗಿ ಕ್ಲಸ್ಟರ್ ನ ಯೂಟ್ಯೂಬ್ ಚಾನೆಲ್ ತೆರೆದು ಅದರಲ್ಲಿ ತಮ್ಮ ಕ್ಲಸ್ಟರ್ ಶಿಕ್ಷಕರು ತಯಾರಿಸಿದ ಕಲಿಕಾ ಸಾಮಗ್ರಿಗಳ ವಿಡಿಯೋ ಗಳನ್ನು ಅಪ್ಲೋಡ್ ಮಾಡಿ ಎಲ್ಲರೂ ವೀಕ್ಷಿಸುವಂತೆ ಮಾಡಿದ್ದಾರೆ.

ನಲಿಕಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಸಾವಿರಾರು ಶಿಕ್ಷಕರಿಗೆ ತರಬೇತಿಯನ್ನು ನೀಡಿರುತ್ತಾರೆ. ಇತ್ತೀಚೆಗೆ ಅವರು ತಮ್ಮದೇ ನೇತೃತ್ವದಲ್ಲಿ ತಾಲೂಕಿನ ಆಸಕ್ತ ಶಿಕ್ಷಕರ ನೆರವಿನಿಂದ ‘ಧ್ವನಿ’ ಹೆಸರಿನ ಸ್ವಯಂ ಸೇವಕ ಸಂಘ ತೆರೆದು ತಾಲೂಕಿನ ಅನಾಥ, ಏಕಪಾಲಕ, ಕಡು ಬಡತನದಿಂದ ಬಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಛತ್ರಿ, ಮಾಸಿಕ ಧನಸಹಾಯ ಇತ್ಯಾದಿ ಹತ್ತಾರು ಮಾನವೀಯ ಕಾಯಕದಲ್ಲಿ ತೊಡಗಿದ್ದಾರೆ.
ಇವರ ಮಾನವೀಯ, ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಇಂದು ದಿನಾಂಕ ೫-೧-೨೦೨೩ ರಂದು ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವುದು ಪ್ರಶಸ್ತಿಯ ಗರಿಮೆಯನ್ನು ಹೆಚ್ಚಿಸಿದೆ.


ಪ್ರಶಸ್ತಿ ಪುರಸ್ಕೃತ ಎಮ್.ಜಿ. ನಾಯ್ಕ ರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯ ಕುಮಾರ್, ಶಿಕ್ಷಕರ ಪ್ರತಿಭಾ ಪರಿಷತ್ತಿನ ರಾಜ್ಯ ಸಹಕಾರ ಸಮಿತಿಯ ಸದಸ್ಯ ಗೋಪಾಲ ನಾಯ್ಕ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಮಾಜಿ ಅಧ್ಯಕ್ಷ ಎಮ್.ಕೆ. ನಾಯ್ಕ ಕಡಕೇರಿ, ಶಿಕ್ಷಕರ ಪ್ರತಿಭಾ ಪರಿಷತ್ತಿನ ತಾಲೂಕು ಅಧ್ಯಕ್ಷೆ ರೀಟಾ ಡಿಸೋಜ, ಹಾಗೂ ನೂರಾರು ಶಿಕ್ಷಕರು,, ಎಸ್.ಡಿ.ಎಮ್.ಸಿ ಅಧ್ಯಕ್ಷ ನಾಗರಾಜ ಅಂಬಿಗ, ಸದಸ್ಯರು, ಪಾಲಕರು ಅಭಿನಂದಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *