ಒಂದು ಡಜನ್‌ ಹಿರಿಯರಿಗೆ ಟಿಕೆಟ್‌ ಇಲ್ಲ! ಕಂಗಾಲಾದರಾ ಕಾಗೇರಿ?

ರಾಜ್ಯ ಬಿ.ಜೆ.ಪಿ.ಯಲ್ಲಿ ಹಲವು ಬದಲಾವಣೆಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪನವರನ್ನು ಸೈಡ್‌ ಲೈನ್‌ ಮಾಡಲಾಗುತ್ತಿದೆ.

ರೈತ ಮುಖಂಡರಾಗಿ ರಾಜ್ಯದಲ್ಲಿ ಬಿ.ಜೆ.ಪಿ. ಬೆಳೆಸಿದ್ದ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ದಿಡೀರ್‌ ಕೆಳಗಿಳಿದಾಗಲೇ ಯಡಿಯೂರಪ್ಪ ಭವಿಷ್ಯ ಸ್ಪಷ್ಟವಿತ್ತು. ಈಗ ಚುನಾವಣಾ ಹೊಸ್ತಿಲಲ್ಲಿ ಯಡಿಯೂರಪ್ಪ ಸೇರಿದಂತೆ ಕೆಲವು ಮಾಜಿ ಮುಖ್ಯಮಂತ್ರಿಗಳು, ಹಿರಿಯ ನಾಯಕರನ್ನು ಹಿಂದಿನ ಸಾಲಿನಲ್ಲಿ ಕೂಡ್ರಿಸಲಾಗಿದೆ. ಹೀಗೆ ದಿಢೀರನೇ ಹಿಂದಿನ ಸಾಲಿಗೆ ಸರಿದ ನಾಯಕರಲ್ಲಿ ಸದಾನಂದ ಗೌಡ,ಜಗದೀಶ್‌ ಶೆಟ್ಟರ್‌, ಸುರೇಶ್‌ ಕುಮಾರ್‌, ವಿಶ್ವೇಶ್ವರ ಹೆಗಡೆ ಕಾಗೇರಿ, ಅನಂತಕುಮಾರ ಹೆಗಡೆ ಸೇರಿದಂತೆ ಕೆಲವು ಪ್ರಮುಖರು ಎನ್ನುವುದು ಗಮನಾರ್ಹ ವಿಷಯ.

ಈ ವಿಚಾರ ಮುಖ್ಯ ಭೂಮಿಕೆಯಲ್ಲೇ ಚರ್ಚೆಯಾಗುತಿದ್ದರೆ ತೆರೆಮರೆಯಲ್ಲಿ ಅಡ್ಡದಾರಿಯ ನಾಯಕ ಸಂತೋಷ ಚಿತಾವಣೆಯಿಂದ ಬಿ.ಜೆ.ಪಿ.ಯ ಹಿರಿಯ ನಾಯಕರು ವಿಶೇಶವಾಗಿ ಬ್ರಾಹ್ಮಣ ಮುಖಂಡರು ಮತ್ತು ಲಿಂಗಾಯತ್‌ ಮುಖಂಡರನ್ನೇ ಗುರಿಯಾಗಿಸಿ ೨೦೨೩ ರ ವಿಧಾನಸಭೆ ಚುನಾವಣೆಗೆ ಹೊಸ ತಂಡ ಕಟ್ಟುವ ತಯಾರಿ ನಡೆದಿದೆ ಎನ್ನುವುದು ಸಧ್ಯದ ವಿಚಾರ.

ಈ ವಿಚಾರದ ಹಿನ್ನೆಲೆಯಲ್ಲಿ ಆರ್. ಎಸ್.ಎಸ್.‌ ಮತ್ತು ಬಿಜೆ.ಪಿ.ಯ ನಿಯಂತ್ರಣ ಮಾಡುವ ಮಲೆನಾಡು, ಕರಾವಳಿಯ ಕುಟಿಲ ಮತಾಂಧರ ತಂಡವೊಂದು ನಾನಾವೇಶದಲ್ಲಿ ಕೆಸರಿನ ರಾಜಕಾರಣ ಮಾಡುತ್ತ ಈ ಬಾರಿ ನೇರ ಅಖಾಡ ಎಂದು ಸಿದ್ಧವಾಗುತ್ತಿದೆಯಂತೆ!

ಈ ಕುಟಿಲ ಶಕುನಿಗಳ ತಂಡದಲ್ಲಿ ಆರ್.‌ ಎಸ್.‌ ಎಸ್.‌ ಪರಿವಾರದ ಹಿನ್ನೆಲೆಯ ಕುಂಡೆ ಬಳಗವಿದ್ದು, ಈ ಬಳಗ ಕುಮಟಾವಿಧಾನಸಭಾ ಕ್ಷೇತ್ರ, ಭಟ್ಕಳ, ಶಿರಸಿ, ಯಲ್ಲಾಪುರಗಳಲ್ಲಿ ತಮ್ಮ ಬಳಗಕ್ಕೇ ಬಿ.ಜೆ.ಪಿ. ಟಿಕೇಟ್‌ ಕೊಡಬೇಕೆಂದು ಪಟ್ಟು ಹಿಡಿದಿದೆಯಂತೆ. ಈ ಬಳಗದ ಪ್ರಮುಖನಾಗಿರುವ ಪತ್ರಿಕೆ ಸಂಪಾದಕನೊಬ್ಬ ಬಿ.ಜೆ.ಪಿ. ಮಾತ್ರವಲ್ಲ ಕಾಂಗ್ರೆಸ್‌ ಟಿಕೇಟುಗಳೂ ನನ್ನ ತೀರ್ಮಾನದಂತೇ ಹಂಚಿಕೆಯಾಗಲಿದ್ದು ಕುಮಟಾದಿಂದ ತನಗೆ ತಪ್ಪಿದರೆ ಶಶಿಭೂಷಣ ಹೆಗಡೆ, ಶಿರಸಿ ಕ್ಷೇತ್ರದ ಟಿಕೇಟ್‌ ತನ್ನ ಮಾವ ತಲೆಮಾಸಿದ ಮಾಜಿ ಪತ್ರಕರ್ತನಾಗಿರುವ ಮತಾಂಧ ಆಶಾಢಭೂತಿಗೆ ತಪ್ಪಿದರೆ ಶಶಿಭೂಷಣ ಹೆಗಡೆಯವರಿಗೆ ನಮ್ಮ ಬಳಗದ ಮೂರು ಜನರಿಗೆ ಟಿಕೇಟ್‌ ಸಂತೋಷದಿಂದಲೇ ಸಿಗಲಿದೆ. ನಮಗೆ ಬೇಕಾದವರಿಗೇ ಕಾಂಗ್ರೆಸ್‌ ಟಿಕೇಟೂ ಸಿಗಲಿದೆ ಎಂದು ಬೈಟಕ್‌ ನಲ್ಲಿ ಬಾಯಿ ಬಿಟ್ಟಿದ್ದಾನಂತೆ!

ಈ ಹೊಸ ವಿದ್ಯಮಾನಗಳ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರ,ಚುನಾವಣಾ ವಿದ್ಯಮಾನಗಳಲ್ಲಿ ಅನಂತಕುಮಾರ ಹೆಗಡೆ, ವಿಶ್ವೇಶ್ವರ ಹೆಗಡೆ, ಸುರೇಶ್‌ ಕುಮಾರ್‌ ಸೇರಿದಂತೆ ಕೆಲವು ಬ್ರಾಹ್ಮಣ ಮುಖಂಡರು ಮತ್ತು ಲಿಂಗಾಯತ್‌ ಮುಖಂಡರನ್ನು ಹೊರಗಿಡಲಾಗಿದೆಯಂತೆ!

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲವು ಸಂಘಿಗಳು ಸ್ವಜನಪಕ್ಷಪಾತದ ಕುಟಿಲ ಬಳಗದ ಕುತಂತ್ರಿಗಳಿಗೆ ನೆರವಾಗಲು ಮೋದಿಯ ಹಿತ್ತಾಳೆ ಕಿವಿಗೂ ಹೂವು ಮುಡಿಸಿದ್ದಾರೆ ಎನ್ನಲಾಗಿದೆ. ಈ ವಿದ್ಯಮಾನಗಳ ಹಿನ್ನೆಲೆಯಲ್ಲಿ ಕಂಗಾಲಾಗಿರುವ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಕಾಗೇರಿ, ಅರಗಜ್ಞಾನೇಂದ್ರ, ಸೇರಿದ ಕೆಲವು ಹಿರಿಯರ ತಂಡ ಬಿ.ಜೆ.ಪಿ.ಯ ಹೊಸ ವರಸೆ ತಮ್ಮ ಬುಡಕ್ಕೆ ಬಿಸಿ ನೀರು ಬಿಡುವ ಸಾಧ್ಯತೆ ಅರಿತು ಟಿಕೇಟ್‌ ಸಂಕಲ್ಪ ಯಾತ್ರೆಯ ಹಿನ್ನೆಲೆಯಲ್ಲಿ ಪ್ರಯಾಣ, ಪ್ರವಾಸ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ. ಬಿ.ಜೆ.ಪಿ.ಯ ಸಿಂಪಥೈಸರ್‌ ಗಳಾಗಿ ಮಾಧ್ಯಮಗಳಲ್ಲಿ ಕೋಮುವಾದದ ರೋಗ ತುಂಬಿ ಸಂಘದ ಬಕೆಟ್‌ ಹಿಡಿದ ಲಾಭಕೋರ ಮತಾಂಧ ಬಳಗದ ಕುಟಿಲತೆ ಈಗ ಸ್ವಜಾತಿ,ಸ್ವಪರಿವಾರದ ನಾಯಕತ್ವ, ಮುಖಂಡತ್ವಕ್ಕೆ ಎರವಾಗಿರುವುದು ಸಾರ್ವಜನಿಕರ ವಿರೋಧಕ್ಕೂ ಕಾರಣವಾಗಿದೆ ಎನ್ನಲಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *