ಆಧಾರಷಡ್ಜ ನೂತನ ಕಟ್ಟಡ ಉದ್ಘಾಟನೆ

ಸಿದ್ದಾಪುರ:ತಾಲೂಕಿನ ಹಿರೇಹದ್ದದಲ್ಲಿ ಆಧಾರ ಷಡ್ಜ ಶಾಸ್ತ್ರೀಯ ಸಂಗೀತದ ಅಧ್ಯಯನ ಮತ್ತು ಅಧ್ಯಾಪನಕ್ಕಾಗಿ ಆರಂಭಿಸಿದ ಗುರುಕುಲದ ನೂತನ ಕಟ್ಟಡದ ಉದ್ಘಾಟನೆ ಮತ್ತು ಪರಂಪರಾ ಸಂಗೀತ ಕಾರ್ಯಕ್ರವನ್ನು ಖ್ಯಾತ ಗಾಯಕ ಪಂಡಿತ್ ಗಣಪತಿ ಭಟ್ ಹಾಸಣಗಿ ಉದ್ಘಾಟಿಸಿದರು ನಂತರ ಪ್ರಸ್ತುತಗೊಂಡ ಸಂಗೀತ ಕಾರ್ಯಕ್ರಮ ಕಲಾಸಕ್ತರ ಮೆಚ್ಚುಗೆಗಳಿಸಿತು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖ್ಯಾತ ಗಾಯಕ ಪಂಡಿತ್ ಗಣಪತಿ ಭಟ್ ಹಾಸಣಗಿ ಮಾತನಾಡಿ ಗುರುಶಿಷ್ಯರ ಪರಂಪರೆ ಬೆಳೆಯಬೇಕು. ಅಧ್ಯಯನ ಹಾಗೂ ಅಧ್ಯಾಪನ ಒಟ್ಟೊಟ್ಟಿಗೆ ನಡೆಯಬೇಕು. ನಾನು ಹಿಂದೆ ಮಾಡಿರುವ ಅಧ್ಯಯನ ಹಾಗೂ ಅಧ್ಯಾಪನದಂತೆ ವಿನಾಯಕ ಹೆಗಡೆ ಹಿರೇಹದ್ದ ಮಾಡುತ್ತಿರುವುದು ಶ್ಲಾಘನೀಯ. ಯಾವುದೇ ಕಲೆಗೆ ಪ್ರೋತ್ಸಾಹ ನೀಡುವವರು ಬೇಕು. ಪ್ರೋತ್ಸಾಹ ಇದ್ದಾಗ ಮಾತ್ರ ಕಲೆ ಅರಳುತ್ತದೆ.ಕಲಾವಿದ ತಯಾರಾಗುವುದು ಬೇರೆ, ಹೆಸರುಗಳಿಸುವುದು ಬೇರೆ. ಕಲಾವಿದರಿಗೆ ಅವಕಾಶಗಳು ಸಿಗಬೇಕು.ಗುರುಕುಲದ ಮೂಲಕ ಕಲಿಸುವುದರಿಂದ ಕಲಿಸುವವನಿಗೂ ಅಧ್ಯಯನವಾಗುತ್ತದೆ. ಗುರುಕುಲ ಮಕ್ಕಳಲ್ಲಿ ಕಲಿಯುವ ಆಸಕ್ತಿಯನ್ನು ಮೂಡಿಸಲಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಸ್.ಹೆಗಡೆ ಕವಲಕೊಪ್ಪ ವಹಿಸಿದ್ದರು.

ಪತ್ರಕರ್ತ ಅಶೋಕ ಹಾಸ್ಯಗಾರ, ಶಿರಸಿಯ ಪ್ರಗತಿ ಟ್ರೇಡರ್ಸ್ನ ಕೆ. ಬಿ. ಲೋಕೇಶ ಹೆಗಡೆ, ಡಾ.ಯುವರಾಜ್ ಆರ್. ಪಿ. ಹೊನ್ನಾವರ, ಹೆಗ್ಗರಣಿ ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ಎನ್.ಆರ್.ಭಟ್ಟ, ಹೆಗ್ಗರಣಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಲ್.ಭಟ್ಟ ಉಂಚಳ್ಳಿ ಉಪಸ್ಥಿತರಿದರು.
ಇದೇ ಸಂದರ್ಭದಲ್ಲಿ ವಿನಾಯಕ ಹೆಗಡೆ ಹಿರೇಹದ್ದ ಹಾಗೂ ರಂಜನಾ ಹೆಗಡೆ ದಂಪತಿ ಅವರು ಪಂ.ಗಣಪತಿ ಭಟ್ ಅವರಿಗೆ ಗುರುಗೌರವ ಸಲ್ಲಿಸಿದರು.
ಎಸ್.ವಿ.ಹೆಗಡೆ ಹಿರೇಹದ್ದ ಸ್ವಾಗಿತಿಸಿದರು.ಆಧಾರ ಷಡ್ಜದ ಮುಖ್ಯಸ್ಥ ವಿನಾಯಕ ಹೆಗಡೆ ಹಿರೇಹದ್ದ ಪ್ರಾಸ್ತಾವಿಕ ಮಾತನಾಡಿದರು.ಗಿರಿಧರ ಕಬ್ನಳ್ಳಿ ನಿರ್ವಹಿಸಿದರು.
ನಂತರ ನಡೆದ ಪರಂಪರಾ ಸಂಗೀತ ಕಾರ್ಯಕ್ರಮದಲ್ಲಿ ಪಂಡಿತ್ ಗಣಪತಿ ಭಟ್ ಹಾಸಣಗಿ, ವಿನಾಯಕ ಹೆಗಡೆ ಹಿರೇಹದ್ದ ಇವರ ಗಾಯನ ಸಂಗೀತಾಸಕ್ತರಿಗೆ ರಸದೌತಣ ನೀಡಿತು.ತಬಲಾದಲ್ಲಿ ಪಂಡಿತ್ ಗೋಪಾಲಕೃಷ್ಣ ಹೆಗಡೆ, ಸಂವಾದಿನಿಯಲ್ಲಿ ಸತೀಶ ಭಟ್ಟ ಸಹಕರಿಸಿದರು. ಇದಕ್ಕೂ ಮೊದಲು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಯುವ ಪ್ರತಿಭೆಗಳಾದ ಆರ್ಯ ಅವರ ಗಾಯನ, ಅನೀಶ್ ಹೆಗಡೆ ಅವರ ತಬಲಾ ಹಾಗೂ ಚಂದನ ಹೆಗಡೆ ಅವರ ಹಾರ್ಮೋನಿಯಂ ಸಾಥ್ ಮೆಚ್ಚುಗೆಗಳಿಸಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *