ಹಳಿಯಾಳ: ೧೪೪ ಜಾರಿ

ಹಳಿಯಾಳ: ದೇವಸ್ಥಾನದ ಸುತ್ತಲಿನ ಪಾದಚಾರಿ ಮಾರ್ಗದ ನಿರ್ಮಾಣ ವಿರೋಧಿಸಿ ಪ್ರತಿಭಟನೆ, ಸ್ಥಳದಲ್ಲಿ ಸೆಕ್ಷನ್ 144 ಜಾರಿ

ಹಳಿಯಾಳ ಗ್ರಾಮದ ಆರಾಧ್ಯ ದೈವವಾದ ಗ್ರಾಮ್ಯ ದೇವಿ ದೇವಸ್ಥಾನದ ಸುತ್ತ ಪಾದಚಾರಿ ಮಾರ್ಗ ನಿರ್ಮಿಸುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ನೂರಾರು ಜನರು ಬೀದಿಗಿಳಿದ ಸಂದರ್ಭ ಸುರಕ್ಷತಾ ಕ್ರಮವಾಗಿ 144 ಸೆಕ್ಷನ್‌ ಜಾರಿ, ಹಳಿಯಾಳ ಪ್ರತಿಭಟನೆಗೆ ಸಾಕ್ಷಿಯಾಯಿತು.

The pavement around Gramya Devi temple being razed in Haliyal taluk of Uttara Kannada district on Friday

ಹಳಿಯಾಳ: ಹಳಿಯಾಳ ಗ್ರಾಮದ ಆರಾಧ್ಯ ದೈವವಾದ ಗ್ರಾಮ್ಯ ದೇವಿ ದೇವಸ್ಥಾನದ ಸುತ್ತ ಪಾದಚಾರಿ ಮಾರ್ಗ ನಿರ್ಮಿಸುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ನೂರಾರು ಜನರು ಬೀದಿಗಿಳಿದ ಸಂದರ್ಭ ಸುರಕ್ಷತಾ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಭಕ್ತರಿಂದ ಪ್ರತಿಭಟನೆ ನಡೆಯಿತು.

ದೇವಸ್ಥಾನದ ಸುತ್ತ ಪಾದಚಾರಿ ಮಾರ್ಗ ನಿರ್ಮಿಸಲು ಪುರಸಭೆ ಅಧಿಕಾರಿಗಳು ಮುಂದಾಗಿದ್ದು, ಪಟ್ಟಣದ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿದರು. ಎಲ್ಲರೂ ದೇವಸ್ಥಾನದಲ್ಲಿ ಜಮಾಯಿಸಿ ದೇವಿಗೆ ಪೂಜೆ ಸಲ್ಲಿಸಿದರು ಮತ್ತು ಬಳಿಕ ರಸ್ತೆಗಿಳಿದು ಪಾಲಿಕೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ದೇಗುಲದ ಸುತ್ತ ನಿರ್ಮಿಸುತ್ತಿರುವ ಪಾದಚಾರಿ ಮಾರ್ಗವನ್ನು ತೆರವುಗೊಳಿಸಬೇಕು ಹಾಗೂ ದೇವಸ್ಥಾನದ ಸುತ್ತ ಇರುವ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಮೆರವಣಿಗೆ ನಡೆಸಿದರು. 

‘ಶತಮಾನಗಳಿಂದ ಇಲ್ಲಿ ಪೂಜೆ ಮಾಡುತ್ತಾ ಬಂದಿದ್ದೇವೆ. ವಿಜಯದಶಮಿಯಂದು ಇಲ್ಲಿನ ಬನ್ನಿ ಮರವು ನಮಗೆ ಪವಿತ್ರವಾಗಿದೆ. ಕೆಲವರ ಪ್ರಚೋದನೆ ಮೇರೆಗೆ ತೆರವುಗೊಳಿಸಲು ಯತ್ನಿಸುತ್ತಿದ್ದಾರೆ’ ಎಂದು ಗ್ರಾಮ್ಯದೇವಿ ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಮಂಗೇಶ್ ದೇಶಪಾಂಡೆ ಹೇಳಿದರು.

ನಂತರ ಪ್ರತಿಭಟನಾಕಾರರು ಮಣ್ಣು ತೆಗೆಯುವ ಯಂತ್ರಗಳನ್ನು ತಂದು ಪಾದಚಾರಿ ಮಾರ್ಗವನ್ನು ತೆಗೆದರು. ಪೊಲೀಸರು ಮಧ್ಯ ಪ್ರವೇಶಿಸಿದಾಗ ಪ್ರತಿಭಟನಾಕಾರರೊಂದಿಗೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾಕಾರರು ಪಾದಚಾರಿ ಮಾರ್ಗವನ್ನು ತೆರವುಗೊಳಿಸಿ ಅಲ್ಲಿ ಕೇಸರಿ ಧ್ವಜವನ್ನು ಅಳವಡಿಸಿ ಅದನ್ನು ತೆಗೆಯದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

ಸ್ಥಳಕ್ಕಾಗಮಿಸಿದ ಬಿಜೆಪಿ ಮುಖಂಡ, ಮಾಜಿ ಶಾಸಕ ಸುನೀಲ್ ಹೆಗಡೆ, ಯಾರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಅವರು, ಆರಾಧನೆಯ ಸ್ಥಳವು ಬೇರೆ ಧರ್ಮಕ್ಕೆ ಸೇರಿದ್ದರೆ, ನೀವು ಅದೇ ರೀತಿ ಮಾಡುತ್ತೀದ್ದೀರಾ. ಒತ್ತುವರಿ ತೆರವು ಮಾಡಿ ನಮ್ಮ ದೇವಸ್ಥಾನದ ಜಮೀನು ವಾಪಸ್ ನೀಡಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದರು.

ಪ್ರತಿಭಟನಾಕಾರರು ದಿಡೀರ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದು ಉತ್ತರ ಕನ್ನಡ ಎಸ್‌ಪಿ ಎನ್ ವಿಷ್ಣುವರ್ಧನ್ ಹೇಳಿದ್ದಾರೆ. ‘ನಾವು ನಮ್ಮ ಸಿದ್ಧತೆಗಳನ್ನು ಮಾಡಿದ್ದೇವೆ ಮತ್ತು ಯಾವುದೇ ಅಹಿತಕರ ಘಟನೆ ನಡೆದಿಲ್ಲ’ ಡಿಎಆರ್ ಮತ್ತು ಸ್ಥಳೀಯ ಪೊಲೀಸರ ಎರಡು ಘಟಕಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *