ಬಿ.ಜೆ.ಪಿ.ಗೆ ಲಿಂಗಾಯತರ ವಿರೋಧ: ಕಾಂಗ್ರೆಸ್‌,ಜೆ.ಡಿ.ಎಸ್.‌ ಪರ ಸಹಾನುಭೂತಿ!

ಬಿಜೆಪಿ ಮೇಲೆ ನಿರಾಸೆ, ಕಾಂಗ್ರೆಸ್- ಜೆಡಿಎಸ್ ಹೊಸ ಭರವಸೆ: ಲಿಂಗಾಯತ ಸ್ವಾಮೀಜಿಗಳ ವರಸೆ; ಆತಂಕದಲ್ಲಿ ಕೇಸರಿ ಪಾಳಯ!

2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ.

Representational image

ಬೆಂಗಳೂರು: 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ.

ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಜಾಗತಿಕ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವ ದಳದ ಸದಸ್ಯರು ಈ ಬದಲಾವಣೆಗೆ ಕಾರಣರಾಗಿದ್ದಾರೆ, ಸಮುದಾಯದ ನಿಲುವನ್ನು ಸ್ಪಷ್ಟಪಡಿಸಿದ ಪಂಚಮಸಾಲಿ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ನಮ್ಮ ಕೋಪ ಕೇವಲ ಮೀಸಲಾತಿ ವಿಷಯದ ಮೇಲಿದೆ.

ಎರಡು ವರ್ಷ ಕಳೆದರೂ ಬಿಜೆಪಿ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ನಾವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ನಮ್ಮೊಂದಿಗೆ ಮಾತನಾಡಲು ಸರ್ಕಾರಕ್ಕೆ ಸಮಯವಿಲ್ಲ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬಂದು ನಮ್ಮನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪಂಚಮಸಾಲಿಗಳು ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಬಿಜೆಪಿಗೆ ಈ ಬಾರಿ ಲಿಂಗಾಯತ ಸಮುದಾಯ ಬೆಂಬಲ ನೀಡುವಲ್ಲಿ ದೊಡ್ಡ ತೊಡಕುಗಳಿವೆ ಎಂದು ಲಿಂಗಾಯತ ಚಳವಳಿಗಳೊಂದಿಗೆ ಗುರುತಿಸಿಕೊಂಡಿರುವ ಮಾಜಿ ಅಧಿಕಾರಿ ಎಸ್‌ಎಂ ಜಾಮದಾರ್ ಹೇಳಿದ್ದಾರೆ.

‘ಲಿಂಗಾಯತರು ಸಾಮಾನ್ಯವಾಗಿ ಸಮುದಾಯದ ಪರವಾಗಿ ನಿಲ್ಲುವವರನ್ನು ಬೆಂಬಲಿಸುತ್ತಾರೆ. ಆದರೆ ಈ ಬಾರಿ, ಯಡಿಯೂರಪ್ಪ ಅವರು ಸಿಎಂ ಆಗಿ ನಿರ್ಗಮಿಸಿದ ನಂತರ, ವಿಶೇಷವಾಗಿ ಅವರು ಕಣ್ಣೀರು ಸುರಿಸಿದ ನಂತರ ಅದು ತಣ್ಣಗಾದಂತಿದೆ ಎಂದು ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ತಿಳಿಸಿದ್ದಾರೆ.

ನಮ್ಮನ್ನು ವಿರೋಧಿಸುವವರು ಮೂಲತಃ ಕಾಂಗ್ರೆಸ್ ಪರ ಶಕ್ತಿಗಳಾಗಿದ್ದು, ಬಿಜೆಪಿಯಿಂದ ದೂರ ಸರಿಯುತ್ತಿಲ್ಲ. ಲಿಂಗಾಯತರು ಇತರರನ್ನು ನಂಬುವುದಿಲ್ಲವಾದ್ದರಿಂದ ಅವರು ನಮ್ಮನ್ನು ಬೆಂಬಲಿಸುವುದನ್ನು ಮುಂದುವರಿಸುತ್ತಾರೆ ಎಂದು ಬಿಜೆಪಿಯ ಮಾಜಿ ಎಂಎಲ್‌ಸಿ ಗೋ ಮಧುಸೂದನ್ ಅಭಿಪ್ರಾಯ ಪಟ್ಟಿದ್ದಾರೆ.

ಲಿಂಗಾಯತ ಸಮುದಾಯ ಬೆಂಬಲ ಕಡಿಮೆಯಾಗುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಪಂಚಮಸಾಲಿ ಉಪಪಂಗಡ ಸೇರಿದಂತೆ ಹಲವು ಸ್ವಯಂಸೇವಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅವರ ಮನ ಗೆಲ್ಲದಿದ್ದರೇ ಬಿಜೆಪಿ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂದು ರಾಜಕೀಯ ವಿಶ್ಲೇಷಕ ಬಿಎಸ್ ಮೂರ್ತಿ ವಿವರಿಸಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *