ಮಹಿಳಾ ಪತಂಜಲಿ ಯೋಗ ಸಮಿತಿಯ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ………ಹೆಚ್ಚು ಹೆಚ್ಚು ಪುಸ್ತಕವನ್ನು ಓದಿ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ..ನ್ಯಾಯಾಧೀಶ ಶ್ರೀ ತಿಮ್ಮಯ್ಯ ಜಿ.

ಸಿದ್ದಾಪುರ .ಮಹಿಳೆ ಪುರುಷ ಎಂಬ ಯಾವುದೇ ಭೇದವಿಲ್ಲ ಸಂವಿಧಾನದಲ್ಲಿ ಎಲ್ಲರಿಗೂ ಸಮಾನವಾದ ಕಾನೂನುಗಳಿವೆ.ಮಹಿಳೆಯರಿಗೂ ಆಸ್ತಿ ಹಕ್ಕನ್ನು ಸಂವಿಧಾನ ನೀಡಿದೆಎಂದು ಸಿದ್ದಾಪುರದ ಸಿವಿಲ್ ಜಡ್ಜ್ ಶ್ರೀ ತಿಮ್ಮಯ್ಯ ಜಿ ಹೇಳಿದರು. ಅವರು ಸಿದ್ದಾಪುರದ ಎಪಿಎಂಸಿಯಲ್ಲಿರುವ ಟಿ ಎಮ್ ಎಸ್ ಸಭಾಭವನದಲ್ಲಿ ಮೊದಲ ಬಾರಿ ನಡೆದ ಪತಂಜಲಿ ಯೋಗ ಸಮಿತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಹಿಳಾ ಕಾನೂನು ಅರಿವು ಕುರಿತು ಮಾತನಾಡಿದರು.

ತಾಯಿ ಸಂಸ್ಕಾರವಂತಳಾಗಿದ್ದರೆ ಮನೆಯ ಮಕ್ಕಳು ಸದಸ್ಯರೆಲ್ಲರೂ ಸಂಸ್ಕಾರವನ್ನು ಕಲಿತು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಾರೆ ಎಂದು ಹೇಳಿದರು. ಇನ್ನೋರ್ವ ಅತಿಥಿ ಪ್ರಜಾಪಿತ ಈಶ್ವರಿ ವಿದ್ಯಾಲಯದ ಬಿ.ಕೆ. ದೇವಕಿ ಅಕ್ಕ ಮಾತನಾಡಿ ಮಹಿಳೆ ಮನೆಯಲ್ಲಿ ಲಕ್ಷ್ಮಿಯಂತಿರಬೇಕು.ಭಾರತೀಯ ಸಂಸ್ಕೃತಿ ಸಂಪ್ರದಾಯವನ್ನು ತಾಯಿಯಾದವಳು ಅನುಸರಿಸಿದರೆ ಮಕ್ಕಳು ಭಾರತೀಯ ನಾರಿಯಾಗಿ ಸುಖ ಸಮೃದ್ಧಿ ಶಾಂತಿ ನೆಮ್ಮದಿ ಕಾಣಬಹುದೆಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಿಳಾಪತಂಜಲಿ ಯೋಗ ಸಮಿತಿಯ ತಾಲೂಕ ಪ್ರಭಾರಿ ಶ ವೀಣಾ ಆನಂದ ಶೇಟ್ ಮಾತನಾಡಿ ಹೆಣ್ಣು ಹೆಣ್ಣನ್ನು ಗೌರವಿಸಬೇಕು.ಹೆಣ್ಣಿಗೆ ಹೆಣ್ಣು ಶತ್ರುವಾಗಬಾರದು.ಕಷ್ಟದಲ್ಲಿರುವವರಿಗೆ ಕೈಲಾದಷ್ಟು ಸಹಾಯವನ್ನು ಮಾಡಿ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು.ಅಷ್ಟಾಂಗ ಯೋಗಭ್ಯಾಸ ಮಾಡಿ ನಿಯಮವನ್ನು ಪಾಲಿಸಿ ಮನೆಯನ್ನು ಸಕರಾತ್ಮಕವಾಗಿ ಮುನ್ನಡೆಸಿ ಮನೆಯನ್ನು ಮಂದಿರವಾಗಿರಿಸಬೇಕೆಂದರು.

ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪತಂಜಲಿ ಯೋಗ ಸಮಿತಿಯ ಜಿಲ್ಲಾ ಪ್ರಭಾರಿ ಶ್ರೀಮತಿ ಚೈತ್ರ ಆರ್ ನಾಯಕ್, ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಮ್. ಹೆಗಡೆ ಬಾಳೆ ಸರ, ಸಿದ್ದಾಪುರ ಲಯನ್ಸ್ ಪಿ.ಡಿ.ಜಿ.ಡಾ- ರವಿ ಹೆಗಡೆ ಹೂವಿನ ಮನೆ, ಪತಂಜಲಿ ತಾಲೂಕ ಪ್ರಭಾರಿ ಮಂಜುನಾಥ್ ನಾಯಕ್ ಮಹಿಳಾ ದಿನಾಚರಣೆ ಕುರಿತು ವಿವರಿಸಿದರು.ಈ ಸಂದರ್ಭದಲ್ಲಿ ಎಲೆಮರೆಕಾಯಿಯಂತಿದ್ದ ಮೂವರು ಮಹಿಳಾ ಸಾಧಕೀಯರನ್ನು ಸನ್ಮಾನಿಸಲಾಯಿತು.ಸಂಗೀತ ಶಿಕ್ಷಕಿ ಶಾಂತ ನೀಲಕಣಿ, ಬಾಣಂತಿ ಮತ್ತು ಮಗುವಿನ ಶುಶ್ರೂಷಕಿ ಶಕುಂತಲಾ ಹೊನ್ನಾವರ, ಹಾಗೂ ಅಂಧ ಮಕ್ಕಳ ಪಾಲನೆ ಶಶಿಕಲಾ ಮಡಿವಾಳ. ಮಂಗಲಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಶೀಲಾ ಕೊಂಡ್ಲಿ ಪ್ರಾರ್ಥಿಸಿದರು. ಸುವರ್ಣ ಹೆಗಡೆ ಸ್ವಾಗತಿಸಿದರು. ಗೀತಾ ಬಿ.ಹೆಗಡೆ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *