ಕುಮಟಾ ತಾಲೂಕಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಕೂಜಳ್ಳಿಯ ಡಾ.ಎಂ.ಎಚ್.ನಾಯ್ಕ ಆಯ್ಕೆ

ಕುಮಟಾ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕೂಜಳ್ಳಿಯ ಡಾಕ್ಟರ್ ಎಂ.ಎಚ್. ನಾಯ್ಕರನ್ನು ಕಾರ್ಯಕಾರಿ ಸಮಿತಿಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಸುಬ್ಬಯ್ಯ ನಾಯ್ಕ ತಿಳಿಸಿದ್ದಾರೆ.

ಇತ್ತೀಚೆಗೆ ಕುಮಟಾದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳ ವೈಯಕ್ತಿಕ ಅಭಿಪ್ರಾಯ ಸಂಗ್ರಹಿಸಲಾಯಿತು. ಫೆಬ್ರವರಿ 28ರಂದು ಕೋನಳ್ಳಿಯಲ್ಲಿ ನಡೆಯುವ ತಾಲೂಕಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ನಾಯ್ಕ ಉಪಸ್ಥಿತರಿದ್ದು,ಆಯ್ಕೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು. ಪರಿಷತ್ತಿನ ನಿಯಮದಂತೆ ತಾಲೂಕಿನ ಹಿರಿತನ ಮತ್ತು ಸಾಹಿತ್ಯ ಸೇವೆಯನ್ನು ಆಧರಿಸಿ ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದಾಗ ಸರ್ವಾನುಮತದಿಂದ ಡಾಕ್ಟರ್ ಎಂ. ಎಚ್.ನಾಯ್ಕರನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಡಾ. ಶ್ರೀಧರ್ ಗೌಡ ಉಪ್ಪಿನಗಣಪತಿ, ಕಸಾಪ ಕಾರ್ಯದರ್ಶಿಗಳಾದ ಪ್ರಮೋದ ನಾಯ್ಕ,ಪ್ರದೀಪ ನಾಯಕ, ಪದಾಧಿಕಾರಿಗಳಾದ ನಾಗರಾಜ ಶೆಟ್ಟಿ, ಸಂಧ್ಯಾ ಭಟ್ಟ, ಸುರೇಶ ಭಟ್ಟ, ಮಾಲಾ ನಾಯ್ಕ, ಪ್ರಕಾಶ ನಾಯ್ಕ, ವಿಜಯ ಗುನಗ,ಎಂ.ಎಂ.ಚಂದಾವರ ಮುಂತಾದವರು ಉಪಸ್ಥಿತರಿದ್ದರು.

*ಡಾ. ಎಮ್. ಎಚ್ ನಾಯ್ಕ*: ಮಂಜುನಾಥ ಹೊಸಬಯ್ಯ ನಾಯ್ಕರವರು1956ರಲ್ಲಿ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ಜನಿಸಿದರು.ಪ್ರಾಥಮಿಕ ಶಿಕ್ಷಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಜಳ್ಳಿಯಲ್ಲಿಯೂ, ಪ್ರೌಢ ಶಿಕ್ಷಣ ಮಲ್ಲಾಪುರದ ಗುರುಪ್ರಸಾದ ಪ್ರೌಢಶಾಲೆಯಲ್ಲಿಯೂ, ಕುಮಟಾದ ಎ.ವಿ. ಬಾಳಿಗಾ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಮ್. ಎ.ಪದವಿ ಪಡೆದರು.1979 ರಲ್ಲಿ ಕಾರವಾರದ ಕೆನರಾ ವೆಲ್ಫೇರ್ ಟ್ರಸ್ಟಿನ ದಿವೇಕರ ವಾಣಿಜ್ಯ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆ ಪ್ರಾರಂಭಿಸಿದರು. ನಂತರ ಇಂಗ್ಲಿಷ್ ಚಿಂತಕ, ಕಾದಂಬರಿಕಾರ, ಹೋರಾಟಗಾರ ಜಾರ್ಜ್ ಆರ್ವೆಲ್ ಕುರಿತು, ಸುಧಾರಣಾ ವಾದಿ ವ್ಯಕ್ತಿ ನಿಷ್ಠವಾದ ಒಂದು ಅಧ್ಯಯನ ಎನ್ನುವ ಪ್ರಬಂಧ ಮಂಡಿಸಿ 1995 ರಲ್ಲಿ ಡಾಕ್ಟರೇಟ್ ಪದವಿ ಪಡೆದರು. ಸಹಾಯಕ ಪ್ರೊಫೆಸರ್ ಆಗಿ ಬಡ್ತಿ ಹೊಂದಿ ಪ್ರಾಂಶುಪಾಲರಾಗಿ ಮೂರು ವರ್ಷ ಸೇವೆ ಸಲ್ಲಿಸಿ 2016ರಂದು ನಿವೃತ್ತಿಯಾಗಿರುತ್ತಾರೆ.

ಮಾಜಿ ಸಂಸದ ದಿ. ಬಿ. ವಿ. ನಾಯಕ ಮತ್ತು ದಿ.ಎಸ್.ಆರ್. ನಾರಾಯಣ್ ರಾವ್ ಮುಂತಾದವರನ್ನೊಳಗೊಂಡ ಗಿಬ್ ಎನ್ನುವ ಚಿಂತನ ವೇದಿಕೆ ಸದಸ್ಯರಾಗಿಯೂ, ಸಂಚಾಲಕರಾಗಿಯೂ ಸುಮಾರು ಮೂರು ದಶಕಗಳ ಕಾಲ ನಿರ್ವಹಣೆ ಮಾಡಿ ಪಕ್ವ ಅನುಭವ ಹೊಂದಿರುತ್ತಾರೆ. ದಿ ಟೈಮ್ಸ್ ಆಫ್ ಇಂಡಿಯಾ ವೃತ್ತ ಪತ್ರಿಕೆಯ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ಹೆಗ್ಗಳಿಕೆ ಇವರದ್ದಾಗಿದೆ. ಸಂಯುಕ್ತ ಕರ್ನಾಟಕ,ಮುಂಗಾರು, ಸಂಕ್ರಮಣ, ಕರಾವಳಿ ಮುಂಜಾವು ಮುಂತಾದ ಪತ್ರಿಕೆಗಳಲ್ಲಿ ಪ್ರಚಲಿತ ವಿಷಯಗಳ ಕುರಿತು ಲೇಖನಗಳು ಪ್ರಕಟವಾಗಿವೆ. ಕರಾವಳಿ ಮುಂಜಾವು ದಿನಪತ್ರಿಕೆಯಲ್ಲಿ ಮುಕ್ತ ಚಿಂತಕ ಅಂಕಣದಲ್ಲಿ ಸುಮಾರು ಏಳು ವರ್ಷಗಳ ಕಾಲ ಮುಕ್ತ ಚಿಂತನ ಅಂಕಣ ಬರಹ 350ಕ್ಕೂ ಹೆಚ್ಚು ಲೇಖನಗಳು ಪ್ರಕಟವಾಗಿವೆ.

ಪ್ರಕಟಿತ ಕೃತಿ: ವಿಮೋಚನೆ- (ವೈಚಾರಿಕ ಲೇಖನಗಳ ಸಂಗ್ರಹ)1990, ಚಿರಂತನ (ಆಯ್ದ ಲೇಖನಗಳ ಸಂಗ್ರಹ)2010

ಪರಿವರ್ತನ ಪಯಣ (2012)

ಚೈತನ್ಯ ಜ್ಯೋತಿ (2021)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *