ಬಿಜೆಪಿ ಗೆ ರೈತರ ಸಭೆ ನಡೆಸುವ ಯೋಗ್ಯತೆ ಇಲ್ಲ: ಪ್ರಾಂತ ರೈತ ಸಂಘ

—————————————————–

ಕಾರವಾರ : ಶಿರಸಿಯಲ್ಲಿ ನಾಳೆ ರೈತರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿರುವದು ಅವರ ಯೋಗ್ಯತೆಗೆ ತಕ್ಕುದಲ್ಲ, ರೈತರ ಸಂಕಷ್ಟ ಹೆಚ್ಚಿಸಿದ ಪಕ್ಷ ರೈತ ಸಮಾವೇಶ ನಡೆಸುವದು ಹಾಸ್ಯಾಸ್ಪದ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಶಾಂತಾರಾಮ ನಾಯಕ ಸಮಾವೇಶವನ್ನು ತೀವ್ರವಾಗಿ ಖಂಡಿಸಿದ್ದಾರೆ.

 ಈ ಅವಧಿಯಲ್ಲಿ ದೆಹಲಿಯಲ್ಲಿ ಕೇಂದ್ರ ಸರಕಾರದ ಮೂರು ರೈತ ವಿರೋಧಿ ಕಾನೂನನ್ನು ವಾಪಸ್ಸು ಪಡೆಯಲು ಒಂದು ವರ್ಷಕ್ಕೂ ಮೇಲ್ಪಟ್ಟು ಪ್ರತಿಭಟನೆ ನಡೆಸಬೇಕಾಯಿತು. ಈ ಐತಿಹಾಸಿಕ ಹೋರಾಟದಲ್ಲಿ 715 ಹೆಚ್ಚು ರೈತರು ಹುತಾತ್ಮರಾದರು, ಲಕ್ಷಾಂತರ ರೈತರು 378 ದಿನಗಳು ದೆಹಲಿಯ ಚಳಿ, ಮಳೆ , ಬಿಸಿಲನ್ನು ಲೆಕ್ಕಿಸದೇ ರಾತ್ರಿ ಹಗಲು ಉಗ್ರ ಹೋರಾಟ ಮಾಡಿದಾಗ ಕೇಂದ್ರ ಸರಕಾರ ಮಣಿಯಿತು , ಸ್ವಾತಂತ್ರ್ಯ ಹೋರಾಟದ ನಂತರ ನಡೆದ ಐತಿಹಾಸಿಕ ಚಳವಳಿ ಇದಾಗಿತ್ತು, 

ಈ ಐತಿಹಾಸಿಕ ಹೋರಾಟದ  ಒಪ್ಪಂದದ ಸಂದರ್ಭದಲ್ಲಿ ವಿದ್ಯುತ್ ಖಾಸಗೀಕರಣ ಮಸೂದೆ ಬಗ್ಗೆ ರೈತ ಸಂಘಟನೆಗಳ ಜೊತೆ ಚರ್ಚಿಸಿ ತೀರ್ಮಾನಿಸುವದಾಗಿ ಹೇಳಿದ್ದರು, ಆದರೆ ಕೊಟ್ಟ ಮಾತಿಗೆ ತಪ್ಪಿ ರೈತರ ಸರ್ವನಾಶಕ್ಕೆ ಕಾರಣವಾಗುವ ವಿದ್ಯುತ್ ಮಸೂದೆ ಯನ್ನು ಸಂಸತನಲ್ಲಿ ಸರಕಾರ ಮಂಡಿಸಿದೆ. ಸಂಯುಕ್ತ ಕಿಸಾನ್ ಮೋರ್ಚ ಈ ಮಸೂದೆ ಯನ್ನು ಬಲವಾಗಿ ವಿರೋಧಿಸಿ ಹೋರಾಟ ನಡೆಸುತ್ತಿವೆ. ಕಾನೂನು ಮಾನ್ಯತೆಯೊಂದಿಗೆ ಕೃಷಿ ಉತ್ಪನ್ನ ಗಳಿಗೆ ಬೆಂಬಲ ಬೆಲೆ ನಿಗದಿಯಾಗಬೇಕೆಂದು ರೈತ ಸಂಘಟನೆಗಳು ಒತ್ತಾಯಿಸುತ್ತಿವೆ.

ಇನ್ನೂ ಕರ್ನಾಟಕದಲ್ಲಿ ಯಡಿಯೂರಪ್ಪ ನವರು ಮುಖ್ಯಮಂತ್ರಿ ಆಗಿದ್ದಾದ ಮೂರು ರೈತ ವಿರೋಧಿ ಕಾಯಿದೆ ಜಾರಿಗೊಳಿಸಿದ್ದಾರೆ, ಭೂ ತಿದ್ದುಪಡಿ ಕಾಯ್ದೆ, ಎಪಿಎಮ್ ಸಿ ತಿದ್ದುಪಡಿ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ  ಇವು ವಾಪಸ್ಸಾಗಬೇಕೆಂದು ರೈತ ಸಂಘಟನೆಗಳು ಹೋರಾಟ ನಡೆಸಿವೆ. 

ಇಂತಹ ರೈತ ವಿರೋಧಿ ಕೇಂದ್ರ ಮತ್ತು ರಾಜ್ಯ ಸರಕಾರ ನಡೆಸುವ ಬಿಜೆಪಿ ರೈತರ ಸಮಾವೇಶ ನಡೆಸುವದು ಮಹಾ ವಂಚನೆ ಯಾಗುತ್ತದೆಯೆಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಅಭಿಪ್ರಾಯ ಪಟ್ಟಿದಯೆಂದು ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತಾರಾಮ ನಾಯಕ ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *