ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ: ತಜ್ಞರು

ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

Experts predicts early Pre-mansoon rains in Karnataka

ಬೆಂಗಳೂರು: ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ತಜ್ಞರು  ಹೇಳಿದ್ದಾರೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಇದು ಹಲವೆಡೆ ಬೆಳೆ ಹಾನಿಗೂ ಕಾರಣವಾಗಿದೆ. 

ಅಂತೆಯೇ ದೇಶದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿ ಮಾರ್ಚ್‌ 15ರ ತನಕ ಹಗುರವಾದ ಮಳೆಯಾಗಲಿದೆ. ಮಾರ್ಚ್‌ 16ರಿಂದ 22ರ ತನಕ ದೇಶದ ದಕ್ಷಿಣ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

1901ರ ಬಳಿಕ ಕಳೆದ ಫೆಬ್ರುವರಿಯು ಅತ್ಯಂತ ಬಿಸಿಲಿನಿಂದ ಕೂಡಿತ್ತು. ಈ ರೀತಿ ಹವಾಮಾನ ವಾತಾವರಣದಿಂದ ಮುಂಗಾರು ಪೂರ್ವ ಮಳೆ ಅವಧಿಗೂ ಮುನ್ನವೇ ಬರಲಿದೆ. ಸಾಮಾನ್ಯವಾಗಿ ಮುಂಗಾರು ಪೂರ್ವ ಮಾರುತಗಳು ಮಾರ್ಚ್‌ ಮಧ್ಯದಲ್ಲಿ ರಚನೆಯಾಗುತ್ತವೆ. ಈ ವರ್ಷ ಬೇಗ ಸೃಷ್ಟಿಯಾಗಿವೆ. ಹೆಚ್ಚಿರುವ ಉಷ್ಣಾಂಶವು ಇದಕ್ಕೆ ಕಾರಣವಾಗಿದೆ’ ಎಂದು ಸ್ಕೈಮೆಟ್‌ನ ಹವಾಮಾನ ತಜ್ಞ ಮಹೇಶ್‌ ಮಲಾವತ್‌ ಹೇಳಿದ್ದಾರೆ. 

ಮುಂದಿನ 24 ಗಂಟೆಗಳಲ್ಲಿ ದೇಶದ ಹಲವೆಡೆ ಮಳೆ
ಕೊಂಕಣದ ವಿವಿಧ ಪ್ರದೇಶಗಳಲ್ಲಿ ಬಿಸಿಗಾಳಿ ಮುಂದುವರಿದಿದ್ದು, ಮುಂದಿನ 24 ಗಂಟೆಗಳಲ್ಲಿ ಹವಾಮಾನ ಚಟುವಟಿಕೆ ಬಿರುಸುಗೊಳ್ಳುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ, ಪಶ್ಚಿಮ ಹಿಮಾಲಯ, ಉತ್ತರ ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ನೈಋತ್ಯ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದ್ದು, ಅಂತೆಯೇ ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಕೇರಳದ  ಹಲವೆಡೆಯಲ್ಲೂ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ಕೈ ಮೇಟ್ ವರದಿ ಮಾಡಿದೆ.

ಮಾರ್ಚ್ 14 ರಂದು ಆಗ್ನೇಯ ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಈಶಾನ್ಯ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮಿಂಚು ಸಂಭವಿಸಬಹುದು. ಮುಂದಿನ 24 ರಿಂದ 48 ಗಂಟೆಗಳ ಅವಧಿಯಲ್ಲಿ ವಾಯುವ್ಯ ಮಧ್ಯ ಭಾರತದ ಮೇಲೆ ಹಗಲಿನ ತಾಪಮಾನವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕೊಂಕಣದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಬಹುದು ಎಂದು ವರದಿಯಲ್ಲಿ ಉಲ್ಲೇಖಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *