ಫೆ.೧೮ ತರಳಿ,೨೫ ಹಿರೇಹದ್ದಗಳಲ್ಲಿ ಕಾರ್ಯಕ್ರಮಗಳು

ಸಿದ್ದಾಪುರ: ತಾಲೂಕಿನ ಶ್ರೀ ಸಂಸ್ಥಾನ ತರಳೀಮಠದಲ್ಲಿ ಫೆಬ್ರವರಿ 18 ರ ಮಹಾಶಿವರಾತ್ರಿಯಂದು 35ನೇ ವರ್ಷದ 1008 ಶ್ರೀ ಸತ್ಯನಾರಾಯಣ ವ್ರತ ಕಲಶ ಪೂಜೆ ನಡೆಯಲಿದೆ ಎಂದು ವ್ರತ ಕಮಿಟಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬೆಳಿಗ್ಗೆ 8 ರಿಂದ 10 ಗಂಟೆವರೆಗೆ ಕಳಸಗಳಲ್ಲಿ ಜಲ ತುಂಬುವುದು, 10 ಗಂಟೆಯಿಂದ ಪೂಜಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಕಥಾ ನಿರೂಪಣೆ, ಮಧ್ಯಾಹ್ನ 12=30 ಕ್ಕೆ ಧರ್ಮಸಭೆ ಮತ್ತು ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ, ಮಧ್ಯಾಹ್ನ 2=30 ಕ್ಕೆ ಅನ್ನ ಸಂತರ್ಪಣೆ, ಸಂಜೆ 6=30 ರಿಂದ ಶಿವರಾತ್ರಿ ಪ್ರಯುಕ್ತ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 9=30 ಕ್ಕೆ ಧಾರ್ಮಿಕ ಜಾಗರಣೆ ನಡೆಯಲಿದೆ . ತರಳಿ ಮಠದ ಲ್ಲಿ ನಡೆಯುತ್ತಿರುವ ನೂತನ ದೇವಸ್ಥಾನಗಳ ಕಟ್ಟಡ ಕಾಮಗಾರಿ ಗಳಿಗೆ ಭಕ್ತಾಧಿಗಳು ತನು, ಮನ, ಧನ ಸಹಕಾರ ನೀಡುವಂತೆ ವಿನಂತಿಸಿದ್ದಾರೆ.

O
I

ಸಿದ್ದಾಪುರ: ಶಾಸ್ತ್ರೀಯ ಸಂಗೀತದ ಅಧ್ಯಯನ ಮತ್ತು ಅಧ್ಯಾಪನಕ್ಕಾಗಿ ಆರಂಭಗೊಂಡ ಗುರುಕುಲದ ನೂತನ ಕಟ್ಟಡದ ಉದ್ಘಾಟನೆ ಮತ್ತು ಪರಂಪರ ಸಂಗೀತ ಕಾರ್ಯಕ್ರಮ ಫೆ. 25ರಂದು ಆಯೊಜಿಸಲಾಗಿದೆ ಎಂದು ಆಧಾರ ಷಡ್ಜದ ಮುಖ್ಯಸ್ಥ ವಿನಾಯಕ ಹೆಗಡೆ ಹಿರೇಹದ್ದ ತಿಳಿಸಿದರು.


ಪಟ್ಟಣದ ರಾಘವೇಂದ್ರ ಮಠದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಂದು ಪಟ್ಟಣಗಳಲ್ಲಿ ಸಂಗೀತ ಎಂದರೆ ಕೇವಲ ರಿಯಾಲಿಟಿ ಶೋಗಳಿಗೆ ಸೀಮಿತವಾಗಿದೆ. ಆದರೆ ಕ್ರಮಬದ್ಧ ಶಾಸ್ತ್ರೀಯ ಸಂಗೀತವನ್ನು ಅಧ್ಯಯನ ಮಾಡಲು ಇಚ್ಚಿಸುವ ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ 14 ವರ್ಷಗಳ ಹಿಂದೆ ಆಧಾರ ಷಡ್ಜ ಸಂಸ್ಥೆಯನ್ನು ಪ್ರಾರಂಭಿಸಲಾಯಿತು. ಈವರೆಗೆ 20 ರಿಂದ 25 ವಿದ್ಯಾರ್ಥಿಗಳು ಶಾಸ್ತ್ರೀಯ ಸಂಗೀತವನ್ನು ಅಧ್ಯಯನ ನಡೆಸಿದ್ದಾರೆ. ಪ್ರಸ್ತುತ 10-15 ವಿದ್ಯಾರ್ಥಿಗಳು ಸಂಗೀತ ಅಧ್ಯಯನ ನಡೆಸುತ್ತಿದ್ದಾರೆ. ಸಂಗೀತದ ಅಧ್ಯಯನ ಮತ್ತು ಅಧ್ಯಾಪನಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಸಂಗೀತ ಗುರುಕುಲಕ್ಕೆ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಫೆ. 25ರಂದು ಸಂಜೆ 4 ಗಂಟೆಗೆ ಖ್ಯಾತ ಗಾಯಕರಾದ ಪಂಡಿತ್ ಗಣಪತಿ ಭಟ್ ಹಾಸಣಗಿ ಗುರುಕುಲದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಜನ ಮಾಧ್ಯಮ ಪತ್ರಿಕೆಯ ಸಂಪಾದಕ ಅಶೋಕ ಹಾಸ್ಯಗಾರ್, ಶಿರಸಿಯ ಪ್ರಗತಿ ಟ್ರೇಡರ್ಸ್ ನ ಕೆ ಬಿ ಲೋಕೇಶ ಹೆಗಡೆ, ಹೊನ್ನಾವರದ ಖ್ಯಾತ ವೈದ್ಯರಾದ ಡಾ. ಯುವರಾಜ್ ಆರ್ ಪಿ, ಹೆಗ್ಗರಣೆಯ ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷ ಎನ್ ಆರ್ ಭಟ್, ಸಮಾಜದ ಹಿರಿಯರಾದ ಎಂ ಎಸ್ ಹೆಗಡೆ ಕಮಲಕೊಪ್ಪ, ವಿ ಎಸ್ ಹೆಗಡೆ ಹಿರೇಹೆದ್ದ ಭಾಗವಹಿಸಲಿದ್ದಾರೆ. ನಂತರ ನಡೆಯುವ ಪರಂಪರಾ ಸಂಗೀತ ಕಾರ್ಯಕ್ರಮದಲ್ಲಿ ಪಂಡಿತ್ ಗಣಪತಿ ಭಟ್ ಹಾಸಣಗಿ, ವಿನಾಯಕ ಹೆಗಡೆ ಹಿರೇಹದ್ದ ಗಾಯಕರಾಗಿ ಪಂಡಿತ್ ಗೋಪಾಲಕೃಷ್ಣ ಹೆಗಡೆ ಕಲ್ಭಾಗ ತಬಲವಾದಕರಾಗಿ, ಸಂವಾದಿನಿಯಲ್ಲಿ ಭರತ್ ಹೆಗಡೆ ಹೆಬ್ಬಲಸು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಂಗೀತ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು.
ಸುದ್ದಿಗೋಷ್ಠಿಯಲ್ಲಿ ಶಶಾಂಕ್ ಮಡಿವಾಳ, ಅನಿಲ್ ಹೆಗಡೆ ತೆಂಗಾರುಮನೆ, ಸುಧೀರ್ ಬೇಂಗ್ರೆ ಇದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *