ಕೋಲಶಿರ್ಸಿ ಮಾರಿಕಾಂಬಾದೇವಿಜಾತ್ರೆ..೨೦೦ ವರ್ಷಗಳ ಚರಿತ್ರೆ!

ಕೋಲಶಿರ್ಸಿ… ಹಲವು ವೈಶಿಷ್ಟ್ಯಗಳ ಗ್ರಾಮ. ಈ ಗ್ರಾಮದಲ್ಲಿ ಹೊಟ್ಟ್‌ ಕೆರೆ,ಹೊಸಕೆರೆ, ದೇವರ ಕೆರೆಗಳೆಂಬ ಮೂರು ಕೆರೆಗಳಿವೆ. ಸರಿಸುಮಾರು ೬ ನೂರು ಮನೆಗಳಲ್ಲಿ ಬಹುಪಾಲು ಹಳೆಪೈಕ,ದೀವರ ಮನೆಗಳು. ಒಂದು ಕುಟುಂಬ ಮಾತ್ರ ಹವ್ಯಕರದ್ದು,ಕೆಲವು ಕುಟುಂಬಗಳು ಲಿಂಗಾಯತ ಗೌಡರು ಮತ್ತು ಶೆಟ್ಟರಿಗೆ ಸೇರಿವೆ. ಒಂದು ಬಡಗಿ ಕುಟುಂಬ. ಇದೇ ಬಡಗಿ ಕುಟುಂಬ ಬಹುಸಂಖ್ಯಾತ ನಾಮಧಾರಿ ದೀವರ ಕೋಲಶಿರ್ಸಿ ಗ್ರಾಮದ ಮಾರಿಕಾಂಬಾ ದೇವಿ ಪೂಜಿಸುವ ಕುಟುಂಬ. ಇವರಂತೇ ಏಕೈಕ ಕುಟುಂಬವಾಗಿರುವ ಗಣಪತಿ ಹೆಗಡೆಯವರ ಕುಟುಂಬ ಗ್ರಾಮದ ಧಾರ್ಮಿಕ ಕೆಲಸಗಳಿಗೆ ಪೌರೋಹಿತ್ಯ ವಹಿಸುವುದು.

ಆದಿ ಯೋಧರು, ಹಳೆಪೈಕ ಪರಾಕ್ರಮಿ ಸೈನಿಕರ ಊರಾ ಗಿದ್ದರಿಂದ ಕೋಲಶಿರ್ಸಿ ಎಂದರೆ ಅನ್ಯರಿಗೆ ತುಸು ಆತಂಕ, ಅನುಮಾನ ಆದರೆ ಊರೊಳಗೆ, ನೆರೆಹೊರೆಗೆ ಕೋಲಶಿರ್ಸಿಯೆಂದರೆ ನಿರುಪದ್ರವಿಗಳ ಊರು.ಸ್ನೇಹ-ಸಹಬಾಳ್ವೆ,ಸೌಹಾರ್ದತೆ ಇಲ್ಲಿಯ ಉಸಿರು.

ಇಂತಿಪ್ಪ ಕೋಲಶಿರ್ಸಿಯಲ್ಲಿ ಹೊಳೆಹಬ್ಬವಾಗಲಿ,ಮಾರಿಜಾತ್ರೆಯಾಗಲಿ, ಆರಿದ್ರಹಬ್ಬವಾಗಲಿ ಎಲ್ಲವೂ ವಿಶೇಷವೇ. ವಾರ್ಷಿಕವಾಗಿ ಆಚರಿಸುವ ಕುಮಾರರಾಮನ ಆರಾಧನೆ ಹನಿಹಬ್ಬ ಅಥವಾ ಆರಿದ್ರಮಳೆ ಹಬ್ಬ, ವಾರ್ಷಿಕ ಚೌತಿ,ಗೌರಿ-ಗಣೇಶ ಹಬ್ಬ ಐದು ವರ್ಷಕ್ಕೋ ಆರೇಳು ವರ್ಷಗಳಿಗೋ ಒಮ್ಮೆ ಬರುವ ಹೊಳೆಹಬ್ಬ, ಮಾರಿಕಾಂಬಾ ದೇವಿ ಜಾತ್ರೆ ಎಲ್ಲಾ ಸಂದರ್ಭಗಳೂ ಸಡಗರದ ಕೂಟಗಳೇ.

ಕೋಲಶಿರ್ಸಿಯಲ್ಲಿ ಮಾರಿಕಾಂಬಾ ದೇವಿ ಆಗಮನ, ಮಾರಿಕಾಂಬಾ ದೇವಿ ಜಾತ್ರೆಗಳಿಗೆಲ್ಲಾ ಸರಿಸುಮಾರು ೨೦೦ ವರ್ಷಗಳ ಭವ್ಯ ಚರಿತ್ರೆಯಿದೆ ಎಂದರೆ ಆಶ್ಚರ್ಯ ಪಡುವಂಥದ್ದೇನಿಲ್ಲ. ಎರಡು ಶತಮಾನಗಳ ಹಿಂದೆ ಅಂದರೆ ಸುಮಾರು ಎಂಟ್ಹತ್ತು ತಲೆಮಾರುಗಳ ಹಿಂದೆ ಆಗಿನ ಗಾಡಿ ಮಾರಿ ಅಥವಾ ಗಡಿಮಾರಿಯಂತೆ ಕೋಲಶಿರ್ಸಿಗೆ ಬಂದಿಳಿದ ಮಾರಿಯನ್ನು ಹೆಗ್ಗರಣೆ ಕಡೆಯಿಂದ ಸಿದ್ಧಾಪುರ ಕಡೆಗೆ ಎಳೆದು ತರುತ್ತಿರಲಾಗಿ ಕೋಲಶಿರ್ಸಿ ಬಳಿ ಬಂದಾಗ ಮುಂಜಾನೆ ಬೆಳಗಾಗಿಅಲ್ಲಿ ಬಿಟ್ಟುಹೋದ ಮಾರಿ ಮುಂದೆ ಮಾರಿಕಾಂಬೆಯಾದ ಬಗ್ಗೆ ವಿಶಿಷ್ಟ ಕತೆಯಿದೆ.

ಪರ ಊರಿನಿಂದ ಬಂದ ಮಾರಿ ಮರವೊಂದರ ಕಟ್ಟೆಯ ಮೇಲೆ ಪೂಜಿಸಲ್ಪಡುತಿದ್ದಾಗ ಗ್ರಾಮದ ಬಾಲಕಿಯ ಮೇಲೆ ಹೇಳಿಕೆಯಾಗಿ ಆಹ್ವಾಹನೆಯಾದ ಮಾರಿ ತನಗೆ ಇದೇ ಊರಲ್ಲಿ ಒಂದು ದೇವಸ್ಥಾ ನವಾಗಬೇಕು, ಇಲ್ಲಿಯೇ ಜಾತ್ರೆ ಮಾಡಬೇಕು ಎಂದು ಹೇಳಿಕೆ ಮಾಡಿಸಿತಂತೆ. ಈ ಘಟನೆ ನಂತರ ಗ್ರಾಮಸ್ಥರೆಲ್ಲಾ ಸೇರಿ ಇಲ್ಲೊಂದು ಪುಟ್ಟ ದೇ ವಾಲಯ ಮಾಡುವುದು ನಂತರ ಜಾತ್ರೆ ಮಾಡಬೇಕೆಂದು ನಿರ್ಣಯಿಸಿದರಂತೆ. ಈ ತೀರ್ಮಾನದ ನಂತರ ಜಾತ್ರೆಗೆ ರಥ ನಿರ್ಮಿಸಲು ಕುನ್ನಳ್ಳಿ ಅಥವಾ ಕುನ್ಹಳ್ಳಿ ಬಳಿ ವಾಟೆ ಮರ ಕಡಿದು ಉರುಳಿಸಿದಾಗ ಅಂದಿನ ಬ್ರಿಟಿಷ್‌ ಸರ್ಕಾರಕ್ಕೆ ಅನಾಮಧೇಯರ ದೂರು ಹೋಗಿ ಮರ ಕಡಿದ ಗ್ರಾಮದ ಕೆಲವರ ಮೇಲೆ ದೂರು ದಾಖಲಾಗಿ ಹೊನ್ನಾವರ ನ್ಯಾಯಾಲಯದ ಮೆಟ್ಟಿಲೇರಿತಂತೆ ( ಈ ಬಗ್ಗೆ ಲಿಖಿ ತ ದಾಖಲೆ ಲಭ್ಯವಿದೆ)

ಈ ಪ್ರಕರಣದ ನಂತರ ಹೊನ್ನಾವರ ನ್ಯಾಯಾಲಯದಲ್ಲಿ ವಾದಿಸಲು ಸಾಧ್ಯವಿಲ್ಲದ ಗ್ರಾಮದ ಜನಸಾಮಾನ್ಯರ ಪರವಾಗಿ ಊರಿನ ಗೌಡರು ತಿಂಗಳುಗಟ್ಟಲೆ ಹೊನ್ನಾವರದಲ್ಲಿ ಉಳಿದು ವಕೀಲರ ಮೂಲಕ ಪ್ರಕರಣ ನಡೆಸಿದರು. ನಂತರ ಗ್ರಾಮಸ್ಥರೆಲ್ಲಾ ಸಂಘಟಿತರಾಗಿ ಮಾರಿಕಾಂಬಾ ದೇವಿಗೆ ದೇವಾಲಯ ನಿರ್ಮಾಣ, ಜಾತ್ರೆ ಆಚರಣೆ ಮುಂದುವರಿಸಿದರು.

ಗ್ರಾಮದ ರೋಗ ರುಜಿನಗಳು,ಸಂಕಷ್ಟಗಳಿಂದ ಪಾರು ಮಾಡೆಂದು ಬೇಡಿಕೆ ಇಟ್ಟು ಆರಾಧಿಸುವ ಮಾರಿಕಾಂಬೆಗೆ ಈಗ ಸುಸಜ್ಜಿತ ದೇವಾಲಯ ನಿರ್ಮಾಣವಾಗುತ್ತಿದೆ. ಕಳೆದ ನೂರಾರು ವರ್ಷಗಳಿಂದಲೂ ಕೆಲವು ಬಾರಿ ಕೆಲವು ವರ್ಷಗಳ ಅಂತರದ ನಡುವೆ, ನಡುನಡುವೆ ನಿಯಮಿತವಾಗಿ ಐದು ಅಥವಾ ಏಳು ವರ್ಗಳಿಗೊಮ್ಮೆಕೋಲಶಿರ್ಸಿ ಮಾರಿಕಾಂಬಾ ದೇವಿ ಜಾತ್ರೆ ನಡೆಸಿದ ಬಗ್ಗೆ ದಾಖಲೆಗಳಿವೆ.

ಈ ವರ್ಷದ ಜಾತ್ರೆ ಈ ಹಿಂದೇ ೭ ವರ್ಷಗಳಿಗೆ ನಡೆಯಬೇಕಿದ್ದರೂ ಕೋವಿಡ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ೯ ನೇ ವರ್ಷಕ್ಕೆ ನೆರವೇರುತ್ತಿದೆ. ೯ ವರ್ಷಗಳ ನಂತರ ನಡೆಯುವ ಇಲ್ಲಿಯ ಮಾರಿಕಾಂಬಾ ದೇವಿ ಜಾತ್ರೆಗೆ ಊರಿಗೆ ಊರೇ ಸುಣ್ಣ-ಬಣ್ಣ ಬಳಿದುಕೊಂಡು. ಚಪ್ಪರ, ಚಿತ್ತಾರಗಳಿಂದ ಕಂಗೊಳಿಸುತ್ತಿದೆ.ಫೆಬ್ರವರಿ೨೧ ರಿಂದ ೨೮ ರ ವರೆಗೆ ೨೦೨೩ ರ ಮಾರಿಕಾಂಬಾ ದೇವಿ ಜಾತ್ರೆ ಒಂದು ವಾರಗಳ ಕಾಲ ನಡೆಯಲಿದೆ.

(- ಕನ್ನೇಶ್‌ ಕೋಲಶಿರ್ಸಿ , ಸಿದ್ಧಾಪುರ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *