ಎಸ್.ಎಲ್.‌ ಘೊಟ್ನೇಕರ್‌ ಜೆ.ಡಿ.ಎಸ್.‌ ಅಭ್ಯರ್ಥಿ

ಜೆಡಿಎಸ್‌ ಸೇರಿದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಾಜಿ ಎಂಎಲ್‌ಸಿ ಘೋಟ್ನೇಕರ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಮಾತ್ರ ಇದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು ಭಾನುವಾರ ಸೇರ್ಪಡೆಗೊಂಡಿದ್ದಾರೆ.

JDS

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಮಾತ್ರ ಇದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು ಭಾನುವಾರ ಸೇರ್ಪಡೆಗೊಂಡಿದ್ದಾರೆ.

ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಉತ್ತರ ಕನ್ನಡ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ್ ಹಾಗೂ ಕೋಲಾರದ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಮತ್ತು ಕೋಚಿಮುಲ್ ನಿರ್ದೇಶಕ ವಡಗೂರು ಹರೀಶ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಈ ಮೂವರಿಗೆ ಪಕ್ಷದ ಧ್ವಜ ನೀಡಿ, ಜೆಡಿಎಸ್ ಶಾಲು ಹೊದಿಸಿ ಬರ ಮಾಡಿಕೊಂಡರು.

ಎಸ್.ಎಲ್. ಘೋಟ್ನೇಕರ್ ಹಾಗೂ ವಡಗೂರು ಹರೀಶ್‍ಗೌಡ ಕಾಂಗ್ರೆಸ್ ತೊರೆದು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್‌ಗೆ ಸೇರ್ಪಡೆಯಾದರೆ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬರದಿದ್ದರೆ ಕುಮಾರಸ್ವಾಮಿ ಅವರು ಪಕ್ಷ ವಿಸರ್ಜನೆ ಮಾಡುತ್ತಾರೆ ಎಂದು ಹೇಳಿಕೊಂಡು ಕಾಂಗ್ರೆಸ್ ಅಧ್ಯಕ್ಷರು ತಿರುಗಾಡುತ್ತಿದ್ದಾರೆ. ಬಹುಮತ ಪಡೆದು ಅಧಿಕಾರಕ್ಕೆ ಬಂದು ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಪಕ್ಷ ವಿಸರ್ಜನೆ ಮಾಡುವುದಾಗಿ ಸವಾಲು ಹಾಕಿದ್ದೇನೆ. ಅದು ಕಾಂಗ್ರೆಸ್ ಅಧ್ಯಕ್ಷರಿಗೆ ಸರಿಯಾಗಿ ಅರ್ಥ ಆಗಿಲ್ಲ ಎಂದು ಕಾಣುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕುರಿತು ಲೇವಡಿ ಮಾಡಿದರು.

ಕೆಲವರು ನಮ್ಮ ಪಕ್ಷವನ್ನು ಲಘುವಾಗಿ ಪರಿಗಣಿಸಿದ್ದಾರೆ. ಅವರಿಗೆ ಚುನಾವಣೆಯಲ್ಲಿ ಇದಕ್ಕೆ ಉತ್ತರ ಸಿಗಲಿದೆ. ನಾವು ಪಂಚರತ್ನ ಕಾರ್ಯಕ್ರಮವನ್ನು ಸಖಾಸುಮ್ಮನೆ ಮಾಡುತ್ತಿರುವುದಲ್ಲ. ರಾಜ್ಯದ ಮಹಿಳೆಯರು, ಬಡವರು, ರೈತರ ಅವಶ್ಯಕತೆಗೆ ಬೇಕಾದ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ ಎಂದು ಹೇಳಿದರು.

ಈಗಾಗಲೇ 70 ಕ್ಷೇತ್ರಗಳಲ್ಲಿ ಪಂಚರತ್ನ ಯಾತ್ರೆ ನಡೆಸಿದ್ದೇವೆ. ಉತ್ತರ ಕರ್ನಾಟಕದಲ್ಲೂ ಜನ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು. ಎಲ್ಲೆಡೆ ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

2023ಕ್ಕೆ ಘೊಟ್ನೇಕರ್ ಮತ್ತು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಆಯ್ಕೆ ಆಗಿ ವಿಧಾನಸಭೆಗೆ ಬರುತ್ತಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಸ್ಥಾನ ಗಳನ್ನು ಗೆಲ್ಲುವ ಅವಕಾಶ ಜೆಡಿಎಸ್‌ಗೆ ಇದೆ. ಬೆಳಗಾವಿ ಜಿಲ್ಲೆಯಲ್ಲಿ ಆರೇಳು ಸ್ಥಾನ ಗೆಲ್ಲುವ ವಾತಾವರಣ ಇದೆ ಎಂದು ಅವರು ಹೇಳಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *