ಸಿದ್ಧಾಪುರ ಉತ್ಸವ,ಸ್ಥಳಿಯರಿಗೆ ನಾನಾ ಸ್ಫರ್ಧೆಗಳು

ಸಿದ್ದಾಪುರ: ಪಟ್ಟಣದ ನೆಹರು ಮೈದಾನದಲ್ಲಿ ಫೆ. 17 ರಿಂದ 19 ರವರೆಗೆ ನಡೆಯಲಿರುವ ಸಿದ್ದಾಪುರ ಉತ್ಸವದಲ್ಲಿ ತಾಲೂಕಿನ ಸ್ಥಳೀಯರಿಗೆ ಸಮಿತಿ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಿದ್ದಾಪುರ ಉತ್ಸವ ಸಮಿತಿಯ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜೀಬೈಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶಿ ಕ್ರೀಡಾಕೂಟ ಸ್ಪರ್ಧೆ

ಉತ್ಸವದ ಪ್ರಯುಕ್ತ ಪಟ್ಟಣದ ನೆಹರು ಮೈದಾನದಲ್ಲಿ
ಫೆ.17 ರಂದು ಬೆಳಗ್ಗೆ 9:30 ರಿಂದ ನಡೆಯಲಿರುವ ಕ್ರೀಡಾಕೂಟದಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ ಇರಲಿದ್ದು, ಸ್ಪರ್ಧೆಗೆ ಪ್ರತಿ ಗ್ರಾಮ ಪಂಚಾಯತನಿಂದ 7 ಜನರ ಒಂದು ಪುರುಷ ಹಾಗೂ ಒಂದು ಮಹಿಳಾ ತಂಡಗಳಿಗೆ ಅವಕಾಶವಿರುತ್ತದೆ. ಅಲ್ಲದೆ ವೈಯಕ್ತಿಕ ಸ್ಪರ್ಧೆಯಲ್ಲಿ ರಸ್ತೆ ಓಟ (ಕ್ರಾಸ್ ಕಂಟ್ರಿ), ಮಹಿಳೆಯರಿಗೆ ಸಂಗೀತ ಖುರ್ಚಿ ಸ್ಪರ್ಧೆ, ಪುರುಷರಿಗೆ ಗೋಣಿಚೀಲ ಓಟದ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ಧಿಗಳಿಗೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಆಸಕ್ತರು ಫೆ.15 ರೊಳಗೆ ತಮ್ಮ ಹೆಸರನ್ನು ಮಾಧವ ಎಮ್. ನಾಯ್ಕ – 9449360803 ರನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.

ರಂಗೋಲಿ ಸ್ಪರ್ಧೆ

ಪಟ್ಟಣದ ಶಿಕ್ಷಣ ಪ್ರಸಾರಕ ಸಮಿತಿಯ ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆ.17ರಂದು ಮಧ್ಯಾಹ್ನ 3.30 ರಿಂದ ಸಂಜೆ 5 ಗಂಟೆಯವರೆಗೆ ರಂಗೋಲಿ ಸ್ಪರ್ಧೆಯನ್ನು ಸಮಿತಿ ವತಿಯಿಂದ ತಾಲೂಕಿನ ಸ್ಥಳೀಯರಿಗೆ ಆಯೋಜಿಸಿದ್ದು, ಸ್ಪರ್ಧೆಯಲ್ಲಿ ಚುಕ್ಕಿ ರಂಗೋಲಿ ಬಿಡಿಸಲು ಮಾತ್ರ ಅವಕಾಶವಿದ್ದು, ರಂಗೋಲಿ ಬಿಡಿಸಲು ಬೇಕಾದ ಸಾಮಗ್ರಿಗಳನ್ನು ಸ್ಪರ್ಧಿಗಳೇ ತರಬೇಕಾಗಿದೆ. ನಿಗದಿಪಡಿಸಲಾದ ಸಮಯದ ಅವಧಿಯು 1 ಗಂಟೆ 30 ನಿಮಿಷವಿರಲಿದ್ದು ಸ್ಪರ್ಧಿಗಳು 30 ನಿಮಿಷ ಮೊದಲು ಸ್ಥಳದಲ್ಲಿ ಹಾಜರಿರಬೇಕು. ಒದಗಿಸಿದ ಜಾಗವು 4 * 4 ಅಡಿ ಅಳತೆಯಾಗಿರುತ್ತದೆ. ಅಲ್ಲದೇ ಯಾವುದೇ ಸಂದರ್ಭದಲ್ಲಿ ಹೆಚ್ಚುವರಿ ಸಮಯವನ್ನು ನೀಡಲಾಗುವುದಿಲ್ಲ. ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ಧಿಗಳಿಗೆ ಸೂಕ್ತ ಬಹುಮಾನ ನೀಡಲಾಗುತ್ತಿದ್ದು, ಹೆಸರು ನೋಂದಾಯಿಸಲು ಫೆ.15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು ರಾಘವೇಂದ್ರ ರಾಯ್ಕರ್ 9845297298, ಶಂಕರಮೂರ್ತಿ ನಾಯ್ಕ 8861212683, ಚಂದ್ರಕಲಾ ನಾಯ್ಕ 8123680716, ಸುಮನಾ ಕಾಮತ್ 9945190466, ರಾಧಿಕಾ ಕಾನಗೋಡ 9945105200 ಇವರನ್ನು ಸಂಪರ್ಕಿಸಬಹುದು.

ಅಂಗಡಿ ಮುಂಗಟ್ಟುಗಳಿಗೆ ಅವಕಾಶ

3 ದಿನಗಳ ಕಾಲ ನಡೆಯಲಿರುವ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಲಿರುವ ಹಿನ್ನೆಲೆಯಲ್ಲಿ ವಿವಿಧ ಬಗೆಯ ಖಾದ್ಯ, ವಸ್ತ್ರದ ಮಳಿಗೆ, ಮಕ್ಕಳ ಆಟಿಕೆ ಸಾಮಾನುಗಳು ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳು ಹಾಕುವವರಿಗೆ ಸ್ಥಳಾವಕಾಶ ನೀಡಲಾಗುತ್ತಿದ್ದು, ಅಂಗಡಿ ಮುಂಗಟ್ಟುಗಳಿಗೆ ಸ್ಥಳ ಬೇಕಾದಲ್ಲಿ ಸಮಿತಿಯ ಕೋಶಾಧ್ಯಕ್ಷ ವಿನಯ ಹೊನ್ನೆಗುಂಡಿ 9606730284 ಇವರನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *