ಯಾರಿಗೆ ಎಲ್ಲಿಯ ಟಿಕೇಟ್? ಘಟ್ಟ ಇಳಿಯಲಿದ್ದಾರಾ..?ಶಶಿ,ನಿವೇದಿತ್‌, ಅನಂತ ಹೆಗಡೆ!

ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿ ಇಂದು ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಿರುವ ಈಡಿಗರ ಗುರು ಪ್ರಣವಾನಂದ ಸ್ವಾಮೀಜಿ ಮಂಡ್ಯದಲ್ಲಿ ಒಕ್ಕಲಿಗರ ಮತಬಾಹುಳ್ಯವಿರುವ ಎಲ್ಲಾ ಕ್ಷೇತ್ರಗಳಲ್ಲಿ ಒಕ್ಕಲಿಗರಿಗೆ ಟಿಕೇಟ್‌ ನೀಡುವ ಪಕ್ಷಗಳು ಕರಾವಳಿ ಮಲೆನಾಡಿನಲ್ಲಿ ಹೆಚ್ಚಿನ ಮತದಾರರಿರುವ ದೀವರು, ಈಡಿಗ, ಬಿಲ್ಲವರಿಗ್ಯಾಕೆ ಟಿಕೇಟ್‌ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಈ ಪ್ರಶ್ನೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ರಾಜ್ಯದ ಕನಿಷ್ಠ ೨೫ ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೇಟ್‌ ನೀಡಬೇಕೆಂದು ಬ್ರಾಹ್ಮಣ ಮಹಾಸಭಾ ಬೇಡಿಕೆ ಇಟ್ಟಿದೆ.

ಜಾತಿ ಇಲ್ಲ ಧರ್ಮ, ರಾಷ್ಟ್ರೀಯತೆ ಎನ್ನುವ ಪಕ್ಷವೊಂದು ಲಿಂಗಾಯತ ಮತ್ತು ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಒಕ್ಕಲಿಗರು, ಲಿಂಗಾಯತರಿಗೆ ಟಿಕೇಟ್‌ ನೀಡಿ ಇತರ ತಬ್ಬಲಿ ಜಾತಿಗಳ ಪ್ರಾಬಲ್ಯವಿರುವಲ್ಲಿ ಹಿಂದುತ್ವ ಎನ್ನುವುದು ಬಹಿರಂಗ ಗುಟ್ಟಾಗುತ್ತಿದೆ.

ಈ ಸಂದರ್ಭದಲ್ಲಿ ಪೇಶ್ವೆ ಬ್ರಾಹ್ಮಣರನ್ನು ಆರೆಸ್ಸೆಸ್‌ ತುಷ್ಟೀಕರಿಸುತ್ತಾ ಬಹುಸಂಖ್ಯಾತರಿಗೆ ಬಿ.ಜೆ.ಪಿ. ನಿರ್ಲಕ್ಷಿಸುತ್ತಿದೆ ಎನ್ನುವ ಕುಮಾರಸ್ವಾಮಿಯವರ ಮಾತು ಹೆಚ್ಚಿನ ಚರ್ಚೆಗೊಳಪಟ್ಟು ಟೀಕೆ, ವಿಮರ್ಶೆಗಳಿಗೂ ಕಾರಣವಾಗಿದೆ.

ರಾಜ್ಯದಲ್ಲಿ ಒಕ್ಕಲಿಗರ ಒಲವು ಜನತಾಪರಿವಾರದಲ್ಲಿದ್ದರೆ, ಲಿಂಗಾಯತರ ಒಲವು ಸಂಘ ಪರಿವಾರದತ್ತ ಎನ್ನುತ್ತಾ ಲಿಂಗಾತರಿಗೆ ಅನ್ಯರನ್ನು ನಾಯಕರನ್ನಾಗಿಸುವ ಪ್ರಯೋಗಗಳು ನಡೆಯುತ್ತಿವೆ. ಹಿಂದುಳಿದ ವರ್ಗಗಳ ಕಾಂಗ್ರೆಸ್‌ ಬ್ರಾಹ್ಮಣರನ್ನು ಒಲೈಸುತ್ತಲೇ ಅಹಿಂದ, ಒಕ್ಕಲಿಗ, ಲಿಂಗಾಯತರ ಸಮೀಕರಣದೊಂದಿಗೆ ಅಧಿಕಾರದ ಗದ್ದುಗೆ ಏರಲು ಪ್ರಯತ್ನಿಸುತ್ತಿದೆ.

ಈ ನಡುವೆ ರಾಮಕೃಷ್ಣ ಹೆಗಡೆ ಪರಿವಾರದ ಶಶಿ ಎನ್ನುವ ಕುಡಿ ಜನತಾ ಪರಿವಾರ ಬಿಟ್ಟು ಸಂಘ ಪರಿವಾರದ ಬಿ.ಜೆ.ಪಿ. ಸೇರಲು ಈ ತಿಂಗಳ ಕೊನೆಯ ಒಂದು ದಿನವನ್ನು ನಿಗದಿ ಮಾಡಿದೆ.

ಹಾಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸೇರಿ ಶಶಿ ಭೂಷಣ ಹೆಗಡೆಯವರ ವರೆಗೆ ಜನತಾ ಪರಿವಾರದ ಅನೇಕರು ಸಂಘದ ಚೆಡ್ಡಿ ಹಾಕಿ ಕೋಲು ಜಳಪಿಸುತ್ತಿರುವ ಹಿಂದೆ ಈ ನಾಯಕರು ಮತ್ತು ಅವರ ಪರಿವಾರಗಳ ಸೋಲುಗಳಿವೆ.

ಡಾ.ಶಶಿಭೂಷಣ ಹೆಗಡೆ ಪ್ರಿಯಾಂಕಾ ಖರ್ಗೆ ಮೂಲಕ ಕಾಂಗ್ರೆಸ್‌ ಸೇರುವ ಪ್ರಯತ್ನ ನಡೆಸಿ ಅಲ್ಲಿ ಭರವಸೆ ಸಿಗದ ಹಿನ್ನೆಲೆಯಲ್ಲಿ ಬಸವರಾಜ್‌ ಬೊಮ್ಮಯಿ ಮೂಲಕ ಬಿ.ಜೆ.ಪಿ. ಸೇರಿ ಕುಮಟಾ ಕ್ಷೇತ್ರದ ಬಿ.ಜೆ.ಪಿ. ಟಿಕೇಟ್‌ ಅಥವಾ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿ.ಜೆ.ಪಿ. ಅಭ್ಯರ್ಥಿಯಾಗಲು ಸಿದ್ಧತೆ ನಡೆಸಿ ಬಿ.ಜೆ.ಪಿ. ಸೇರುತ್ತಿದ್ದಾರೆ ಎನ್ನುವುದು ಬಹಿರಂಗ ಗುಟ್ಟು.

ಈ ವಿದ್ಯಮಾನಕ್ಕೆ ತೆರೆಮರೆಯಲ್ಲಿ ಪ್ರಯತ್ನಿಸಿ ರಾಜ್ಯ ವಿಧಾನಸಭೆಗೆ ಕುಮಟಾ ಅಥವಾ ಶಿರಸಿ ಕ್ಷೇತ್ರದಿಂದ ಆಯ್ಕೆ ಬಯಸಿರುವ ಸಂಸದ ಅನಂತಕುಮಾರ ಹೆಗಡೆ ಶಶಿಭೂಷಣರ ನೆರವಿನಿಂದ ರಾಜ್ಯ ವಿಧಾನಸಭಾ ಅಧ್ಯಕ್ಷ ಕಾಗೇರಿ ವಿಶ್ವೇಶ್ವರ ಹೆಗಡೆಯವರ ವಿರುದ್ಧ ಸಮರಕ್ಕೆ ಸಿದ್ಧರಾಗಿದ್ದಾರೆ ಎನ್ನಲಾಗುತ್ತಿದೆ.

ಈ ವಿದ್ಯಮಾನಗಳ ನಡುವೆ ಕೆ.ಪಿ.ಸಿ.ಸಿ. ರಾಜ್ಯ ಕಾರ್ಯದರ್ಶಿ ಭೀಮಣ್ಣ ನಾಯ್ಕರಿಗೆ ಟಾಂಗ್‌ ಕೊಡಲು ಪ್ರಯತ್ನಿಸುತಿದ್ದ ನಿವೇದಿತ್‌ ಆಳ್ವ ಶಿರಸಿ ಸಹವಾಸ ಬೇಡ ಎಂದು ಕುಮಟಾ ಕ್ಷೇತ್ರದತ್ತ ದೃಷ್ಟಿ ನೆಟ್ಟಿದ್ದಾರೆ ಎನ್ನುವುದು ಹೊಸ ವಿದ್ಯಮಾನ.

ಶಿರಸಿಯ ಉಪೇಂದ್ರ ಪೈ ಜಾ ದಳದಿಂದ,ಬಿ.ಜೆ.ಪಿ.ಯಿಂದ ಕಾಗೇರಿ ಅಥವಾ ಕೆ.ಜಿ. ನಾಯ್ಕ ಹಣಜಿಬೈಲ್‌, ಇವರಿಗೆ ಎದುರಾಗಿ ಕಾಂಗ್ರೆಸ್‌ ನಿಂದ ಭೀಮಣ್ಣ ನಾಯ್ಕ ಅಥವಾ ವೆಂಕಟೇಶ್‌ ಹೆಗಡೆ ಎನ್ನುವ ಗಾಳಿಸುದ್ದಿಗಳ ನಡುವೆ ಹೋಟೆಲ್‌ ಉದ್ಘಾಟನೆ, ಪುತ್ರನ ಮದುವೆ ಅದ್ಧೂರಿ ಸಮಾರಂಭಗಳಿಂದ ಜನರ ಪ್ರೀತಿ ಗಳಿಸಿರುವ ಭೀಮಣ್ಣ ನಾಯ್ಕ ಈ ಬಾರಿ ನಿರ್ಣಾಯಕ ಹೋರಾಟ ಎಂದು ತೊಡೆ ತಟ್ಟಿದ್ದಾರಂತೆ! ಈ ವಿದ್ಯಮಾನಗಳ ಹಿನ್ನೆಲೆಯಲ್ಲಿ ರಾಜಧಾನಿಯಿಂದ ಬಹುದೂರದ ಶಿರಸಿ-ಸಿದ್ಧಾಪುರಗಳು ಈ ಬಾರಿ ರಾಜ್ಯ-ರಾಷ್ಟ್ರ ನಾಯಕರ ಗಮನ ಸೆಳೆದಿವೆ. ಆಡಳಿತ ವಿರೋಧಿ ಅಲೆಯ ಬಿ.ಜೆ.ಪಿ.ಗೆ ಜೆ.ಡಿ.ಎಸ್.‌ ಹೊಡೆತಕೊಡುವುದರಿಂದ ಕಾಂಗ್ರೆಸ್‌ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವುದಂತೂ ಸತ್ಯ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *